ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಕಾಂಗ್ರೆಸ್ ಸರಕಾರದಿಂದ ಪ್ರಬಲ ಹೋರಾಟ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು:ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು ‘ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025’ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬೊಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ…

Read More

ಮಂಜೇಶ್ವರ ಒಳಪೇಟೆ: ರೈಲ್ವೇ ನಿಲ್ದಾಣ ಮಾರ್ಗದಲ್ಲಿ ಶೌಚಾಲಯದ ಕೊಳಕು ನೀರು ಹರಿದು ದುರ್ಗಂಧ; ಸಾಂಕ್ರಾಮಿಕ ರೋಗ ಭೀತಿ

ಮಂಜೇಶ್ವರ : ಮಂಜೇಶ್ವರ ಒಳ ಪೇಟೆಯ ರೈಲ್ವೇ ನಿಲ್ದಾಣಕ್ಕೆ ಸಾಗುವ ಹಾಗೂ ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿರುವ ಶೆಡ್ ಪಕ್ಕದಲ್ಲೇ ವಾಣಿಜ್ಯ ವಸತಿ ಸಮುಚ್ಚಯಗಳಿಂದ ಹರಿದು ಬರುತ್ತಿರುವ ಶೌಚಾಲಯದ ಕೊಳಕು ನೀರು ಕಟ್ಟಿ ನಿಂತಿದ್ದು ಇದರ ದುರ್ಗಂಧದಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆದಾಡ ಬೇಕಾದ ದುಸ್ಥಿತಿ ಎದುರಾಗಿರುವುದಾಗಿ ಸ್ಥಳೀಯರು ಆರೋಪಿಸುತಿದ್ದಾರೆ. ಇಲ್ಲಿಗೆ ಸಮೀಪವೇ ಇರುವ ವಾಣಿಜ್ಯ ವಸತಿ ಸಮುಚ್ಚಯಗಳಲ್ಲಿ ಕೊಳಕು ನೀರು ಶೇಖರಣೆ ಮಾಡುವ ವ್ಯವಸ್ಥೆಯನ್ನು ಕಲ್ಪಿಸದೆ ಬೇಕಾಬಿಟ್ಟಿಯಾಗಿ ಈ ದುರ್ಗಂಧದ ನೀರನ್ನು ಸಾರ್ವಜನಿಕ ಸ್ಥಳಕ್ಕೆ…

Read More

ಪೈವಳಿಕೆ: ಯುಡಿಎಫ್ ಆಡಳಿತದ ಪಂಚಾಯತಿನಲ್ಲಿ ಬಿಜೆಪಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಪದವಿ ದಾನ

ಪೈವಳಿಕೆ: ಪೈವಳಿಕೆ ಗ್ರಾ. ಪಂ. ನ ಸ್ಥಾಯೀ ಸಮಿತಿ ಅಧ್ಯಕ್ಷರುಗಳ ಆಯ್ಕೆಯಲ್ಲಿ ಮುಸ್ಲಿಂ ಲೀಗ್, ಕಾಂಗ್ರೆಸ್ ಪ್ರತಿನಿಧಿಗಳು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿ ಆರಿಸುವ ಮೂಲಕ ಕೋ. ಲಿ. ಬಿ ಮೖತ್ರಿ ಬಹಿರಂಗವಾಗಿ ಬೆಳಕಿಗೆ ಬಂದಿದೆ ಎಂದು ಸಿಪಿಐಎಂ ಆರೋಪಿಸಿದೆ.ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಯುಡಿಎಫ್-9, ಎಡರಂಗ-6, ಬಿಜೆಪಿ-5ಹಾಗೂ 1ಪಕ್ಷೇತರ ಎಂಬಂತೆ ಪೖವಳಿಕೆಯಲ್ಲಿ ಬಲಾಬಲವಿದೆ. ಇದರಂತೆ ಯುಡಿಎಫ್ ಆಡಳಿತ ನಡೆಸುವ ಪಂಚಾಯತಿನಲ್ಲಿ ಎರಡು ಪ್ರಮುಖ ಸ್ಥಾಯೀ ಸಮಿತಿ ಅಧ್ಯಕ್ಷ ಹುದ್ದೆಗಳನ್ನು ಬಿಜೆಪಿಗೆ ಯುಡಿಎಫ್ ದಾನ ಮಾಡಿದ್ದು, ಇದು…

Read More

ಉತ್ತರ ಕನ್ನಡ ಜಿಲ್ಲೆಯ ಭಾವಕವಿ ಲೇಖಕ, ಗಾಯಕ ಉಮೇಶ್ ಮುಂಡಳ್ಳಿ, ರೀಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ.

ಉತ್ತರ ಕನ್ನಡ ಜಿಲ್ಲೆಯ ಭಾವಕವಿ ಲೇಖಕ, ಗಾಯಕ ಉಮೇಶ್ ಮುಂಡಳ್ಳಿ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಪೋಸ್ಟ್ ವಿಚಾರದಲ್ಲಿ ದುಷ್ಕರ್ಮಿಗಳನ್ನು ಬಂಧಿಸಬೇಕು:ಬಿಜೆಪಿ ಆಗ್ರಹ

