ಹೊಸ ಬಾವಿ ಕಾಮಗಾರಿ ದುರಂತ: 30 ಅಡಿ ಎತ್ತರದಿಂದ ಬಿದ್ದ ಬಕೆಟ್ — ವಲಸೆ ಕಾರ್ಮಿಕ ಸಾವು

ಉಳ್ಳಾಲ: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್ ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಮೂವತ್ತು ಅಡಿ ಎತ್ತರದಿಂದ ತಲೆಯ ಮೇಲೆ ಬಿದ್ದ ಪರಿಣಾಮ ವಲಸೆ ಕಾರ್ಮಿಕನೋರ್ವನು ದಾರುಣ ಮೃತ ಪಟ್ಟ ದುರ್ಘಟನೆ ಶುಕ್ರವಾರ ಸಂಜೆ ಕುತ್ತಾರು ಪದವಿನ ಸಲಾತ್ ನಗರ ಎಂಬಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ ( 30)ಮೃತ ವ್ಯಕ್ತಿ.ಉಳ್ಳಾಲ ತಾಲೂಕಿನ ಕುತ್ತಾರುವಿನ ಸಲಾತ್ ನಗರದ ಖಾಲಿ ಸೈಟೊಂದರಲ್ಲಿ ಹೊಸ ಬಾವಿ…

Read More

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ

ಮಂಗಳೂರು:ಈಶ್ವರನ ಹೂದೋಟ ಎಂದೇ ಪ್ರಸಿದ್ದಿ ಪಡೆದ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಏಪ್ರಿಲ್ 7ರಂದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ಹೇಳಿದರು. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿರುವುದು ವಿಶೇಷವಾಗಿದೆ, (ಗಂಗೆ,…

Read More

ಮಂಗಳೂರು: ಹೊಸ ನಿಯಮಗಳಿಂದ ಇ-ರಿಕ್ಷಾ ಚಾಲಕರು ಸಂಕಷ್ಟದಲ್ಲಿ — ಜಿಲ್ಲಾಡಳಿತಕ್ಕೆ ಸಂಘದ ಮನವಿ

ಮಂಗಳೂರು: ಇತ್ತೀಚಿನ ವರ್ಷಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿಯ ಭಾಗವಾಗಿ ಎಲೆಕ್ಟ್ರಿಕ್ ರಿಕ್ಷಾಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ರಿಕ್ಷಾಗಳಿಗೆ ಪರ್ಯಾಯವಾಗಿ ಇ-ರಿಕ್ಷಾಗಳು ಬೆಳವಣಿಗೆಯ ಹಾದಿಯಲ್ಲಿ ಮುಂದುವರಿದವು.ಆರಂಭಿಕ ಹಂತದಲ್ಲಿ, ಆರ್‌ಟಿಓ ನಿಯಮಗಳ ಪ್ರಕಾರ ಎಲೆಕ್ಟ್ರಿಕ್ ರಿಕ್ಷಾಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಸ್ಥಳೀಯ ಸಂಸ್ಥೆಗಳ ಪರವಾನಿಗೆ (ಪರ್ಮಿಟ್) ಅಗತ್ಯವಿರಲಿಲ್ಲ. ಇದೇ ಹಿನ್ನೆಲೆದಲ್ಲಿ, ವಿಶೇಷವಾಗಿ ಕೊರೋನಾ ಕಾಲದಲ್ಲಿ ಅನೇಕ ಯುವಕರು ಮತ್ತು ಕೆಲ ಮಹಿಳೆಯರೂ ಸಹ ಇ-ರಿಕ್ಷಾಗಳನ್ನು ಖರೀದಿಸಿದ್ದರು ಆದರೆ ಜಿಲ್ಲಾಧಿಕಾರಿಗಳ ಶರತ್ತುಗಳಿಂದ ಇ-ರಿಕ್ಷಾ ಚಾಲಕರು ಸಮಸ್ಯೆಯನ್ನು…

Read More

ಮಂಗಳೂರು ವಿಶ್ವವಿದ್ಯಾನಿಲಯ 44ನೇ ಘಟಿಕೋತ್ಸವ: ಹರೇಕಳ ಹಾಜಬ್ಬ, ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು 44ನೇ ವಾರ್ಷಿಕ ಘಟಿಕೋತ್ಸವ ವಿವಿ ಆವರಣದ ಮಂಗಳ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು, ಅಕ್ಷರ ಸಂತ ಹಾಗೂ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಈ ಸಂದರ್ಭದಲ್ಲಿ ಮಾಡಿದರು. ಇದೇ ವೇಳೆ ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಅವರಿಗೆ ಘೋಷಣೆಯಾಗಿರುವ ಗೌರವ…

