Headlines

ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡರಿಂದ SIR ನಮೂನೆ ಭರ್ತಿ ಹೆಲ್ಪ್ ಡೆಸ್ಕ್‌ಗಳಿಗೆ ಭೇಟಿ – ಪ್ರಗತಿ ಪರಿಶೀಲನೆ

ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಎಂ.ಎಸ್. ಮಹಮ್ಮದ್ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಕೊಳ್ನಾಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಸಾಲೆತ್ತೂರು, ಕೊಳ್ನಾಡು ಹಾಗೂ ಮಂಚಿ ಗ್ರಾಮಗಳಲ್ಲಿರುವ SIR ನಮೂನೆ ಭರ್ತಿ ಹೆಲ್ಪ್ ಡೆಸ್ಕ್ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಹೆಲ್ಪ್ ಡೆಸ್ಕ್‌ಗಳಲ್ಲಿ ನಡೆಯುತ್ತಿರುವ ಕಾರ್ಯವನ್ನು ಅವಲೋಕಿಸಿ, ಕಾರ್ಯಕರ್ತರ ಉತ್ಸಾಹ…

Read More

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್

ಮಂಗಳೂರು: ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು. ಕೇರಳದ ಹಿರಿಯ ಧಾರ್ಮಿಕ ವಿದ್ವಾಂಸರಾಗಿರುವ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಕೆಲವು ದಿನಗಳ ಹಿಂದೆಯೇ ದ.ಕ.ಜಿಲ್ಲಾ ಖಾಝಿಯಾಗಿ…

Read More

ಜು. 16ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ – ‘ಸಮೃದ್ಧಿ CareerNxt-2026’

ಮಂಗಳೂರು:ಕರಾವಳಿ ಭಾಗದ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ತನ್ನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಹಾಗೂ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (KCCI), ಮಂಗಳೂರು ಸಹಯೋಗದಲ್ಲಿ ಜುಲೈ 16ರಂದು “ಸಮೃದ್ಧಿ CareerNxt-2026” ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ನ್ಯಾಯವಾದಿ ವಸಂತ ಕಾರಂದೂರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10ರಿಂದ ಸಂಜೆ…

Read More

ಎಕ್ಕೂರು, ಪಡೀಲು ನಗರ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ಬಜಾಲ್ ವಿಭಾಗ ಸಮಿತಿ ನಿಯೋಗ ಭೇಟಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಜೊತೆ ಮಾಡಿರುವ ಕರಾರು ಒಪ್ಪಂದ ರದ್ದುಗೊಳಿಸಲು, ಸರಕಾರಿ ಆಸ್ಪತ್ರೆಗಳ ಬಲಪಡಿಸಲು, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐಎಂ ಜಿಲ್ಲಾದ್ಯಂತ ಕರೆ ನೀಡಿರುವ ಹೋರಾಟದ ಭಾಗವಾಗಿ ಇಂದು ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನಿಯೋಗವು ಇಂದು ಪಡೀಲು ಮತ್ತು ಎಕ್ಕೂರು ಪ್ರದೇಶದಲ್ಲಿರುವ ಎರಡು ನಗರ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲಿಸಿದೆ. ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ , ಅಳಪೆ…

Read More

ಗೋಮಾತೆಗೆ ರಾಷ್ಟ್ರಮಾತೆ ಸ್ಥಾನಮಾನಕ್ಕೆ ಆಗ್ರಹ: ಜು.27ರಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಸೇವೆಗಾಗಿ ಕೇಂದ್ರ ಕಾನೂನು ಜಾರಿಗೊಳಿಸಿ, ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಮಟ್ಟದ ನಾಲ್ಕು ಹಂತದ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಆಚಾರ್ಯರು, ಸಾಧು–ಸಂತರು, ಗೋಸೇವಾ ಸಂಸ್ಥೆಗಳು, ಗೋಪಾಲಕರು ಹಾಗೂ ಗೋಭಕ್ತರ ಸಹಭಾಗಿತ್ವದಲ್ಲಿ ಈ…

Read More

ಜು. 15ರಂದು ಅಭಿಸರಣ್ ಆಕ್ವೇಟಿಕ್ ಸೆಂಟರ್ ಲೋಕಾರ್ಪಣೆ

ಮಂಗಳೂರು, ಜು. 13: ನಗರದ ಬಂಗ್ರ ಕೂಳೂರು ಸಮೀಪ ತ್ರಿಶಾ ಕಾಲೇಜು ಬಳಿಯ ಕೊಟ್ಟಾರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಭಿಸರಣ್ ಆಕ್ವೇಟಿಕ್ ಸೆಂಟರ್‌ನ ಲೋಕಾರ್ಪಣೆ ಸಮಾರಂಭ ಜುಲೈ 15ರಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯ ತರಬೇತುದಾರ ಸಂಕೇತ್ ಬೆಂಗ್ರೆ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭವನ್ನು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಯಾಗಿ ಒಲಿಂಪಿಕ್ ಈಜುಪಟು ಶಿವಾನಿ…

Read More

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಬೆಂಬಲ: ಇದು ರಾಜ್ಯದ ಹೆಮ್ಮೆಯ ಕ್ರೀಡೆ – ದೇವಿಪ್ರಸಾದ್ ಶೆಟ್ಟಿ