ಮಂಗಳೂರು :ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಪೋಸ್ಟ್ ವಿಚಾರದಲ್ಲಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.ಈ ವಿದ್ಯಮಾನವನ್ನು ಕಟುವಾಗಿ ಖಂಡಿಸಿರುವ ಶಾಸಕ ವೇದವ್ಯಾಸ್ ಕಾಮತ್ ಖಂಡನೆ ಪೋಸ್ಟ್ ಮಾಡಿದವನನ್ನ ಬಂಧಿಸಲು ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ವಿಕೃತಿಯ ಮನಸಿನ ವ್ಯಕ್ತಿ ಶಾಸಕಿಗೆ ಅವಮಾನ ಮಾಡಿದ್ದಾನೆ.ಪರಿಶಿಷ್ಟ ಜಾತಿಗೆ ಸೇರಿದ ಒಂದು ಮಹಿಳೆಗೆ ಈ ರೀತಿ ಮಾಡಿರುವುದನ್ನು ಸಮಾಜ ಒಪ್ಪುವುದಿಲ್ಲ ಎಂದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಗೌರವ ಕೊಡುತೇವೆ ಎನ್ನುತ್ತಾರೆ. ಇವತ್ತು…

Read More

50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ; ಶಾಸಕ ವೇದವ್ಯಾಸ್ ಕಾಮತ್ ನೇತೃತ್ವ

ಮ.ನ.ಪಾ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಪಡೀಲ್ ಕುಂದರ್ ಕುಟುಂಬಸ್ಥರ ದೈವಸ್ಥಾನ ಬಳಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.ಈ ವೇಳೆ ಮಾತನಾಡಿದ ಶಾಸಕರು ಇಲ್ಲಿ ತುರ್ತು ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ರೀತಿಯಲ್ಲೂ ವಿಶೇಷ ಸಹಕಾರ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಪ್ರವೀಣ್ ನಿಡ್ಡೇಲ್, ಭಾಸ್ಕರ್…

Read More

ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು

ಮಂಗಳೂರು :ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಲಾಗಿದೆ.ದ‌ಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಛಾ ಈ ಬಗ್ಗೆ ಎಸ್ಪಿ ಡಾ.ಅರುಣ್ ಅವರಿಗೆ ದೂರು ನೀಡಿದೆ. ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಯುವಕನೋರ್ವನ ಹೆಸರಿನಲ್ಲಿ ಶ್ರದ್ಧಾಂಜಲಿ ಪೋಸ್ಟ್ ಮಾಡಲಾಗಿತ್ತು. ‘ಬಿಲ್ಲವ ಸಂದೇಶ್’ ಎಂಬ ಫೇಸ್ ಬುಕ್ ಖಾತೆಯಲ್ಲಿ ಮಾಡಲಾದ ಪೋಸ್ಟ್ ನಲ್ಲಿ ‘ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ…

Read More

ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ: ದೈವದ ಬಗ್ಗೆ ರೀಲ್ಸ್ ಅಲ್ಲ -ಸುಧೀರ್ ಅತ್ತಾವರ್

ಮಂಗಳೂರು: ಹೊಸವರ್ಷದ ಶುಭಾರಂಭದಂದು ‘ಸಾಂಗ್ಸ್ ಪ್ರೀಮಿಯರ್’ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ ಇನ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾವು ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದ್ದೆವೆಯೇ ಹೊರತು, ತ್ರಿವಿಕ್ರಮ ಸಪಲ್ಯ ನಿರ್ಮಾಣ ದಲ್ಲಿರುವ “ಕೊರಗಜ್ಜ” ಚಿತ್ರದ…

Read More

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯ ಮಾಡುವುದು ಭಾಷಾ ಸ್ವಾತಂತ್ರ್ಯದ ಮೇಲಿನ ದಾಳಿ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಕೇರಳದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಲು ಕೇರಳ ಸರ್ಕಾರ ಹುನ್ನಾರ ನಡೆಸುತ್ತಿದ್ದು ಇದೀಗ . ‘ಮಲೆಯಾಳಿ ಭಾಷಾ ಮಸೂದೆ-2025’ಯನ್ನು ಪ್ರಸ್ತಾಪಿಸಿದೆ. ಈ ಮಸೂದೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ‌ ವಿಜಯನ್ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. “ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವುದು ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ…

Read More

ನಾಡಿನ ಹೆಮ್ಮೆ ಮಂಗಳೂರು ಲಿಟ್ ಫೆಸ್ಟ್:ಜ.10 ಮತ್ತು ಜ.11ರಂದು ಆಯೋಜನೆ; ರಾಜ್ಯಸಭಾ ಸದಸ್ಯೆ ಪದ್ಮಶ್ರೀ ಮೀನಾಕ್ಷಿ ಜೈನ್ ಅವರಿಗೆ ಪ್ರಶಸ್ತಿ

ಮಂಗಳೂರು: ನಾಡಿನ ಹೆಮ್ಮೆ ಮಂಗಳೂರು ಲಿಟ್ ಫೆಸ್ಟ್ ಜ.10 ಮತ್ತು ಜ.11ರಂದು ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಎರಡು ದಿನಗಳ ಕಾಲ ವಿಶಿಷ್ಟವಾಗಿ ನಡೆಯಲಿದೆ. ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮಂಗಳೂರು ಲಿಟ್ ಫೆಸ್ಟ್ ನ 2026ನೇ ಆವೃತ್ತಿಯ ವಿಶೇಷ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರು, ಖ್ಯಾತ ಇತಿಹಾಸಕಾರ್ತಿ, ರಾಜ್ಯಸಭಾ ಸದಸ್ಯರಾದ ಮೀನಾಕ್ಷಿ ಜೈನ್ ಆಯ್ಕೆಯಾಗಿದ್ದಾರೆ. ಜ.10ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕ ಸಂಸ್ಥೆ ಭಾರತ್ ಫೌಂಡೇಷನ್ ತಿಳಿಸಿದೆ. ಭಾರತದ ಪರಿಕಲ್ಪನೆಯನ್ನು…

Read More
error: Content is protected !!