ಸಿಎಂ ಸಿದ್ದರಾಮಯ್ಯ ಆಡಳಿತದ ಮೇಲೆಯೂ ಸ್ವಲ್ಪ ಹಿಡಿತ ಇಟ್ಟುಕೊಳ್ಳಬೇಕು- ನಟ ಪ್ರಕಾಶ್ ರಾಜ್
ಉಡುಪಿ:ಸಿಎಂ ಸಿದ್ದರಾಮಯ್ಯನವರು ಆಡಳಿತದ ಮೇಲೆಯೂ ಸ್ವಲ್ಪ ಹಿಡಿತ ಇಟ್ಟುಕೊಳ್ಳುವುದು ಒಳ್ಳೆಯದು. ಆಪ್ತ ವಲಯದ ಮೇಲಿನ ಭ್ರಷ್ಟಾಚಾರದ ಆರೋಪಗಳು ಶೋಭೆ ತರುವುದಿಲ್ಲ. ಹೀಗಾಗಿ ಅದೆಲ್ಲವನ್ನು ಸರಿಮಾಡಿಕೊಂಡು ಪಾರದರ್ಶಕವಾದ ಆಡಳಿತ ನೀಡಬೇಕೆನ್ನುವುದು ನನ್ನ ಆಶಯ ಎಂದು ನಟ, ನಿರ್ದೇಶಕ ಪ್ರಕಾಶ್ ರಾಜ್ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜ ಅರಸು ಕಾಲಘಟ್ಟ ಬೇರೆ, ಸಿದ್ದರಾಮಯ್ಯ ಕಾಲಘಟ್ಟ ಬೇರೆಯಾಗಿದೆ. ಸಿದ್ದರಾಮಯ್ಯ ಒಳ್ಳೆಯ ಅಹಿಂದ ನಾಯಕರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ನಾನು ಬರೀ ಹೊಗಳುಭಟ್ಟ ಅಲ್ಲ….