Headlines

ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ ! ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ

ಉಡುಪಿ: ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್‌ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು. ಕಳೆದ ವರ್ಷದ ಜೂನ್ ತಿಂಗಳಲ್ಲಿ ಸರ್ಕಾರ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಅನ್ನು ರಚಿಸಿತ್ತು. ನಕ್ಸಲ್ ನಿಗ್ರಹಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಎಎನ್‌ಎಫ್ (Anti Naxal Force) ಅಗತ್ಯವಿಲ್ಲ…

Read More

ಡಾ. ಶಾಂತಾ ಪುತ್ತೂರು ಇವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು :ಪುತ್ತೂರಿನ ಬಹುಮುಖ ಪ್ರತಿಭೆ, ಶಿಕ್ಷಕಿ, ಸಾಹಿತಿ, ಸಂಘಟಕಿ ಡಾ. ಶಾಂತಾ ಪುತ್ತೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಗೌರವ…

Read More

ಮಧೂರು ಕ್ಷೇತ್ರಕ್ಕೆ ಅಪಾರ ನಷ್ಟ: ಪಾರಂಪರ್ಯ ಅರ್ಚಕ ವೇಣುಗೋಪಾಲ ಕಲ್ಲೂರಾಯ ನಿಧನ

ಮಧೂರು ಮೇಲಿನ ಮನೆ ನಿವಾಸಿಯಾಗಿದ್ದ ವೇಣುಗೋಪಾಲ ಕಲ್ಲೂರಾಯ ಅವರು ಗುರುವಾರ ರಾತ್ರಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದರು. ಇಂದು ಬೆಳಿಗ್ಗೆ ಅವರ ಅಂತ್ಯಸಂಸ್ಕಾರ ನೆರವೇರಿತು. ಶ್ರೀ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದ ಪಾರಂಪರ್ಯ ಅರ್ಚಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು, ಭಕ್ತರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು. ಅವರು ಶಿವಳ್ಳಿ ಬ್ರಾಹ್ಮಣ ಸಭಾ ಕಾಸರಗೋಡು ವಲಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ ಸಮುದಾಯ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದರು. ನಿವೃತ್ತ…

Read More

ಲ್ಯಾಟರೈಟ್ ಹೆಸರಿನಲ್ಲಿ ಬಾಕ್ಸೈಟ್ ಅಕ್ರಮ ಗಣಿಗಾರಿಕೆ: ಬೆನೆಡಿಕ್ಟ್ ಫೆರ್ನಾಂಡಿಸ್ ಆರೋಪ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಲ್ಯಾಟರೈಟ್ ಗಣಿಗಾರಿಕೆ ಗುತ್ತಿಗೆಯ ಹೆಸರಿನಲ್ಲಿ ಬಾಕ್ಸೈಟ್ (ಅಲ್ಯೂಮಿನಸ್ ಲ್ಯಾಟರೈಟ್) ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಪರಿಸರ ಹೋರಾಟಗಾರ ಬೆನೆಡಿಕ್ಟ್ ಫೆರ್ನಾಂಡಿಸ್ ಆರೋಪಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.30ಕ್ಕಿಂತ ಹೆಚ್ಚು ಅಲ್ಯೂಮಿನಾ ಅಂಶ ಹೊಂದಿರುವ ಖನಿಜವನ್ನು ಲ್ಯಾಟರೈಟ್ ಎಂದು ತೋರಿಸಿ ಗಣಿಗಾರಿಕೆ ನಡೆಸುವುದು ಪ್ರಮುಖ ಖನಿಜಗಳಿಗೆ ಸಂಬಂಧಿಸಿದ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದರು. ಕರ್ನಾಟಕ ಹೈಕೋರ್ಟ್‌ನ WP No.14076/2026 ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ ಅವರು,…

Read More

ಕಾಸರಗೋಡು ಕಡಲತೀರದಲ್ಲಿ ತಲೆ ಇಲ್ಲದ ಶವ ಪತ್ತೆ; ಸ್ಥಳೀಯರಲ್ಲಿ ಆತಂಕ

​ಕಾಸರಗೋಡು: ನಗರದ ಲೈಟ್ ಹೌಸ್ ಬಳಿಯ ಕಡಲತೀರದಲ್ಲಿ ಶನಿವಾರ ಬೆಳಿಗ್ಗೆ ತಲೆ ಇಲ್ಲದ ಮನುಷ್ಯನ ಮೃತದೇಹ ಪತ್ತೆಯಾಗಿದ್ದು, ಭಾರೀ ಸಂಚಲನ ಮೂಡಿಸಿದೆ. ಮೀನುಗಾರರಿಗೆ ಪತ್ತೆಯಾದ ಈ ಶವವು ಸುಮಾರು ಒಂದು ತಿಂಗಳಷ್ಟು ಹಳೆಯದಾಗಿದ್ದು, ಕೊಳೆತ ಸ್ಥಿತಿಯಲ್ಲಿದೆ. ತಲೆ ಭಾಗವು ಶರೀರದಿಂದ ಬೇರ್ಪಟ್ಟಿದ್ದು, ಎಲುಬುಗಳು ಗೋಚರಿಸುತ್ತಿವೆ. ​ಇದು ಆತ್ಮಹತ್ಯೆಯೇ ಅಥವಾ ಯಾರಾದರೂ ಕೃತ್ಯವೆಸಗಿ ಸಮುದ್ರಕ್ಕೆ ಎಸೆದ ಕೊಲೆಯೋ ಎಂಬ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ಈ ನಿಗೂಢ ಮರಣದ ಜಾಡನ್ನು ಹಿಡಿದಿರುವ ಕಾಸರಗೋಡು ನಗರ ಠಾಣಾ ಪೊಲೀಸರು, ಇತ್ತೀಚಿನ ದಿನಗಳಲ್ಲಿ…

