ಉಡುಪಿ ರಸ್ತೆ ಅಪಘಾತದಲ್ಲಿ ಹಿರಿಯ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ ಗಾಣಿಗ ವಿಧಿವಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀನಿವಾಸ ಗಾಣಿಗ ಅವರು, ಮಂಗಳವಾರ ರಾತ್ರಿ ಕುಂದಾಪುರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವೊಂದನ್ನು ಮುಗಿಸಿ ತಮ್ಮ ಬೈಕಿನಲ್ಲಿ ಕಟ್ ಬೆಲ್ಲೂರು ಕಡೆಗೆ ತೆರಳುತ್ತಿದ್ದರು. ರಾತ್ರಿ ಸುಮಾರು ಎಂಟು ಗಂಟೆಯ ಹೊತ್ತಿಗೆ…

Read More

ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿಗೆ ಪತ್ರಿಕಾಭವದಿಂದ ಗೌರವಾರ್ಪಣೆ ….. !

ಮಂಗಳೂರು:ಮಾರ್ಚ್ 27 ಮತ್ತು 28ರಂದು ಬಂಟ್ವಾಳ ಬಿಸಿ ರೋಡ್‌ನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಇವರಿಗೆ ಮಂಗಳೂರು ಪ್ರೆಸ್ ಕ್ಲಬ್ , , ದ.ಕ.ಜಿಲ್ಲಾ ಕಾರ್ಯನಿರತ. ಪತ್ರಕರ್ತರ ಸಂಘ , ಪತ್ರಿಕಾ ಭವನ ಟ್ರಸ್ಟ್‌ ಜಂಟಿಯಾಗಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು . ಗೌರವಾರ್ಪಣೆಯನ್ನು ಹಿರಿಯ ಪತ್ರಕರ್ತರಾದ ಕೆ.ಆನಂದ ಶೆಟ್ಟಿ ನೆರವೇರಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆದ…

Read More

ಈಶಾನ್ಯ ಭಾರತಕ್ಕೆ ‘ಭಾರತ್ ಗೌರವ್’ ಬೇಸಿಗೆ ವಿಶೇಷ ಪ್ರವಾಸಿ ರೈಲು… ! ಮೂರು ವಿಶೇಷ ಪ್ಯಾಕೇಜ್

ಭಾರತೀಯ ರೈಲ್ವೆ, ಸೌತ್ ಸ್ಟಾರ್ ರೈಲ್ ಇಂಡಿಯಾ ಹಾಗೂ ಟೂರ್ ಟೈಮ್ಸ್ ಸಹಯೋಗದಲ್ಲಿ ‘ಭಾರತ್ ಗೌರವ್’ ರೈಲು ಯೋಜನೆಯಡಿ ಈಶಾನ್ಯ ಭಾರತಕ್ಕೆ ಬೇಸಿಗೆ ವಿಶೇಷ ಪ್ರವಾಸಿ ರೈಲನ್ನು ಘೋಷಿಸಲಾಗಿದೆ. ಈ ವಿಶೇಷ ರೈಲು ಏಪ್ರಿಲ್ 25ರಂದು ಪ್ರಯಾಣ ಆರಂಭಿಸಲಿದ್ದು, 14 ದಿನಗಳ ಕಾಲ ನಡೆಯುವ ಈ ಪ್ರವಾಸದಲ್ಲಿ ವಿಶಾಖಪಟ್ಟಣಂ ಮತ್ತು ಕೋಲ್ಕತ್ತಾ ಸೇರಿದಂತೆ ಪ್ರಮುಖ ತಾಣಗಳನ್ನು ಒಳಗೊಂಡ ಮೂರು ವಿಭಿನ್ನ ಪ್ಯಾಕೇಜ್‌ಗಳನ್ನು ಒಳಗೊಂಡಿದೆ ಎಂದು ರೈಲ್ವೆ ಭಾರತ್ ಗೌರವ್ ರೈಲು ಸೌತ್‍ಸ್ಟಾರ್ ರೈಲು & ಟೂರ್ ಟೈಮ್…

Read More

ಕುಂಬಳೆಯಲ್ಲಿ ಗ್ಯಾಸ್ ಕೊರತೆ ತೀವ್ರ: ಮಲ್ಲಿಕಾ ಏಜೆನ್ಸಿ ವಿರುದ್ಧ ಜನರ ಆಕ್ರೋಶ, ತಕ್ಷಣ ಕ್ರಮಕ್ಕೆ ಒತ್ತಾಯ

