Headlines

ವಿದ್ಯಾರ್ಥಿಗಳ ಗುಂಪಿನಿಂದ 9ನೇ ತರಗತಿಯ ವಿದ್ಯಾರ್ಥಿಗೆ ಥಳಿತ -ವಿದ್ಯಾರ್ಥಿಗೆ ಗಂಭೀರ ಗಾಯ

ಮಂಜೇಶ್ವರ : ವಿದ್ಯಾರ್ಥಿಗಳ ಗುಂಪೊಂದು 9ನೇ ತರಗತಿಯ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆಗೈದು ಗಂಭೀರ ಗಾಯಗೊಳಿಸಿದೆ.ಉಪ್ಪಳ ಹೈಯರ್ ಸೆಕಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಡಂಬಾರ್ ಮೊರತ್ತಣೆ ನಿವಾಸಿ ಮೊಹಮ್ಮದ್ ನಿಶಾದ್ (14) ಗಂಭೀರ ಹಲ್ಲೆಗೊಳಗಾದ ವಿದ್ಯಾರ್ಥಿ.ಹಲ್ಲೆಯಿಂದ ತಲೆ, ಮೂಗು, ಕಣ್ಣು ಹಾಗೂ ಶರೀರದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡ ನಿಶಾದ್ ನನ್ನು ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರ ಸಂಜೆ ಶಾಲೆ ಬಿಟ್ಟು ಹೊರಗೆ ಬರುತಿದ್ದಂತೆಯೇ ವಿದ್ಯಾರ್ಥಿಗಳ ತಂಡವೊಂದು ಆಕ್ರಮಿಸಿರುವುದಾಗಿ ದೂರಲಾಗಿದೆ.ಈ ಶಾಲೆಯಲ್ಲಿ ಆಗಾಗ ಇಂತಹ ಘಟನೆಗಳು…

Read More

ಜನಹೃದಯಗಳಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಮರ- ಸೋಮಶೇಖರ್

ಹಿರಿಯರು ಸರ್ವಸ್ವವನ್ನೂ ತ್ಯಾಗ ಮಾಡಿ ಕಟ್ಟಿ ಬೆಳೆಸಿದ ಕಾಂಗ್ರೆಸ್ ಎಂದೆಂದಿಗೂ ಜನಹೃದಯಗಳಲ್ಲಿ ಜೀವಂತವಾಗಿರುತ್ತದೆ. ಪ್ರತಿಯೋರ್ವ ಭಾರತೀಯನ ಧಮನಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್. ಹೇಳಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಹದಿಮೂರನೇ ಮಲಂದೂರು ವಾರ್ಡ್ ಕಾಂಗ್ರೆಸ್ ರೂಪೀಕರಣ ಸಭೆ ಹಾಗೂ ಮಹಾತ್ಮಾ ಗಾಂಧಿ ಕುಟುಂಬ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಮುಖ್ಯ ಭಾಷಣ ಮಾಡಿದರು.ಶ್ರೀ ಇಬ್ರಾಹಿಂ…

Read More

ನಾಗರಿಕ ಕ್ರಿಯಾ ಸಮಿತಿ ಹಾಗೂ ವ್ಯಾಪಾರಿ ವ್ಯವಸಾಯಿ ಸಮನ್ವಯ ಸಮಿತಿ ಜಂಟಿಯಾಗಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಪ್ರತಿಭಟನಾ ಮಾರ್ಚ್

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಟೋಲ್ ಪ್ಲಾಝಾಕ್ಕೆ ದಿನದಿಂದ ದಿನಕ್ಕೆ ಅಧಿಕಾರಸ್ಕರ ನಿಲುವಿನ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ಸೋಮವಾರದಂದು ನಾಗರಿಕ ಕ್ರಿಯಾ ಸಮಿತಿ ಹಾಗೂ ವ್ಯಾಪಾರಿ ವ್ಯವಸಾಯಿ ಸಮನ್ವಯ ಸಮಿತಿ ಜಂಟಿಯಾಗಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಪ್ರತಿಭಟನಾ ಮಾರ್ಚ್ ನಡೆಸಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆ ಸೃಷ್ಟಿಸಿ, ಅನುಮತಿ ರಹಿತ ಪ್ರತಿಭಟನಾ ಮಾರ್ಚ್ ನಡೆಸಿದ 10ಮಂದಿ ಕ್ರಿಯಾ ಸಮಿತಿ ಕಾರ್ಯಕರ್ತರ ವಿರುದ್ಧ ಕುಂಬಳೆ ಪೋಲೀಸರು ಕೇಸು ದಾಖಲಿಸಿದ್ದಾರೆ.ಕುಂಬಳೆ ಪೇಟೆಯಿಂದ ಆರಿಕ್ಕಾಡಿ ಕಡವತ್ ಗೆ ನಡೆದ…

Read More

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಎಡರಂಗ ಸರ್ವ ಪತನ- ಕಾಂಗ್ರೆಸ್

ಈ ವರ್ಷದ ಅಂತ್ಯದೊಳಗೆ ನಡೆಯಲಿರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಭ್ರಷ್ಟ ಹಾಗೂ ವಚನಭ್ರಷ್ಟ ಎಡರಂಗದ ಅಂತ್ಯವಾಗಲಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಕಾಂಗ್ರೆಸ್ ನ ಗೃಹ ಸಂದರ್ಶನ ಕಾರ್ಯಕ್ರಮದ ಹಿನ್ನಲೆಯಲ್ಲಿ ನಡೆದ ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಬಾಬು ಬಂದ್ಯೋಡು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ನೇತಾರರಾದ ಶ್ರೀ ಫಾರೂಕ್ ಶಿರಿಯ, ಬರ್ನಾರ್ಡ್ ಡಿ’ಅಲ್ಮೇಡಾ, ಅಶ್ರಫ್ ಮುಟ್ಟಂ, ರಾಜೇಶ್ ನಾಯ್ಕ್, ಬಾಬು ಇಚ್ಲಂಗೋಡು, ಬಶೀರ್…

