ಅಶ್ರಫ್ ಪರ ಭಾರೀ ಬೆಂಬಲ: ಯುಡಿಎಫ್ ಸಮಾವೇಶದಲ್ಲಿ ಜನಸಾಗರ

ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರ ಗೆಲುವಿಗಾಗಿ ಆಯೋಜಿಸಲಾದ ‘ಯುಡಿಎಫ್ ಮಂಡಲ ಕನ್ವೆನ್ಷನ್’ ಮಂಗಳವಾರ ಭರ್ಜರಿಯಾಗಿ ನಡೆಯಿತು. ನಯಾಬಜಾರ್‌ನ ಫೆರೋ ಆಡಿಟೋರಿಯಂನಲ್ಲಿ ನಡೆದ ಈ ಬೃಹತ್ ಸಮಾವೇಶವು ಸಾವಿರಾರು ಕಾರ್ಯಕರ್ತರನ್ನು ಆಕರ್ಷಿಸಿ, ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚಿಸಿದೆ. ಸಂಜೆ 3 ಗಂಟೆಗೆ ಆರಂಭವಾದ ಸಮಾವೇಶವನ್ನು ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಂಜೇಶ್ವರವು ಸೌಹಾರ್ದತೆಯ ನೆಲೆಬೀಡು. ಎ.ಕೆ.ಎಂ. ಅಶ್ರಫ್ ಅವರ ಗೆಲುವು ಕ್ಷೇತ್ರದ…

Read More

ಬಂಟ್ವಾಳ : ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕಿನ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಿರಿಯಪ್ಪ ನೆರವೇರಿಸಿದರು. ಬಳಿಕ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಮಾತನಾಡಿ, ಗ್ರಾಮ ಅಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾತೃಶ್ರೀ ಹೇಮಾವತಿ ಅಮ್ಮನವರ ಈ…

Read More

ಮಾಜಿ ಶಾಸಕ ರಘುಪತಿ ಧರಣಿಗೆ ಮಣಿದ ನಗರಾಭಿವೃದ್ಧಿ ಪ್ರಾಧಿಕಾರ; ಸಿಂಗಲ್ ಲೇಔಟ್ ಗೆ ಅನುಮತಿ ಪತ್ರ ಹಸ್ತಾಂತರ

ಭಟ್ಟರ ಬಡಾನಿಡಿಯೂರು ರೆಸಾರ್ಟ್ ನ ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಿದ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ: ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ ಖಂಡಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಅನಿರ್ದಿಷ್ಟಾವಧಿ ಧರಣಿ ಆರಂಭ ಮಾಡಿದ ಎರಡನೇ ದಿನಕ್ಕೆ ಯಶಸ್ಸು ಸಿಕ್ಕಿದೆ. ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ…

Read More

ದೌರ್ಜನ್ಯ ಪ್ರಕರಣ ಪರಿಹಾರ ತ್ವರಿತವಾಗಿ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಎಸ್.ಸಿ.ಪಿ – ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ದೌರ್ಜನ್ಯ ಪ್ರಕರಣಗಳ ಎಫ್.ಐ.ಆರ್ ದಾಖಲಾದ ನಂತರ ಪರಿಹಾರವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಸಂತ್ರಸ್ತರು ಅಗತ್ಯ ದಾಖಲೆಗಳನ್ನು ಹೊಂದಿಸಲು ಸಮಾಜ ಕಲ್ಯಾಣ ಇಲಾಖೆಯು ಸಹಕಾರ ನೀಡಬೇಕು ಎಂದು…

Read More

ಮಂಗಳೂರು ವಿ.ವಿ. ವಾರ್ಷಿಕ ಘಟಿಕೋತ್ಸವ ಮಾ. 28ರಂದು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

Read More

ಸಜೀಪಮಾಗಣೆ ಪಡೇರ ಮಾಡ ಕ್ಷೇತ್ರದಲ್ಲಿ ನೇಮೋತ್ಸವ: ಸಂಪ್ರದಾಯಬದ್ಧ ರಜತಪಲ್ಲಕ್ಕಿ ಸೇವೆ

ಸಜೀಪಮಾಗಣೆ: ಪಡೇರ ಮಾಡ ಕ್ಷೇತ್ರದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಶ್ರೀ ದೈವಗಳು ಹಾಗೂ ಶ್ರೀ ನಾಲ್ಕೈಥಾಯ ದೈವದ ನೇಮೋತ್ಸವದ ಅಂಗವಾಗಿ ಸಂಪ್ರದಾಯಬದ್ಧ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಶಿಷ್ಟ ಸಂಪ್ರದಾಯದಂತೆ ಕಾಂತಡಿ ಗುತ್ತುವಿನಿಂದ ಸಂಕೇಶ ಬಂಡಾರದ ಮನೆಗೆ ಆಗಮಿಸಿದ ಶ್ರೀ ದೈವಗಳ ಕಿರುವಾಳು, ಆಭರಣಗಳು, ವಾದ್ಯ-ಬ್ಯಾಂಡು, ಕೊಂಬು ಸೇರಿದಂತೆ ಸಕಲ ಬಿರುದಾವಳಿಗಳೊಂದಿಗೆ ರಜತ ಪಲ್ಲಕ್ಕಿಯಲ್ಲಿ ಸುಮಾರು ಆರು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ರಾತ್ರಿಯಿಡೀ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆ ಕಲ್ಲಾಡಿಗೋಳಿ, ದೇರಾಜೆ ಹಾಗೂ ಸಜೀಪ ಪೇಟೆಯ ಮೂಲಕ ಸಾಗುತ್ತಾ…

