Headlines

ನೇತ್ರಾವತಿ ಲಯನ್ಸ್ ಕ್ಲಬ್‌ಗೆ ನೂತನ ಸಾರಥ್ಯ: ಪದಗ್ರಹಣದೊಂದಿಗೆ ₹3.5 ಲಕ್ಷ ಸೇವಾಕಾರ್ಯಗಳ ಹಸ್ತಾಂತರ

ಮಂಗಳೂರು: ನೇತ್ರಾವತಿ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 6ರಂದು ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜಿಲ್ಲಾ ಮಾಜಿ ಗವರ್ನರ್ (PDG) ಸಂಜಿತ್ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿತು. ಸಮಾರಂಭದಲ್ಲಿ ಡಾ. ವಿದ್ಯಾಧರಿ ಶೆಟ್ಟಿ ಅಧ್ಯಕ್ಷೆಯಾಗಿ, ಲಯನ್ ಶೋಭಾ ಸುಬ್ರಮಣ್ಯ ಕಾರ್ಯದರ್ಶಿಯಾಗಿ ಹಾಗೂ ಲಯನ್ ಸುಪಲಾ ಗೋಪಾಲ್ ಖಜಾಂಜಿಯಾಗಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದ ಅಂಗವಾಗಿ ನೂತನ ಅಧ್ಯಕ್ಷೆ ಡಾ. ವಿದ್ಯಾಧರಿ ಶೆಟ್ಟಿ ಅವರು ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ಹಸ್ತಾಂತರಿಸಿದರು. ಜೊತೆಗೆ ಸುಮಾರು ₹3.5 ಲಕ್ಷ…

Read More

ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್‌ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್‌ಸಿ ಪಿ.ವಿ. ಮೋಹನ್

ಮಂಗಳೂರು: ಮಂಗಳೂರು ನಗರಕ್ಕೆ ರೈಲು ಸಂಪರ್ಕ ಆರಂಭವಾಗಿ ಸುಮಾರು 120 ವರ್ಷಗಳು ಕಳೆದಿವೆ. ದಕ್ಷಿಣ ಭಾರತದ ಪ್ರಮುಖ ರೈಲು ಕೇಂದ್ರಗಳಲ್ಲಿ ಒಂದಾದ ಮಂಗಳೂರು, ಕರಾವಳಿ ಕರ್ನಾಟಕದ ಆರ್ಥಿಕ, ಶೈಕ್ಷಣಿಕ ಹಾಗೂ ವಾಣಿಜ್ಯ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಿದೆ. ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ (ಕಂಕನಾಡಿ) ನಿಲ್ದಾಣಗಳು ಲಕ್ಷಾಂತರ ಜನರ ದೈನಂದಿನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಮಂಗಳೂರು ಜಂಕ್ಷನ್ ಸ್ಥಾಪನೆಯಾಗಿದ್ದಾಗಲೇ ಪಡೀಲ್ ಪ್ರದೇಶದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಪಡೀಲ್ ರೈಲು ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೆ ಹಲವು ದಶಕಗಳು…

Read More

ಮಂಗಳೂರಿನಲ್ಲಿ ‘Mangalore IAS’ ಶುಭಾರಂಭ: ನಾಗರಿಕ ಸೇವಾ ಕನಸಿಗೆ ಹೊಸ ವೇದಿಕೆ

ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ‘Mangalore IAS – A School for Civil Services’ ಸಂಸ್ಥೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷರಾದ ಅತೀ ವಂದನೀಯ ಡಾ. ಹೆನ್ರಿ ಡಿಸೋಜಾ ಅವರು ರಿಬ್ಬನ್ ಕತ್ತರಿಸುವ ಮೂಲಕ ಸಂಸ್ಥೆಯನ್ನು ಉದ್ಘಾಟಿಸಿ ಆಶೀರ್ವದಿಸಿದರು. ಬಳಿಕ ರಾಮಕೃಷ್ಣ ಮಠದ ಸ್ವಾಮಿ ಯುಗಾನಂದ ಅವರು ದೀಪ…

Read More

ಭಾರತದ ಸಂತ ಪರಂಪರೆಯ ಅರಿವು ಯುವಜನರಲ್ಲಿ ಮೂಡಬೇಕು: ಕುಮಾರ್ ಬಿ.ಕೆ.

