ಕಾಸರಗೋಡಿನಲ್ಲಿ ಮಲೆಯಾಳ ಮಸೂದೆಗೆ ವಿರೋಧ: ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಆಗ್ರಹ

ಕಾಸರಗೋಡು: ಜಿಲ್ಲೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ವಿಧಾನಸಭೆ ಇತ್ತೀಚೆಗೆ ಅಂಗೀಕರಿಸಿದ ಮಲೆಯಾಳ ಭಾಷಾ ಕಲಿಕೆ ಕಡ್ಡಾಯ ಮಸೂದೆ, ಕಾಸರಗೋಡಿನ ಕನ್ನಡಿಗರಲ್ಲಿ ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷಿಕರನ್ನು ಮಸೂದೆಯ ವ್ಯಾಪ್ತಿಯಿಂದ ಹೊರತಾಗಿಸಬೇಕು ಎಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ಹಾಗೂ ನ್ಯಾಯವಾದಿ ಕೆ. ಶ್ರೀಕಾಂತ್ ಆಗ್ರಹಿಸಿದ್ದಾರೆ. ಕಾಸರಗೋಡು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಕನ್ನಡಿಗರಿಗೆ ತಮ್ಮ ತಾಯ್ನುಡಿಯಲ್ಲೇ ಶಿಕ್ಷಣ ಪಡೆಯುವ ಹಕ್ಕು ಸಿಗಬೇಕು….

Read More

‘ಮಲೆಯಾಳಿ ಭಾಷಾ ಮಸೂದೆ-2025’ ಜಾರಿಗೆ ಬಂದರೆ ಕನ್ನಡ ಅಸ್ತಿತ್ವಕ್ಕೆ ಕೊಡಲಿ ಏಟು … !

ಗಡಿನಾಡ ಕನ್ನಡಿಗರು ಮತ್ತು ನೆರೆಯ ಕನ್ನಡ ರಾಜ್ಯ ಕರುನಾಡು ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ‘ಮಲೆಯಾಳಿ ಭಾಷಾ ಮಸೂದೆ-2025’ ನ್ನು ಜಾರಿಗೊಳಿಸುವುದನ್ನು ಒಗ್ಗಟ್ಟಾಗಿ ವಿರೋಧಿಸದಿದ್ದರೆ ಕನ್ನಡ ಭಾಷೆಯ ಅಸ್ತಿತ್ವಕ್ಕೆ ದೊಡ್ಡ ಕಂಟಕವೇ ಎದುರಾಗಲಿದೆ . ಕನ್ನಡ ನೆಲವಾಗಿದ್ದ ಕಾಸರಗೋಡು ದುರಂತವಾಗಿ ಕೇರಳಕ್ಕೆ ಸೇರಿದ್ದು , ಇಲ್ಲಿನ ಕನ್ನಡಿಗರು ದಿನ ನಿತ್ಯ ಕಾನೂನು ವೃತ್ತಿಗೆ ಸಮಂಧಿಸಿ ಹತ್ತಾರು ಸಮಸ್ಯೆಯನ್ನು ಎದುರಿಸುತ್ತಿರುವುದು, ನಿನ್ನೆ ಮೊನ್ನೆಯ ಮಾತೇನು ಅಲ್ಲ . ಇದೀಗ ಇಲ್ಲಿನ ಕನ್ನಡ ಶಾಲೆಗಳ ಅಸ್ತಿತ್ವವನ್ನೇ ಬುಡ ಮೇಲು ಮಾಡುವ ಕ್ರಮವನ್ನು…

Read More

ಸಾಹಿತಿ, ಶ್ರೇಷ್ಠ ಸಂಘಟಕ ಶ್ರೀ ಇರಾ ನೇಮು ಪೂಜಾರಿ ಯವರೀಗೆ ಕನ್ನಡ ಭವನದ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ 2026.ಕ್ಕೆ ಆಯ್ಕೆ

ಸಾಹಿತಿ, ಕವಿಯಾಗಿ, ಜನಮೆಚ್ಚಿದ ಸಂಘಟಕರಾಗಿ, ಕೃತಿ ಕರ್ತ ರಾಗಿ ಕನ್ನಡದ ಕಾಯಕವೇ ಉಸಿರಾಗಿರುವ ಮಂಗಳೂರಿನ ಶ್ರೀ ಇರಾ ನೇಮು ಪೂಜಾರಿಯವರೀಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ 18.01.2026ಭಾನುವಾರ ದಂದು ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮ ದಲ್ಲಿ ಕನ್ನಡ ಭವನದ ಗೌರವಾನ್ವಿತ ಪ್ರಶಸ್ತಿಯಾದ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದೆಯೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ…

Read More

ವಿನಯ ಹೆಗ್ಡೆಯವರ ಜೀವನ ಶೈಲಿ ಎಲ್ಲರಿಗೂ ಆದರ್ಶ: ಕೆ ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀ‌ರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್…

Read More

ಶಾಸಕಿ ಭಾಗೀರಥಿ ಮುರುಳ್ಯ ಭಾವಚಿತ್ರ ಅವಹೇಳನ: ಬಿಜೆಪಿ ದ.ಕ. ಜಿಲ್ಲಾ ಘಟಕದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ರವರು ಮಾತನಾಡಿ ಈ ಸರ್ಕಾರದಲ್ಲಿ ಶಾಸಕರಿಗೇ ಭದ್ರತೆ ಇಲ್ಲ. ಇನ್ನು ಜನಸಾಮಾನ್ಯರ ಗತಿ ಏನು? ಕೇವಲ ಬಿಜೆಪಿ ಶಾಸಕರ ಮೇಲೆ, ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಲಾಗಿದೆ. ಕೂಡಲೇ ಪೋಸ್ಟ್ ಹಾಕಿದವನ ಮೇಲೆ ಕೇಸ್ ದಾಖಲಿಸಬೇಕು ಎಂದರು. ಶಾಸಕ ವೇದವ್ಯಾಸ ಕಾಮತ್ ರವರು…