ಉಡುಪಿ:ಮೈಸೂರು ದಸರಾ ಉತ್ಸವದಲ್ಲಿ ಕಂಬಳ ಆಯೋಜನೆಗೆ ವ್ಯಕ್ತವಾಗಿರುವ ವಿರೋಧದ ನಡುವೆ, ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕಂಬಳದ ಪರವಾಗಿ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದು, “ದಸರಾ ರಾಜ್ಯದ ನಾಡಹಬ್ಬ. ಅಂತಹ ನಾಡಹಬ್ಬದಲ್ಲಿ ಕಂಬಳ ಆಯೋಜಿಸಿದರೆ ತಪ್ಪೇನಿಲ್ಲ. ಇದು ರಾಜ್ಯದ ಘನತೆ ಮತ್ತು ಗೌರವವನ್ನು ಹೆಚ್ಚಿಸುವ ಸಾಂಪ್ರದಾಯಿಕ ಕ್ರೀಡೆ” ಎಂದು ಹೇಳಿದ್ದಾರೆ. ಕರಾವಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳಕ್ಕೆ ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ಕ್ರೀಡೆಯ ಮಾನ್ಯತೆ ನೀಡಿದ್ದು, ರಾಜ್ಯ ಕಂಬಳ ಅಸೋಸಿಯೇಷನ್ ಕೂಡ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ…

Read More

ಮಣಿಪಾಲ: ಈಶ್ವರ ನಗರದ ಕುಡಿಯುವ ನೀರಿನ ಘಟಕಕ್ಕೆ ನುಗ್ಗಿದ ಕಾರು : ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ. ಮಣಿಪಾಲದಿಂದ ಆತ್ರಾಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 169A ಮೂಲಕ ಸಾಗುತ್ತಿದ್ದ ಕಾರು ದಾರಿ ತಪ್ಪಿ ಹೆದ್ದಾರಿಯಿಂದ ಹೊರಬಂದು ನೇರವಾಗಿ ಕುಡಿಯುವ ನೀರಿನ ಘಟಕದೊಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಏರ್‌ಬ್ಯಾಗ್‌ಗಳು ತೆರೆದಿದ್ದು, ಕಾರಿನಲ್ಲಿದ್ದವರಿಗೆ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ಸ್ಥಳೀಯರ ಪ್ರಕಾರ, ಇದೇ ಸ್ಥಳದಲ್ಲಿ ಪದೇ…

Read More

ನಾಲ್ಕು ತಿಂಗಳ ದಾಂಪತ್ಯಕ್ಕೆ ದುರಂತ ತೆರೆ; ಪತ್ನಿಯ ಬಳಿಕ ಪತಿಯೂ ಮೃತ

ಆಲಪ್ಪುಳ:ಬದುಕಿನ ಹೊಸ ಕನಸುಗಳನ್ನು ಹೊತ್ತು ನಾಲ್ಕು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವ ದಂಪತಿಯ ಬದುಕು ದುರಂತ ಅಂತ್ಯ ಕಂಡಿದೆ. ಮೂರು ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆ ಸುದ್ದಿ ತಿಳಿದು ಸ್ವದೇಶಕ್ಕೆ ಹೊರಟಿದ್ದ ಪತಿ ಬೆಂಗಳೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ತೀವ್ರ ವಿಷಾದ ಮೂಡಿಸಿದೆ. ಮೃತರನ್ನು ಎಡತ್ತ ಕೊಡುಪುನ್ನ ನಿವಾಸಿ ಪಿ.ಎಸ್. ಸನುಕ್ಕುಟ್ಟನ್ (30) ಎಂದು ಗುರುತಿಸಲಾಗಿದೆ. ಅವರ ಪತ್ನಿ ಹರೀಷ್ಮಾ (27)…

Read More

ಜು. 16ರಂದು ಮಂಗಳೂರಿನಲ್ಲಿ ಇಸ್ಕಾನ್ ವತಿಯಿಂದ ಶ್ರೀ ಜಗನ್ನಾಥ ರಥಯಾತ್ರೆ …. !

ಮಂಗಳೂರು:ವಿಶ್ವಪ್ರಸಿದ್ಧ ಶ್ರೀ ಜಗನ್ನಾಥ ರಥಯಾತ್ರೆ ಉತ್ಸವದ ಅಂಗವಾಗಿ ಮಂಗಳೂರಿನ ಕುಡುಪು ಕಟ್ಟೆಯ ಇಸ್ಕಾನ್ ಶ್ರೀ ಜಗನ್ನಾಥ ಮಂದಿರದ ಆಶ್ರಯದಲ್ಲಿ ಜುಲೈ 16ರಂದು (ಗುರುವಾರ) ಶ್ರೀ ಜಗನ್ನಾಥ ರಥಯಾತ್ರೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಪ್ರೇಮ ಭಕ್ತಿ ದಾಸ್ ತಿಳಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಕಾನ್ ಸಂಸ್ಥಾಪಕ ಆಚಾರ್ಯರಾದ ಶ್ರೀಲ ಪ್ರಭುಪಾದರ ಪ್ರೇರಣೆಯಿಂದ ವಿಶ್ವದ ನ್ಯೂಯಾರ್ಕ್, ಲಂಡನ್, ಮಾಂಟ್ರಿಯಲ್, ಲಾಸ್ ಏಂಜಲೀಸ್, ಮೆಲ್ಬೋರ್ನ್ ಸೇರಿದಂತೆ ಭಾರತದ ನವದೆಹಲಿ, ಮುಂಬೈ, ಕೋಲ್ಕತ್ತಾ,…

Read More
error: Content is protected !!