ವರ್ಕಾಡಿ ಕಜೆ ಪ್ರದೇಶದಲ್ಲಿ ಭೀಕರ ಭೂಕುಸಿತ .ಅಪಾಯದ ಅಂಚಿನಲ್ಲಿ ಸ್ಥಳೀಯರು
ಮಂಜೇಶ್ವರ: ಮಂಜೇಶ್ವರದ ವರ್ಕಾಡಿ ಕಜೆ ಪ್ರದೇಶದಲ್ಲಿ ಭೂಮಿ ಕುಸಿದು ಅಪಾಯದ ಸ್ಥಿತಿ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಭೂಕುಸಿತದ ಪರಿಣಾಮವಾಗಿ ಸುಮಾರು 10 ಮೀಟರ್ ಆಳದ ಎರಡು ದೊಡ್ಡ ಗುಂಡಿಗಳು ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಭೂಮಿ ಕುಸಿದಿದ್ದು, ಆ ಭಾಗದ ನೆಲ ಬಿರುಕು ಬಿಟ್ಟಿದೆ. ಈ ಕಾರಣದಿಂದಾಗಿ ಸ್ಥಳೀಯ ನಿವಾಸಿಗಳಾದ ಅವ್ವಮ್ಮ, ಅಸಿಯಮ್ಮ, ಅಹ್ಮದ್ ಕುಞಿ ಮೊಂಟಾದವರನ್ನು ಸ್ಥಳೀಯರ ಸಹಾಯದಿಂದ ಮೊದಲೇ…
