ಮೂರ್ಜೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಎಲ್‌ಕೆಜಿ-ಯುಕೆಜಿ ಕೊಠಡಿ ಹಾಗೂ ಶೌಚಾಲಯ ಉದ್ಘಾಟನೆ

ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಸಾಮಗ್ರಿ ವಿತರಣೆ; ಶಾಲೆ ಅಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯ: ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ, ಜೂನ್ 9: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಮೂರ್ಜೆಯಲ್ಲಿ ನೂತನವಾಗಿ ನಿರ್ಮಿಸಲಾದ ಎಲ್‌ಕೆಜಿ, ಯುಕೆಜಿ ಸ್ಮಾರ್ಟ್ ಕ್ಲಾಸ್ ಕೊಠಡಿ ಹಾಗೂ ಶೌಚಾಲಯದ ಉದ್ಘಾಟನಾ ಸಮಾರಂಭ ಮತ್ತು ಯುವಸ್ಪಂದನ ವಾಮದಪದವು ವಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬರಹ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ…

Read More

ಅನಂತಪುರ ಉದ್ದಿಮೆ ಪಾರ್ಕ್ ದುರ್ನಾತ ವಿರೋಧಿಸಿ ಬೃಹತ್ ಪ್ರತಿಭಟನೆ

ಮಾಲಿನ್ಯಕ್ಕೆ ಶಾಶ್ವತ ಪರಿಹಾರ, ಆರೋಗ್ಯಕ್ಕೆ ಹಾನಿಕಾರಕ ಕೈಗಾರಿಕೆಗಳ ಮುಚ್ಚುವಂತೆ ಆಗ್ರಹ ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಸೂಸುತ್ತಿರುವ ತೀವ್ರ ದುರ್ನಾತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸ್ಥಳೀಯರ ಆರೋಗ್ಯಕ್ಕೆ ಮಾರಕವಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿ ಸೋಮವಾರ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮಾರ್ಚ್ ನಡೆಯಿತು. ನಾಯ್ಕಾಪಿನಿoದ ಆರಂಭವಾದ ಪ್ರತಿಭಟನಾ ಜಾಥಾಕ್ಕೆ ನೂರಾರು ಮಂದಿ ಸ್ಥಳೀಯರು ಭಾಗವಹಿಸಿದ್ದು, ಮಂಜೇಶ್ವರ ಶಾಸಕ A. K. M. Ashraf ಚಾಲನೆ ನೀಡಿದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಅನಂತಪುರ…

Read More

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಭಿನಂದನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಮೆಸ್ಕಾಂ (ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ನಿಗಮ) ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರನ್ನೂ ಭೇಟಿಯಾಗಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ರಾಜ್ಯದ ವಿದ್ಯುತ್ ಕ್ಷೇತ್ರದ ಅಭಿವೃದ್ಧಿ, ವಿದ್ಯುತ್ ಸರಬರಾಜಿನ ಗುಣಮಟ್ಟ ವೃದ್ಧಿ ಹಾಗೂ ಜನಸ್ನೇಹಿ ಸೇವೆಗಳ ಅನುಷ್ಠಾನ ಸೇರಿದಂತೆ ವಿವಿಧ ವಿದ್ಯುತ್ ಸಂಬಂಧಿತ ವಿಷಯಗಳ…

Read More

ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317D ಮೆಗಾ ಸೇವಾ ಯೋಜನೆಗೆ ಮತ್ತೊಂದು ಮೈಲುಗಲ್ಲು

ಮಂಗಳೂರು, ಜೂನ್ 9: ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317D ವತಿಯಿಂದ ಮೆಗಾ ಸೇವಾ ಯೋಜನೆಯ ಅಂಗವಾಗಿ ಅಕ್ಷಯಪಾತ್ರ ಫೌಂಡೇಶನ್‌ಗೆ ಫುಡ್ ಟ್ರಕ್ ಹಸ್ತಾಂತರಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಮಾಜಮುಖಿ ಕಾರ್ಯಕ್ರಮವು ಜೂನ್ 10ರಂದು ಬುಧವಾರ ಸಂಜೆ 5 ಗಂಟೆಗೆ ಮಂಗಳೂರಿನ ಬೆಂಜನಪದವಿನಲ್ಲಿರುವ ಅಕ್ಷಯಪಾತ್ರ ಫೌಂಡೇಶನ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಫೌಂಡೇಶನ್ (ಎಲ್‌ಸಿಐಎಫ್) ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಯೋಜನೆಯು ಸಮಾಜದ ಬಡ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ ಮತ್ತು ಪೌಷ್ಟಿಕ ಆಹಾರ ಒದಗಿಸುವ…