Read More

ಮಾಳದಲ್ಲಿ ಟಿಪ್ಪರ್–ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರು ಪ್ರದೇಶದಲ್ಲಿ ನಡೆದಿದೆ. ನವೀನ್ ಬಜಗೋಳಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಹಾವು ಹಿಡಿಯುವ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು. ಇಂದು ಬೆಳಿಗ್ಗೆ ಹಾವನ್ನು ಹಿಡಿದು ಕಾಡಿಗೆ ಬಿಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ನವೀನ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟಿಯ…

Read More

ವಿಟ್ಲ ಬಳಿ ಬಸ್–ಟಿಪ್ಪರ್ ಮುಖಾಮುಖಿ ಡಿಕ್ಕಿ: ಕಂಡಕ್ಟರ್ ಮೇಲೆ ಹಲ್ಲೆ

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಟಿಪ್ಪರ್ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಮುಚ್ಚಿರಪದವು ಪ್ರದೇಶದಲ್ಲಿ ನಡೆದಿದೆ.ಪಕಳಕುಂಜದಿಂದ ವಿಟ್ಲ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಪೆರುವಾಯಿ ಕಡೆ ಸಾಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ನಂತರ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಟಿಪ್ಪರ್ ಚಾಲಕ ಬಿಲಾಲ್ ಎಂಬಾತ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್…

Read More

ವೇಣೂರು ಕಂಬಳದಲ್ಲಿ ನಿರೂಪಕರ ಮಾತಿಗೆ ಆಕ್ಷೇಪ: ಛಾಯಾಗ್ರಾಹಕರಿಂದ ಮನವಿ

ಬಂಟ್ವಾಳ: ವೇಣೂರು ಕಂಬಳ ಕಾರ್ಯಕ್ರಮದಲ್ಲಿ ನಿರೂಪಕರೊಬ್ಬರು ಛಾಯಾಗ್ರಾಹಕರ ವೃತ್ತಿಯ ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆ ಉಭಯ ಜಿಲ್ಲೆಯ ಛಾಯಾಗ್ರಾಹಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. South Canara Photographers Association ಅಧ್ಯಕ್ಷ ನವೀನ್ ರೈ ಪಂಜಳ ಅವರ ನೇತೃತ್ವದಲ್ಲಿ ಛಾಯಾಗ್ರಾಹಕರ ಪ್ರತಿನಿಧಿಗಳು ಕಂಬಳ ಸಮಿತಿ ರಾಜ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ವೇಣೂರು ಕಂಬಳದಲ್ಲಿ ನಿರೂಪಕರಾಗಿದ್ದ ರಾಜೀವ್ ಶೆಟ್ಟಿ ಅವರು ಛಾಯಾಗ್ರಾಹಕರ ವೃತ್ತಿಯ ಬಗ್ಗೆ ಅವಮಾನಕಾರಿ ಹಾಗೂ ಅಗೌರವಪೂರ್ಣ ಮಾತುಗಳನ್ನು ಆಡಿದ್ದಾರೆ…

Read More

ಮಂಗಳೂರು ನಗರದಲ್ಲಿ ಸಿಟಿ ಬಸ್ ಸಮಸ್ಯೆ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

ಮಂಗಳೂರು: ನಗರ ವ್ಯಾಪ್ತಿಯಲ್ಲಿ ಅನೇಕ ಸಿಟಿ ಬಸ್‌ಗಳು ನಿಗದಿತ ಮಾರ್ಗಗಳಿಗೆ ಸಂಚರಿಸದಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. ನಗರದ ಕೆಲವು ಖಾಸಗಿ ಸಿಟಿ ಬಸ್‌ಗಳು ಆರ್ಥಿಕ ಕಾರಣಗಳನ್ನು ಉಲ್ಲೇಖಿಸಿ ಕೆಲ ಪ್ರದೇಶಗಳಿಗೆ ಸೇವೆಯನ್ನು ಕಡಿತಗೊಳಿಸಿರುವುದು, ಟ್ರಿಪ್‌ಗಳನ್ನು ರದ್ದುಪಡಿಸಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಬಸ್‌ಗಳನ್ನು ನಿಯೋಜಿಸಲಾಗಿದ್ದರೂ, ಅವುಗಳ ಸೇವೆಯೂ ನಂತರ ಸ್ಥಗಿತಗೊಂಡಿದೆ ಎಂದು ಅವರು ಆರೋಪಿಸಿದರು. ಈ ಪರಿಣಾಮವಾಗಿ ಶಕ್ತಿನಗರ, ಬಜಾಲ್-ಪಡ್ಪು-ಕೊಟ್ಟಾರ, ಪಡೀಲ್-ಕಣ್ಣಗುಡ್ಡೆ,…

Read More
error: Content is protected !!