Read More

ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ವಾಹನ: ಸಚಿವರಿಂದ ಚಾಲನೆ

ಮಂಗಳೂರು: ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಅರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯoತ ಒಟ್ಟು 81 ಸಂಚಾರಿ…

Read More

ದನ ಕಳ್ಳತನ ಪ್ರಕರಣ: ವಿಟ್ಲ ಪೊಲೀಸರು ಯುವಕನನ್ನು ದಸ್ತಗಿರಿ

ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್‌ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನ ಆಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್…

Read More

ಮಲಯಾಳಂ ಕಡ್ಡಾಯ ಭಾಷಾ ಮಸೂದೆ ಚರ್ಚೆಯಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ ಖಂಡನಿಯ-ಆದರ್ಶ ಬಿ ಎಂ

ಮಂಜೇಶ್ವರ:ಮಲಯಾಳಂ ಕಡ್ಡಾಯ ಭಾಷಾ ಮಸೂದೆ ಜಾರಿ ಮಾಡಲು ಹೊರಟಿರುವ ಎಡರಂಗ ಸರಕಾರದ ನೀತಿ ಭಾಷಾ ಅಲ್ಪಸಂಖ್ಯಾಕರ ಮೇಲಿನ ದಬ್ಬಾಳಿಕೆ ಮಾತ್ರವಲ್ಲ ಗಡಿನಾಡು ಭಾಷಾ ಅಲ್ಪಸಂಖ್ಯಾಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯು ಆಗಿದೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು.ಮಲಯಾಳಂ ಕಡ್ಡಾಯ ಮಸೂದೆ ಚರ್ಚೆ ದಿನ ಅಧಿವೇಶನದಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ನಡೆ ಬೇಜವಾಬ್ದಾರಿತನದ ಪರಮಾವಾದಿ ಇದು ಖಂಡನಿಯ..ಮಾತ್ರವಲ್ಲ ಕನ್ನಡ ವಿರೋಧಿ ನೀತಿ ಕೂಡ ಆಗಿದೆ ಎಂದು ಆದರ್ಶ ಬಿ ಎಂ ಶಾಸಕರ ನಡೆಯನ್ನು…

Read More

ವೈಭವದ ಕರಾವಳಿ ಉತ್ಸವ, ಕಂಬಳದ ಅಬ್ಬರದಲ್ಲಿ ಬಡವರು, ದುರ್ಬಲ ಸಮುದಾಯಗಳ ಸಂಕಷ್ಟಗಳನ್ನು ಜಿಲ್ಲಾಡಳಿತ ಕಡೆಗಣಿಸಿದೆ : ಮುನೀರ್ ಕಾಟಿಪಳ್ಳ

ಮನೆ, ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಫಲಾನುಭವಿ ಕೊರಗ ಕುಟುಂಬಗಳಿಂದ 12 ತಾಸುಗಳ ಧರಣಿ.ಕುಡುಪು‌ ಗ್ರಾಮದ ಮಂಗಳಜ್ಯೋತಿಯಲ್ಲಿ‌ ಕೊರಗ ಕುಟುಂಬಗಳಿಗೆ 2018 ರಲ್ಲಿ ನಗರ ಪಾಲಿಕೆ ಮಂಜೂರಾಗಿರುವ ಮನೆ ನಿವೇಶನ ಹಸ್ತಾಂತರಿಸದೆ ಸತಾಯಿಸುತ್ತಿರುವ ಮಂಗಳೂರು ನಗರ ಪಾಲಿಕೆ ಹಾಗು ಜಿಲ್ಲಾಡಳಿತದ ಅಮಾನವೀಯ ಧೋರಣೆಯನ್ನು ಖಂಡಿಸಿ, ತಕ್ಷಣವೆ ನಿವೇಶನ ಸ್ವಾಧೀನ ನೀಡುವಂತೆ ಆಗ್ರಹಿಸಿ ಫಲಾನುಭವಿ ಕುಟುಂಬಗಳು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಮಂಗಳೂರು ನಗರ ಪಾಲಿಕೆ ಕಚೇರಿ ಮುಂಭಾಗ 12 ತಾಸುಗಳ ಧರಣಿ ಸತ್ಯಾಗ್ರಹ ನಡೆಸಿದರು. ಧರಣಿಯನ್ನು…

Read More

ಪ್ರಸಿದ್ಧ ನಿರೂಪಕಿ, ಮಾಧ್ಯಮ ಕ್ಷೇತ್ರದ ಮಿನುಗುತಾರೆ, ಬಹುಮುಖ ಪ್ರತಿಭೆ ಡಾ. ಪ್ರಿಯಾ ಹರೀಶ್ ರೀಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಕ್ಕೆ ಆಯ್ಕೆ.

ಪ್ರಸಿದ್ಧ ನಿರೂಪಕಿ, ಮಾಧ್ಯಮ ಕ್ಷೇತ್ರದ ಮಿನುಗುತಾರೆ, ಬಹುಮುಖ ಪ್ರತಿಭೆ ಡಾ. ಪ್ರಿಯಾ ಹರೀಶ್ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More
error: Content is protected !!