Read More

ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳು ಗಡಿಪಾರು

ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮಾ.26 ರಂದು ಗಡಿಪಾರು ಆದೇಶ ಜಾರಿಗೊಳಿಸಿದ್ದಾರೆ.ಶಿರ್ವ ಠಾಣಾ ವ್ಯಾಪ್ತಿಯ ಸೂರ್ಯಗುಡ್ಡೆ, ಕಳತ್ತೂರು ಗ್ರಾಮ ನಿವಾಸಿ ಮಹಮ್ಮದ್ ನೌಫಿಲ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಹಾಗೆ, ಮಲ್ಪೆ ಠಾಣಾ…

Read More

ಕುಂಬಳೆ ಪೆರಾಲ್‌ನಲ್ಲಿ ಕಾಣಿಸಿಕೊಂಡ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಕರೆ ನೀಡುವ ಫ್ಲಕ್ಸ್ ಬೋರ್ಡ್

ವಿಧಾನಸಭಾ ಚುನಾವಣೆ ದಿನಾಂಕ ಹತ್ತಿರ ಬಂದಂತೆ ಮಂಜೇಶ್ವರದಲ್ಲಿ ಹೊಸ ತಿರುವು , ವಿವಾದಗಳು ಸಮಸ್ಯೆಗಳು ಹೊರಬರುತ್ತಿದೆ.ಯುಡಿಎಫ್‌ನ ಶಕ್ತಿ ಕೇಂದ್ರವೆಂದು ಕರೆಯಲ್ಪಡುವ ಕುಂಬಳೆ ಗ್ರಾಮ ಪಂಚಾಯತ್‌ನ ಪೆರಾಲ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಕರೆ ನೀಡುವ ಫ್ಲಕ್ಸ್ ಬೋರ್ಡ್ ಕಾಣಿಸಿಕೊಂಡಿದೆ. ಫ್ಲಕ್ಸ್ ಬೋರ್ಡ್ ನ್ನು ಕಳೆದ ದಿನ ಸ್ಥಾಪಿಸಲಾಗಿದೆ ಎಂದು ತಿಳಿದು ಬಂದಿದೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುನ್ನ ವಾರ್ಡ್ ವಿಭಾಗದಲ್ಲಿ ಪೆರಾಲ್ ವಾರ್ಡ್‌ನಿಂದ ಸುಮಾರು 70 ಮನೆಗಳನ್ನು ಬೇರ್ಪಡಿಸಿರುವುದನ್ನು ವಿರೋಧಿಸಿ ಫ್ಲಕ್ಸ್ ಬೋರ್ಡ್‌ ಮೂಲಕ ಚುನಾವಣೆಯನ್ನು ಬಹಿಷ್ಕರಿಸಲು ಕರೆ…

Read More

ಬದಿಯಡ್ಕ–ಕುಂಬಳೆ ರಸ್ತೆಯಲ್ಲಿ ಕೋಳಿ ತ್ಯಾಜ್ಯ ಕಸ: ಸಾರ್ವಜನಿಕರಿಗೆ ತೀವ್ರ ತೊಂದರೆ

ಬದಿಯಡ್ಕ ಕುಂಬಳೆ ರಸ್ತೆ ಹಾದುಹೋಗುವ ನೈಫ್ ಜಂಕ್ಷನ್‌ ಬಸ್ ಸ್ಟಾಪ್ ಬಳಿ, ಕೋಳಿ ತ್ಯಾಜ್ಯ ಸೇರಿದಂತೆ ದುರ್ವಾಸನೆ ಬೀರುವ ಕಸವನ್ನು ರಸ್ತೆಬದಿಯಲ್ಲಿ ಸುರಿಯಲಾಗಿದ್ದು, ಪ್ರಯಾಣಿಕರು ಮತ್ತು ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಈ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭಯ ಸ್ಥಳೀಯರಲ್ಲಿದೆ. ಸಾಮಾಜಿಕ ಕಾರ್ಯಕರ್ತರಾದ ಹ್ಯಾರಿಸ್ ಬಿಡಿಕೆ, ರಫೀಕ್ ಆರ್‌ಕೆ, ಮುಹಮ್ಮದ್ ಅಲಿ ಪೆರ್ಡಾಲ ಹಾಗೂ ಅಶ್ರಫ್ ಲಿಟಲ್ ಡ್ರೀಮ್ಸ್ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Read More

ಶ್ರೀ ಚೀರುಂಭ ಭಗವತಿ ಕ್ಷೇತ್ರ ಉಳ್ಳಾಲದಲ್ಲಿ ದಕ್ಷಿಣ ದ್ವಾರದ ಶಿಲಾನ್ಯಾಸ ಹಾಗೂ ಉದ್ಘಾಟನಾ ಫಲಕ ಅನಾವರಣ