ಕುಂಬಳೆ: ಮಲ್ಲಿಕಾ ಇಂಟರ್‌ಪ್ರೈಸಸ್ ಗ್ಯಾಸ್ ಏಜೆನ್ಸಿಯಲ್ಲಿ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 22,000 ಗ್ರಾಹಕರನ್ನು ಹೊಂದಿರುವ ಈ ಏಜೆನ್ಸಿಗೆ ಪ್ರತಿದಿನ ಸಾವಿರಾರು ಜನರು ಆಗಮಿಸುತ್ತಿದ್ದರೂ, ಗ್ಯಾಸ್ ಸಿಲಿಂಡರ್‌ಗಳ ಲಭ್ಯತೆ ಕೊರತೆ, ವಿತರಣೆಯಲ್ಲಿ ವಿಳಂಬ ಹಾಗೂ ಸಮರ್ಪಕ ಮಾಹಿತಿ ಅಭಾವದಿಂದ ಜನರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಹಕರು ದೂರಿದ್ದಾರೆ. ಗ್ಯಾಸ್ ಸಿಗದೆ ಕೆಲವರು ಖಾಲಿಹಸ್ತದಿಂದ ಮನೆಗೆ ಹಿಂತಿರುಗುತ್ತಿರುವುದು ಸಾಮಾನ್ಯವಾಗಿದ್ದು, ಇದರಿಂದ…

Read More

ಮಂಜೇಶ್ವರ ಹೈಡ್ರಾಮಾ:ಕಣದಿಂದ ಎಸ್.ಡಿ.ಪಿ.ಐ ಹಿಂದಕ್ಕೆ ಸರಿಯುವ ಸೂಚನೆ: ಕೇರಳ ರಾಜಕೀಯದ ದಿಕ್ಸೂಚಿ ಬದಲಿಸುವ ಮಾಸ್ಟರ್ ಪ್ಲಾನ್

​ಮಂಜೇಶ್ವರ: ಕೇರಳ ರಾಜಕೀಯದ ಅತ್ಯಂತ ಕುತೂಹಲಕಾರಿ ಕೇಂದ್ರಬಿಂದುವಾಗಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹೈಡ್ರಾಮಾ ಶುರುವಾಗಿದೆ. ಇಲ್ಲಿಯವರೆಗೆ ಅಬ್ಬರಿಸಿದ್ದ ಎಸ್.ಡಿ.ಪಿ.ಐ, ಈಗ ಅಂತಿಮ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮುನ್ಸೂಚನೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಂಜೇಶ್ವರದಲ್ಲಿ ಬಿಜೆಪಿ ಮತ್ತು ಯುಡಿಎಫ್ ನಡುವೆ ನೇರ ಹಾಗೂ ಜಿದ್ದಾಜಿದ್ದಿನ ಪೈಪೋಟಿ ಇದೆ. ಇಂತಹ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಸ್ಪರ್ಧಿಸುವುದರಿಂದ ಮತಗಳು ವಿಭಜನೆಯಾಗಿ ಬಿಜೆಪಿಗೆ ಲಾಭವಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಕಣ್ಣೂರಿನಲ್ಲಿ ನಡೆದ ತುರ್ತು…

Read More

ಸಹಕಾರ ರತ್ನ , ಸಹಕಾರ ಕ್ಷೇತ್ರದ ಭೀಷ್ಮ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ಒಲಿದ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ’ ಪ್ರಶಸ್ತಿ …

ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ತನ್ನ 27 ನೇ ಎಂಎಂಎ-ಕೆವಿಕೆ ಅತ್ಯುತ್ತಮ ವ್ಯವಸ್ಥಾಪಕ ಪ್ರಶಸ್ತಿ – 2025 ಪ್ರಧಾನ ಕಾರ್ಯಕ್ರಮವು ಮಾರ್ಚ್ 28 ರಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6:00 ರಿಂದ ನಡೆಯಲಿದ್ದು, ಪ್ರಶಸ್ತಿಯನ್ನು ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಇವರಿಗೆ ನೀಡಿ ಗೌರವಿಸಲಾಗುವುದೆಂದು ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಎಡ್ವರ್ಡ್ ಜೆ ಕೊಯೆಲ್ಹೋ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಬಂಟ್ವಾಳದಲ್ಲಿ ಶ್ರೀರಾಮ ನವಮಿ ಅಂಗವಾಗಿ ಪೂಜೆ–ಯಾಗ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ (ರಿ.) ಮತ್ತು ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ, ಶಿವಾಜಿನಗರ–ಕಾಮಾಜೆ, ದೈಪಲ ವತಿಯಿಂದ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀರಾಮ ತಾರಕ ಯಾಗ ಮಾ. 27ರಂದು ನಡೆಯಲಿದೆ ಎಂದು ಮಂದಿರದ ಅಧ್ಯಕ್ಷ ಕೇಶವ ದೈಪಲ ತಿಳಿಸಿದ್ದಾರೆ. ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಮೂರ್ತಿ ಶ್ರೀ ರಾಜಗೋಪಾಲಾಚಾರ್ಯ ಅವರ ನೇತೃತ್ವದಲ್ಲಿ ಒಂದು ಲಕ್ಷ ಶ್ರೀರಾಮ ತಾರಕ ಜಪ ನಡೆಯಲಿದೆ ಎಂದರು. ರಾತ್ರಿ 8…