ಮಂಗಳೂರು: ಭಾರತದ ಭವ್ಯ ಇತಿಹಾಸ ಮತ್ತು ಶ್ರೀಮಂತ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಶ್ರೇಷ್ಠ ರಾಯಭಾರಿಗಳಾಗಿ ನಮ್ಮ ಯುವಜನತೆ ರೂಪುಗೊಳ್ಳಬೇಕು ಎಂದು ಇಂಡಿಯನ್ ಓವರ್ಸೀಸ್ ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕ ಕುಮಾರ್ ಬಿ.ಕೆ. ಕರೆ ನೀಡಿದರು. ಅವರು ಹಿಂದೂ ವಿದ್ಯಾದಾಯಿನಿ ಸಂಘದ ಅಧೀನದ ವಿದ್ಯಾದಾಯಿನಿ ಹೈಸ್ಕೂಲು ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಭಾರತದ ಸಂತ ಪರಂಪರೆ’ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಭಾರತವು ಸಾಂಸ್ಕೃತಿಕವಾಗಿ ವಿಶ್ವದ ಇತರ ರಾಷ್ಟ್ರಗಳಿಗಿಂತ…

Read More

ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಳ್ಳತನ: 10 ಪವನ್ ಚಿನ್ನ ದೋಚಿದ ಕಳ್ಳರು

​ಮಂಜೇಶ್ವರ: ಕುಟುಂಬದವರು ಮಸೀದಿಗೆ ತೆರಳಿದ್ದ ಒಂದು ಗಂಟೆಯ ಅಂತರದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು 10 ಪವನ್ ಚಿನ್ನಾಭರಣಗಳನ್ನು ದೋಚಿರುವ ಘಟನೆ ಪೈವಳಿಕೆ ಪಂಚಾಯತ್‌ನ ಕೈಯಾರಿನಲ್ಲಿ ನಡೆದಿದೆ.​ಪಾಲಕ್ಕಾಡ್ ಮೂಲದ ಹೋಟೆಲ್ ಉದ್ಯಮಿ ಯೂಸುಫ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಭಾನುವಾರ ರಾತ್ರಿ ಯೂಸುಫ್ ಅವರ ಪತ್ನಿ ಮೈಮೂನಾ ಮತ್ತು ಮಕ್ಕಳು ಸ್ಥಳೀಯ ಕೈಯಾರ್ ಮಸೀದಿಯಲ್ಲಿ ನಡೆಯುತ್ತಿದ್ದ ‘ಸ್ವಲಾತ್’ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಕಾರ್ಯಕ್ರಮ ಮುಗಿಸಿ ರಾತ್ರಿ ಎಂಟೂವರೆ ಗಂಟೆ ಸುಮಾರಿಗೆ ಮನೆಗೆ ವಾಪಸಾದಾಗ, ಮನೆಯ ಒಳಭಾಗದಲ್ಲಿ ಅಸ್ತವ್ಯಸ್ತವಾಗಿರುವುದನ್ನು ಕಂಡು…

Read More

ಕಾಸರಗೋಡು ಕಡಲತೀರದಲ್ಲಿ ತಲೆಯಿಲ್ಲದ ಪುರುಷನ ಶವ ಪತ್ತೆ: ಸಾವಿನ ಸುತ್ತ ನಿಗೂಢತೆ

ಕಾಸರಗೋಡು: ಜಿಲ್ಲೆಯ ಕಡಲತೀರದಲ್ಲಿ ತಲೆಯಿಲ್ಲದ ಸ್ಥಿತಿಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೃತದೇಹವು ಸಂಪೂರ್ಣ ವಿರೂಪಗೊಂಡಿದ್ದು, ಮಾಂಸ ಕಳಚಿ ಮೂಳೆಗಳು ಕಾಣಿಸುವಷ್ಟು ಹದಗೆಟ್ಟಿರುವುದರಿಂದ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. ಶನಿವಾರ ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಟೌನ್ ಪೊಲೀಸರು ಮಹಜರು ನಡೆಸಿ, ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಪೊಲೀಸರ ಪ್ರಾಥಮಿಕ ಅಂದಾಜಿನ ಪ್ರಕಾರ, ಮೃತದೇಹಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಹಳೆಯದಾಗಿರಬಹುದು. ಮೂರು ದಿನಗಳೊಳಗೆ ಮೃತನ…

Read More

ಟ್ಯೂಷನ್‌ಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ತಳ್ಳಿ ಗಾಯ: ಕೈ ಮೂಳೆ ಮುರಿದು, ಮಹಿಳೆ ವಿರುದ್ಧ ಜಾಮೀನು ರಹಿತ ಪ್ರಕರಣ