Read More

ಮೀನುಗಾರಿಕೆ ನಿಷೇಧ: ಎರಡು ತಿಂಗಳ ಮೌನಕ್ಕೆ ಜಾರಿದ ಮಂಗಳೂರು ಬಂದರು

ಮಂಗಳೂರು, ಜೂನ್ 9: ಸೂರ್ಯ ಉದಯಿಸುವುದಕ್ಕೂ ಮುನ್ನವೇ ಹರಾಜಿನ ಕೂಗು, ಬೋಟ್‌ಗಳ ಎಂಜಿನ್‌ಗಳ ಸದ್ದು, ವಾಹನಗಳ ದಟ್ಟಣೆ ಮತ್ತು ಕಾರ್ಮಿಕರ ಓಡಾಟದಿಂದ ಕಿಕ್ಕಿರಿದು ಕಾಣುತ್ತಿದ್ದ ಮಂಗಳೂರು ಮೀನುಗಾರಿಕಾ ಬಂದರು ಇದೀಗ ಎರಡು ತಿಂಗಳ ಮೌನಕ್ಕೆ ಜಾರಿದೆ. ವಾರ್ಷಿಕ ಮೀನುಗಾರಿಕೆ ಋತು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಬಂದರಿನ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜೆಟ್ಟಿ ಪ್ರದೇಶ ನೀರವ ನಿಶ್ಶಬ್ದಕ್ಕೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಜೂನ್ 1ರಿಂದ ಜುಲೈ 31ರವರೆಗೆ ಎರಡು ತಿಂಗಳ ಕಾಲ ಯಾಂತ್ರೀಕೃತ ಹಾಗೂ ಟ್ರಾಲ್ ಬೋಟ್‌ಗಳ ಮೀನುಗಾರಿಕೆಗೆ…

Read More

ಎಸ್‌ಎಂಎ ಮಂಜನಾಡಿ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್

ಮಂಜನಾಡಿ, ಜೂ. 9: ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ವತಿಯಿಂದ “ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್” ಹಾಗೂ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವು ಮಂಜನಾಡಿಯ ಅಲ್-ಮದೀನಾ ಶರಫುಲ್ ಉಲಮಾ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಅಲ್-ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಉದ್ಘಾಟಿಸಿದರು. ಅಲ್-ಮದೀನಾ ಶರೀಯತ್ ಕಾಲೇಜಿನ ಪ್ರಾಂಶುಪಾಲ ಸೈಯ್ಯದ್ ಉಹೈಸಿ ಸಖಾಫಿ ಅವರು ದುಆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ಅಧ್ಯಕ್ಷ ಹಾಜಿ ಎನ್.ಎಸ್. ಕರೀಂ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ಸುನಿಲ್ ಕನುಗೋಲು ನೇಮಕ

ಸಂಪುಟ ಸಚಿವರ ಸ್ಥಾನಮಾನ; ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ ಬೆಂಗಳೂರು, ಜೂನ್ 9: ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕನುಗೋಲು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ. ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಹುದ್ದೆಗೆ ಸಂಪುಟ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ‘ಇನ್‌ಕ್ಲೂಸಿವ್ ಮೈಂಡ್ಸ್’ ಎಂಬ ರಾಜಕೀಯ ದತ್ತಾಂಶ ಮತ್ತು ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಮುಖ್ಯಸ್ಥರಾಗಿರುವ ಸುನಿಲ್…

Read More

18 ವರ್ಷದ ಯುವತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

ಮಂಗಳೂರು, ಜೂನ್ 8: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ಎಂಬ ಯುವತಿ ಜೂನ್ 7ರಂದು ಮನೆಯಿಂದ ತೆರಳಿದ್ದು, ಬಳಿಕ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯು ಸುಮಾರು 162 ಸೆಂ.ಮೀ. ಎತ್ತರ ಹೊಂದಿದ್ದು, ಕಪ್ಪು ಬಣ್ಣದ ತಲೆಕೂದಲು, ಗೋಧಿ ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟಿನವರಾಗಿದ್ದಾರೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ ಮತ್ತು ನೀಲಿ ಬಣ್ಣದ ಬ್ಲೌಸ್ ಧರಿಸಿದ್ದರು. ಅವರು ಕನ್ನಡ ಹಾಗೂ…

Read More

ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಸೂಚನೆ

ಮಂಗಳೂರು, ಜೂನ್ 8: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಆಸ್ಪತ್ರೆ ಆಡಳಿತ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳಿಗೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಸ್ಪತ್ರೆಗೆ ಆಗಮಿಸುವ ಬಹುತೇಕ ರೋಗಿಗಳು ಕನ್ನಡ ಭಾಷಿಕರಾಗಿದ್ದು, ಇತರ ಭಾಷೆಗಳ ಅರಿವು ಇಲ್ಲದ ಕಾರಣ ಕೆಲ ವೈದ್ಯರು ಹಾಗೂ ವಿದ್ಯಾರ್ಥಿಗಳು ಕನ್ನಡದಲ್ಲಿ ಸಂವಹನ ನಡೆಸದಿರುವುದರಿಂದ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿವೆ. ಅಲ್ಲದೆ, ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ…

Read More

ದಕ್ಷಿಣ ಕನ್ನಡದಲ್ಲಿ ಮಳೆ ಚುರುಕು; ಜೂನ್ 10ರಿಂದ ಮುಂಗಾರು ಮತ್ತಷ್ಟು ಬಿರುಸು ಸಾಧ್ಯತೆ

ಮಂಗಳೂರು, ಜೂನ್ 9: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಮೋಡಕವಿದ ವಾತಾವರಣದ ನಡುವೆ ಬಿಟ್ಟು ಬಿಟ್ಟು ಮಳೆಯಾಗಿದೆ. ಸಂಜೆ ವೇಳೆಗೆ ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ರವಿವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ಸರಾಸರಿ 10.5 ಮಿ.ಮೀ. ಮಳೆ ದಾಖಲಾಗಿದೆ. ಕಡಬ ತಾಲೂಕಿನಲ್ಲಿ ಅತಿ ಹೆಚ್ಚು 27.3 ಮಿ.ಮೀ. ಮಳೆಯಾಗಿದ್ದು, ಪುತ್ತೂರಿನಲ್ಲಿ 11.3…

Read More
error: Content is protected !!