ಉಳ್ಳಾಲ: ಶ್ರೀ ಚೀರುಂಭ ಭಗವತಿ ಕ್ಷೇತ್ರದ ದಕ್ಷಿಣ ಭಾಗದ ಪ್ರವೇಶ ದ್ವಾರದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ (28-03-2026) ಬೆಳಿಗ್ಗೆ 9:00 ಗಂಟೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಲಾಯಿತು. ಅಸ್ತ್ರಗ್ರೂಪ್‌ನ CEO ಆಗಿರುವ ಶ್ರೀ ಲಂಚುಲಾಲ್ ಕೆ. ಎಸ್ ಅವರ ಕೊಡುಗೆಯಿಂದ ದಕ್ಷಿಣ ದ್ವಾರದ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಶುಭ ಹಾರೈಸಿದರು….

Read More

ಮಂಜೇಶ್ವರದಲ್ಲಿ ಯುಡಿಎಫ್ ಪಂಚಾಯತ್ ಸಮಾವೇಶಗಳು ಪೂರ್ಣ

ಮಂಜೇಶ್ವರದ ಚುನಾವಣಾ ಗೆಲುವಿಗಾಗಿ ಆಯೋಜಿಸಲಾದ ಪಂಚಾಯತ್ ಸಮಾವೇಶಗಳು ಪೂರ್ಣಗೊಂಡಿವೆ. ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರ ಚುನಾವಣೆಯ ಗೆಲುವಿಗಾಗಿ ಆಯೋಜಿಸಲಾದ ಪಂಚಾಯತ್ ಸಮಾವೇಶಗಳು ಪೂರ್ಣಗೊಂಡಿವೆ.ಇದರೊಂದಿಗೆ, ಪ್ರಚಾರವು ಎರಡನೇ ಹಂತವನ್ನು ತಲುಪಿದೆ. ಮಂಜೇಶ್ವರ ಪಂಚಾಯತ್ ಸಮಾವೇಶವನ್ನು ಕರ್ನಾಟಕ ಗೇರು ನಿಗಮದ ಅಧ್ಯಕ್ಷರಾದ ಶ್ರೀಮತಿ ಮಮತಾ ಗಟ್ಟಿ ಉದ್ಘಾಟಿಸಿದರು.ಯುಡಿಎಫ್ ಪಂಚಾಯತ್ ಅಧ್ಯಕ್ಷ ಹಝಿಜ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.ಸಂಚಾಲಕ ಹನೀಫ್ ಪಡಿ0ಜಾರ್ ಸ್ವಾಗತಿಸಿದರು. ಮಂಜುನಾಥ ಆಳ್ವ, ಹಝಿಜ್ ಮೇರಿಕೆ, ಸೋಮ ಶೇಖರ್, ಡಿಎಂಕೆ ಮುಹಮ್ಮದ್, ಲಕ್ಷ್ಮಣ್ ಪ್ರಭು, ಟಿ.ಎ. ಮೂಸಾ, ಎಂ.ಅಬ್ಬಾಸ್,…

Read More

ಫಲ್ಗುಣಿ ನದಿ ಕಲುಷಿತಕ್ಕೆ ಕೈಗಾರಿಕೆ ಕಾರಣವಲ್ಲ: ಕೆನರಾ ಕೈಗಾರಿಕ ಸಂಘ ಸ್ಪಷ್ಟನೆ

ಮಂಗಳೂರು:ಫಲ್ಗುಣಿ ನದಿ ನೀರು ಕಲುಷಿತಗೊಳ್ಳಲು ಕೈಗಾರಿಕೆಗಳು ಕಾರಣ ಎನ್ನುವ ಆರೋಪವನ್ನು ಕೆನರಾ ಕೈಗಾರಿಕ ಸಂಘ ತಳ್ಳಿ ಹಾಕಿದ್ದು, ಕೈಗಾರಿಕ ಪ್ರದೇಶದ ಹಾಗೂ ಪಕ್ಕದ ಪುನರ್ವಸತಿ ಪ್ರದೇಶದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನದಿ ಸೇರುತ್ತಿದೆ ಹೊರತು ಕೈಗಾರಿಕೆಗಳ ಸಂಸ್ಕರಿಸದ ತ್ಯಾಜ್ಯ ನೀರು ಅಲ್ಲ ಎಂದು ಕೈಗಾರಿಕ ಪ್ರತಿನಿಧಿಗಳು ತಿಳಿಸಿದ್ದಾರೆ. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆನರಾ ಕೈಗಾರಿಕ ಸಂಘದ ಉಪಾಧ್ಯಕ್ಷ ಬಿ.ಎ. ಇಕ್ಬಾಲ್ ಅವರು, ಕೈಗಾರಿಕ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಅತ್ಯಗತ್ಯವಾಗಿದೆ. ಆದರೆ ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿ…

Read More
error: Content is protected !!