Read More

ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 5ನೇ ಕಾರ್ಯಕ್ರಮ,ಭಾಷೆಯಿಂದ ಸಾಹಿತ್ಯ, ಸಾಹಿತ್ಯದಿಂದ ಸಂಸ್ಕಾರ – ವಿ.ಬಿ ಕುಳಮರ್ವ

ಕಾಸರಗೋಡು :’ ನಾವು ಹೆಚ್ಚು ಹೆಚ್ಚು ಭಾಷೆಗಳನ್ನು ಕಲಿಯುವ ಕಾರಣ ಅನೇಕ ಸಂಸ್ಕೃತಿಯ ಪರಿಚಯವಾಗುತ್ತದೆ. ಭಾಷೆಯುಂದ ಸಾಹಿತ್ಯ ಬೆಳಗುತ್ತದೆ. ಸಾಹಿತ್ಯದಿಂದ ಸಂಸ್ಕಾರ ದೊರೆಯುತ್ತದೆ. ಕನ್ನಡ ಸಾಹಿತ್ಯ ಸರಸ್ವತಿಯ ಸೇವೆ ನಿರಂತರವಾಗಬೇಕು ‘ ಎಂದು ನಿವೃತ್ತ ಶಿಕ್ಷಕ ವಿ. ಬಿ. ಕುಳಮರ್ವ ಹೇಳಿದರು. ಅವರು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಶನಿವಾರ ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ ‘ಕನ್ನಡದ ನಡಿಗೆ…

Read More

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ…

Read More

ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ವಿಜ್ಞಾಪನ ಪತ್ರ ಬಿಡುಗಡೆ.

ಕುಂಬಳೆ : ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ಇಲ್ಲಿನ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಮತ್ತು ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷ ಪಿ .ಪಾಲಾಕ್ಷ ರೈ ಉಧ್ಘಾಟಿಸಿದರು.ಬಾಕುಡ ಸಮುದಾಯದ 18 ದೈವಸ್ಥಾನದ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ದೀಪ ಪ್ರಜ್ವಲನೆ ಮಾಡಿದರು. ಮುಗು ಶ್ರೀ ಸುಬ್ರಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ…

Read More

ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಸಂಸ್ಮರಣಾ ಕಾರ್ಯಕ್ರಮ.

ಮಂಜೇಶ್ವರ: ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರದಂದು ಎಸ್ ನಾರಾಯಣ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಬಾಯಾರು ಹೆದ್ದಾರಿ ಶಾಲಾ ಸಭಾಂಗಣದಲ್ಲಿ ಜರುಗಿತು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಅಧ್ಯಕ್ಷರಾದ ಶ್ರೀಮತಿ ಶ್ರೀ ಕುಮಾರಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗಳಾದ ಶ್ರೀ ಶ್ರೀರಾಮ ಪದಕಣ್ಣಾಯ ಅವರು ಸಂಸ್ಮರಣಾ ಭಾಷಣವನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಭಟ್ ಪೆಲತ್ತಡ್ಕ, ಗ್ರಂಥಾಲಯದ ಉಪಾಧ್ಯಕ್ಷರಾದ ಶ್ರೀ…

Read More

ಕಾಸರಗೋಡು:ಎಸ್.ನಾರಾಯಣ ಭಟ್ ಸಂಸ್ಮರಣೆ.

ರಾಜ್ಯ ಲೈಬ್ರರಿ ಕೌನ್ಸಿಲ್ ಮಾಜಿ ಸದಸ್ಯರಾಗಿ, ಕೆಎಸ್ ಟಿಎ ರಾಜ್ಯ ಸಮಿತಿ ಸದಸ್ಯರಾಗಿ, ಸೇವಾ ಪಿಂಚಣಿದಾರರ ಸಂಘದ ರಾಜ್ಯ ನಾಯಕರಾಗಿ, ತುಳು ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಶ್ರೀ ಎಸ್ ನಾರಾಯಣ ಭಟ್ ಅವರನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ವತಿಯಿಂದ ಸಂಸ್ಕರಣೆ ನಡೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಶ್ರೀ ಎನ್. ಎ. ನೆಲ್ಲಿಕುನ್ನು ಅವರು ಶ್ರೀಯುತರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಡ್ವ. ಪಿ ಅಪ್ಪುಕುಟ್ಟನ್ ಅಧ್ಯಕ್ಷತೆ…

Read More

ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವು.

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ಸೋಂಕಾಲು ಪ್ರತಾಪ ನಗರ ನಿವಾಸಿ ನವೀನ (53) ಸಾವನ್ನಪ್ಪಿದ ದುರ್ದೈವಿ. ಶನಿವಾರ ರಾತ್ರಿ ಕುಂಬಳೆಯಲ್ಲಿ ಕೆಲಸ ಮುಗಿಸಿ ಮನೆಯ ಕಡೆ ಹಿಂತಿರುಗುತ್ತಿರುವ ಮಧ್ಯೆ ಕುಂಬಳೆ ಗೋಪಾಲಕೃಷ್ಣ ಕ್ಷೇತ್ರ ಸಮೀಪದ ಷಟ್ಪದ ರಸ್ತೆಯಲ್ಲಿ ಎದುರು ಭಾಗದಿಂದ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಹೊಡೆತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡ…

Read More
error: Content is protected !!