Read More

ಕೊಣಾಜೆಯಲ್ಲಿ ಬ್ಯಾರಿ ಜನಪದ–ವಚನ ಸಾಹಿತ್ಯ ಪ್ರಚಾರೋಪನ್ಯಾಸ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ, ನಡುಪದವಿನ ಪಿಎ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ‘ಬ್ಯಾರಿ ಜನಪದ ಮತ್ತು ವಚನ ಸಾಹಿತ್ಯ’ ಕುರಿತ ಪ್ರಚಾರೋಪನ್ಯಾಸ ಕಾರ್ಯಕ್ರಮ ಪೇಸ್ ನಾಲೆಜ್ ಸಿಟಿಯ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಡಾ. ಧನಂಜಯ ಕುಂಬ್ಳೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾಷೆ, ಸಂಸ್ಕೃತಿ ಮತ್ತು ಜನಾಂಗದ ಕುರಿತ ಸಂಶೋಧನೆಗಳು ನಿರಂತರವಾಗಿರಬೇಕು. ಸಂಶೋಧನೆಗಳು ಏಕಮುಖವಾಗದೆ, ಪ್ರಶ್ನೆ–ಉಪಪ್ರಶ್ನೆಗಳ ಮೂಲಕ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಸಹಾಯಕ ಪ್ರಾಧ್ಯಾಪಕ…

Read More

ಹೀಗೊಂದು ಪ್ರೇಮ ಪತ್ರ

” ‘ ಸುಮ’ ನ “….. ಐ ಲವ್ ಯು.‍‌ಸಾರಿ ಕಣೇ, ನಿನ್ನಲ್ಲಿ ಪರ್ಮಿಶನ್ ಕೇಳ್ದೇನೇ ಬರೆದಿದ್ದೀನಿ. ನಿನಗೆ ಕೋಪ ಬಂದಿದೆ ಅಂತಾನು ಗೊತ್ತು ಯಾಕೆಂದ್ರೆ ನೀನು ನನಗೆ ಕೊಟ್ಟ ಸ್ಥಾನ ಇದಲ್ಲ ಅಲ್ವಾ ? ಆದ್ರೆ ಪ್ಲೀಸ್….. ದಯವಿಟ್ಟು ಓದುವ ಮುಂಚೆಯೇ ಈ ಪತ್ರವನ್ನು ಹರಿದಾಕ್ಬೇಡ. ತಾಳ್ಮೆಯಿಂದ ನನಗೋಸ್ಕರ ಒಮ್ಮೆ ಈ ಪತ್ರವನ್ನೋದು. ಆಮೇಲೆ ನಿನ್ನಿಷ್ಟ ಕಣೇ….. ಇನ್ನೂ ಹೆಚ್ಚು ಪೀಠಿಕೆ ಹಾಕಲ್ಲ ನಿನ್ನಲ್ಲಿ ಓದುವ ತಾಳ್ಮೆನು ಇಲ್ಲ, ಅದಕ್ಕೆ ನೇರವಾಗಿ ವಿಷಯಕ್ಕೆ ಬರುತ್ತೀನಿ…. ಆಯ್ತಾ…

Read More

ನಂದಿಗುಡ್ಡೆಯ ‘ಹಲಸಿನ ಹಣ್ಣಿನ ಸರದಾರ’: ರೊನಾಲ್ಡ್ ಅವರ ಯಶೋಗಾಥೆ

ಮಂಗಳೂರು: ಪ್ರಕೃತಿಯ ಅಮೂಲ್ಯ ಕೊಡುಗೆಯಾದ ಹಲಸಿನ ಹಣ್ಣು ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಮಾತ್ರ ಲಭ್ಯವಾಗುತ್ತದೆ. ಆದರೆ ಮಂಗಳೂರಿನ ನಂದಿಗುಡ್ಡೆ–ಮಾರ್ನಮಿಕಟ್ಟೆ ರಸ್ತೆ ಬದಿಯಲ್ಲಿ ವರ್ಷಪೂರ್ತಿ ಸವಿಯಾದ ಹಲಸಿನ ಹಣ್ಣುಗಳನ್ನು ಒದಗಿಸುವ ಮೂಲಕ ಮುಡಿಪು ನಿವಾಸಿ ರೊನಾಲ್ಡ್ ಎಲ್ಲರ ಗಮನ ಸೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ವಿರಾಮವಿಲ್ಲದೆ ವ್ಯಾಪಾರ ನಡೆಸುತ್ತಿರುವ ರೊನಾಲ್ಡ್, ಹಲಸಿನ ಹಣ್ಣಿನ ಸೀಸನ್ ಮುಗಿದರೂ ಗ್ರಾಹಕರಿಗೆ ನಿರಂತರವಾಗಿ ಹಣ್ಣುಗಳನ್ನು ಒದಗಿಸುತ್ತಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಪ್ರದೇಶಗಳಿಂದ ಹಣ್ಣುಗಳನ್ನು ತರಿಸಿ ಮಾರಾಟ ಮಾಡುವುದು…

Read More
error: Content is protected !!