Read More

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಜಾರಿಗೆ ವಿ.ಎಸ್. ಉಗ್ರಪ್ಪ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿಯಾಗಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್‌ಸಿಗಳು ಶೇ.17, ಎಸ್‌ಟಿಗಳು ಶೇ.7 ಹಾಗೂ ಒಬಿಸಿಗಳು ಶೇ.42ರಷ್ಟು ಜನಸಂಖ್ಯೆ ಹೊಂದಿದ್ದು, ನಾಲ್ಕೂವರೆ ಕೋಟಿಗೂ ಹೆಚ್ಚು ಜನರ ಹಕ್ಕಿನ ಪ್ರಶ್ನೆಯಿದು ಎಂದು ಹೇಳಿದರು. ಸಂವಿಧಾನದ 340, 341 ಹಾಗೂ 342ನೇ ವಿಧಿಗಳು ಹಿಂದುಳಿದ ವರ್ಗಗಳು, ಎಸ್‌ಸಿ ಹಾಗೂ ಎಸ್‌ಟಿಗಳಿಗೆ ಮೀಸಲಾತಿ ಕಲ್ಪಿಸಲು ಅವಕಾಶ…

Read More

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶಿಗರು ಸೆರೆ

ಮಂಗಳೂರು:ಭಾರತ-ಬಾಂಗ್ಲಾ ಗಡಿ ದಾಟಿ ಮಂಗಳೂರು ಪ್ರವೇಶಿಸಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.ಎಂಟು ಮಂದಿ ಬಾಂಗ್ಲಾದೇಶದ ಪ್ರಜೆಗಳು ಸುರತ್ಕಲ್ ನಲ್ಲಿ ಅಕ್ರಮವಾಗಿ ನೆಲೆಸಿದ್ದರು.ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಪೊಲೀಸರು ದಾಳಿ ಮಾಡಿದ್ದರು.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಇವರು ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಒಟ್ಟು 54 ಮಂದಿ ಕಾರ್ಮಿಕರ ದಾಖಲಾತಿಗಳ ತೀವ್ರ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ ಪತ್ತೆಯಾಗಿದೆ. ಈ ಎಂಟು ಜನ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ…

Read More

ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ : ಬಿಜೆಪಿ ಆಗ್ರಹ

ಮಂಗಳೂರು:ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ನೀತಿ ಅಕ್ರಮ ವಲಸಿಗರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಿ, ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶ ಹೊಂದಿದ್ದು, ಇದು ಸಂವಿಧಾನ ವಿರೋಧಿ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಪಿಆರ್‌ಸಿ ನೀಡುವ…

Read More

ಆಟೋ ದರ ಏರಿಕೆಗೆ ಒತ್ತಾಯ; ಕನಿಷ್ಠ ಬಾಡಿಗೆ ₹50ಕ್ಕೆ ಹೆಚ್ಚಳಕ್ಕೆ ಬೇಡಿಕೆ

ಮಂಗಳೂರು, ಜು.11: ಎಲ್‌ಪಿಜಿ, ಸಿಎನ್‌ಜಿ ಸೇರಿದಂತೆ ಇಂಧನ ದರ ಹಾಗೂ ಬಿಡಿಭಾಗಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಆಟೋರಿಕ್ಷಾ ಚಾಲಕರಿಗೆ ನೆರವಾಗಲು ಕನಿಷ್ಠ ಪ್ರಯಾಣ ದರವನ್ನು ₹35ರಿಂದ ₹50ಕ್ಕೆ, ನಂತರದ ಪ್ರತಿ ಕಿ.ಮೀ. ದರವನ್ನು ₹20ರಿಂದ ₹30ಕ್ಕೆ ಹೆಚ್ಚಳಗೊಳಿಸುವಂತೆ ವಿವಿಧ ಆಟೋರಿಕ್ಷಾ ಸಂಘಟನೆಗಳು ಒತ್ತಾಯಿಸಿವೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಸಭೆಯಲ್ಲಿ, ನಗರ ಮತ್ತು ಗ್ರಾಮಾಂತರ ಆಟೋರಿಕ್ಷಾಗಳಿಗೆ ಪ್ರತ್ಯೇಕ ಕನಿಷ್ಠ ದರ ನಿಗದಿ ಮಾಡಬೇಕು, ಉಚಿತ ಕಾಯುವಿಕೆ ಅವಧಿಯನ್ನು 18 ನಿಮಿಷದಿಂದ 10 ನಿಮಿಷಕ್ಕೆ…

Read More

ಎಸ್.ಡಿ.ಟಿ.ಯು ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆ: ರಾಜ್ಯ ನಾಯಕರಿಗೆ ಸನ್ಮಾನ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜುಲೈ 9, 2026ರಂದು ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಹೆನ್ರಿ ಡಿ.ಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳು, ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಹಾಗೂ ಮುಂದಿನ ದಿನಗಳ ಕಾರ್ಯಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಟಿ.ಯು ಕರ್ನಾಟಕದ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ, ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್…

Read More
error: Content is protected !!