ಮಂಜೇಶ್ವರ: ಕುಂಬಳೆಯಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, ಟ್ಯೂಷನ್‌ಗೆ ತೆರಳುತ್ತಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಮಹಿಳೆಯೊಬ್ಬರು ತಳ್ಳಿದ ಪರಿಣಾಮ ಬಾಲಕಿಯ ಬಲಗೈ ಮೂಳೆ ಮುರಿದಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಕುಂಬಳೆ ಪೊಲೀಸರು ಆರೋಪಿತ ಮಹಿಳೆ ವಿರುದ್ಧ ಜಾಮೀನು ರಹಿತ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ. ಶುಕ್ರವಾರ ಸಂಜೆ ಶಾಲೆ ಮುಗಿಸಿ ಕಣಿಪುರ ದೇವಸ್ಥಾನದ ಸಮೀಪವಿರುವ ಶಿಕ್ಷಕಿಯ ಮನೆಗೆ ಟ್ಯೂಷನ್‌ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ದಾರಿಯಲ್ಲಿ ಬಾಲಕಿಯನ್ನು ತಡೆದ ಮಹಿಳೆ, “ನೀವು…

Read More

ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗೆ ಆಗ್ರಹಿಸಿ ಕೇರಳ ಶಿಕ್ಷಣ ಸಚಿವರಿಗೆ ಮನವಿ

ಕಾಸರಗೋಡು : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಯೋಗವು ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಶೈಕ್ಷಣಿಕ ಹಿತಾಸಕ್ತಿಯನ್ನು ರಕ್ಷಿಸುವಂತೆ ಆಗ್ರಹಿಸಿ ರಾಜ್ಯ ಶಿಕ್ಷಣ ಸಚಿವರು ಹಾಗೂ ಸಾರ್ವಜನಿಕ ಶಿಕ್ಷಣ ಕಾರ್ಯದರ್ಶಿಯವರನ್ನು ಭೇಟಿ ಮಾಡಿತು. ​ನಿಯೋಗವು ‘ಮಲಯಾಳಂ ಭಾಷಾ ಅಧಿನಿಯಮ 2025’ರ ಕಲಂ 6(1)ಕ್ಕೆ ತಿದ್ದುಪಡಿ ತರುವಂತೆ ಬಲವಾಗಿ ಪ್ರತಿಪಾದಿಸಿತು. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯವಾಗಿದ್ದರೂ, ಭಾಷಾ ಅಲ್ಪಸಂಖ್ಯಾತರಿಗೆ ಈ ನಿಬಂಧನೆಯಿಂದ ವಿನಾಯಿತಿ ನೀಡುವ ಸ್ಪಷ್ಟ ತಿದ್ದುಪಡಿಯ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಟ್ಟಿತು….

Read More

ವೆನ್‌ಲಾಕ್‌ಗೆ ರೋಗಿ ಕಳುಹಿಸುವ ಮುನ್ನ ಐಸಿಯು ಬೆಡ್ ಲಭ್ಯತೆ ಖಚಿತಪಡಿಸಿಕೊಳ್ಳಿ : ಡಾ. ಶಿವಪ್ರಕಾಶ್

ಮಂಗಳೂರು:ವೆನ್‌ಲಾಕ್ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಐಸಿಯು ಬೆಡ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ವೆನ್‌ಲಾಕ್ ಆಸ್ಪತ್ರೆಯ ಅಧೀಕ್ಷಕ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಪ್ರಕಾಶ್ ಮನವಿ ಮಾಡಿದರು. ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ವೆಬ್‌ಸೈಟ್‌ನಲ್ಲೂ ಬೆಡ್‌ಗಳ ಲಭ್ಯತೆ ಮಾಹಿತಿ ಪ್ರಕಟಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್‌ಲಾಕ್ ಆಸ್ಪತ್ರೆಗೆ ಕೇರಳ ಸೇರಿದಂತೆ 31 ಜಿಲ್ಲೆಗಳಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ…

Read More

ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ ನಿಧನ; ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ

ಬಂಟ್ವಾಳ: ಉಳ್ಳಾಲ ತಾಲೂಕು ಇರಾ ಕುಂಡಾವು ನಿವಾಸಿ ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ (77) ಅವರು ಜು.10 ರಂದು ನಿಧನ ಹೊಂದಿದರು.ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. 1968 ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಸುಳ್ಯ, ನರಿಂಗಾನ, ಇರಾ, ಸುರಿಬೈಲ್, ಮುದುಂಗಾರುಕಟ್ಟೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾಗಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗಾಗಿ ಅವರು ವಿಶೇಷವಾಗಿ ಶ್ರಮಿಸಿದ್ದರು. ಶಿಸ್ತು ಹಾಗೂ…

Read More
error: Content is protected !!