ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್…

Read More

ಕಾಸರಗೋಡು ಗೋ-ಕುಟೀರ ನಿರ್ಮಾಣಕ್ಕೆ ಎರಡನೇ ಹಂತದ ಚಾಲನೆ

ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ “ಕಾಸರಗೋಡು ಗೋ-ಕುಟೀರ” ಯೋಜನೆಯು ಮತ್ತೊಂದು ಮಹತ್ವದ ಹಂತವನ್ನು ತಲುಪಿದೆ. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಈ ಯೋಜನೆಗೆ ವೇಗ ಸಿಕ್ಕಿದ್ದು, ಗೋಸೇವೆಯನ್ನು ಉತ್ತೇಜಿಸುವ ಉದ್ದೇಶದಿಂದ ರೂಪುಗೊಂಡ ಈ ಕೇಂದ್ರವು ಸ್ಥಳೀಯ ಭಕ್ತರ ಗಮನ ಸೆಳೆಯುತ್ತಿದೆ. ಕಳೆದ ನವೆಂಬರ್ 4, 2025ರಂದು ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯನ್ನು ಅಂಗವಾಗಿ, ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಅವರಿಂದ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು….

Read More

ಚೇಟ್ಟುಕುಂಡು ಕೀಕಾನ ಮೀತಲ್ ವೀಡ್ ತರವಾಡಿನಲ್ಲಿ ಏಪ್ರಿಲ್ 7 ಕ್ಕೆ ಹೊರೆಕಾಣಿಕೆ ಸಮರ್ಪಣೆ

ಕಾಸರಗೋಡು ಜಿಲ್ಲೆಯ ಚೇಟ್ಟುಕುಂಡು ಪ್ರದೇಶದ ಕೀಕಾನ ಮೀತಲ್ ವೀಡ್ ತರವಾಡಿನಲ್ಲಿ ನಡೆಯಲಿರುವ ವಯನಾಟು ಕುಲವನ್ ದೈವ ಕಟ್ಟು ಮಹೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬರುತ್ತಿದೆ. ಅನೇಕ ವರ್ಷಗಳ ನಿರೀಕ್ಷೆಗೆ ತೆರೆ ಬಿದ್ದು, ಮತ್ತೆ ಈ ತರವಾಡಿನಲ್ಲಿ ಗಗ್ಗರ ನಾದ ಮೊಳಗಲಿರುವುದು ವಿಶೇಷವಾಗಿದೆ. ಏಪ್ರಿಲ್ 7ರಿಂದ 9ರವರೆಗೆ ನಡೆಯಲಿರುವ ಈ ಮಹೋತ್ಸವವು ಭಕ್ತಿಭಾವದ ಸಂಗಮವಾಗಲಿದ್ದು, ನೂರಾರು ಭಕ್ತರನ್ನು ಸೆಳೆಯುವ ನಿರೀಕ್ಷೆಯಿದೆ. ಮೊದಲ ದಿನವಾದ ಏಪ್ರಿಲ್ 7ರಂದು ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ನಂತರದ ದಿನಗಳಲ್ಲಿ…

Read More

ಸಂಕಷ್ಟದ ಸಾಥಿಗೆ ಕೃತಜ್ಞತೆಯ ಹರಕೆ: ಕೇರಳದ ಅರ್ಜುನನ ತಾಯಿಯಿಂದ ಮಂಜೇಶ್ವರದ ಅಭ್ಯರ್ಥಿಗೆ ‘ಗೆಲುವಿನ ಇಡುಗಂಟು

ಮಂಜೇಶ್ವರ: ರಾಜಕೀಯದ ಆಚೆಗೂ ಮಾನವೀಯ ಸಂಬಂಧಗಳು ಎಷ್ಟು ಗಾಢವಾಗಿರುತ್ತವೆ ಎಂಬುದಕ್ಕೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಹಾಗೂ ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಕುಟುಂಬದ ನಡುವಿನ ಭೇಟಿ ಸಾಕ್ಷಿಯಾಗಿದೆ. ​ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಲಾರಿ ಸಹಿತ ಗಂಗಾವಳಿ ನದಿ ಪಾಲಾಗಿದ್ದ ಅರ್ಜುನನ ಪತ್ತೆಗಾಗಿ ನಡೆದ ಸುದೀರ್ಘ 70ಕ್ಕೂ ಹೆಚ್ಚು ದಿನಗಳ ಕಾರ್ಯಾಚರಣೆಯ ವೇಳೆ, ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಸೇತುವೆಯಂತೆ ನಿಂತು ಅಶ್ರಫ್…

Read More

ಕದ್ರಿ ಮೈದಾನದಲ್ಲಿ ಮಾ.26ರಿಂದ 29ರ ತನಕ ರಜತ ಮಹೋತ್ಸವ ಶ್ರೀ ರಾಮೋತ್ಸವ … !

ವಿಶ್ವ ಹಿಂದು ಪರಿಷತ್‌ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ ನಗರದ ಕದ್ರಿ ಮೈದಾನದಲ್ಲಿ 25ನೇ ವರ್ಷದ ಶ್ರೀ ರಾಮೋತ್ಸವ ಸಂಭ್ರಮವು ವೈದಿಕ ,ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಕೊನೆಯ ದಿನ ರಾವಣನ ದಹನದ ಮೂಲಕ ಕಾರ್ಯಕ್ರಮ ಸಮಾಪ್ತಿಯಾಗಲಿದೆ ಎಂದು ಶ್ರೀರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ ಎಂ.ಬಿ. ಪುರಾಣಿಕ್ ತಿಳಿಸಿದರು . ಅವರು ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಶ್ರೀ ರಾಮನ ಜನ್ಮ…

Read More

ಲವ್ Mocktail 3 ಬಿಡುಗಡೆ: ಭಾವನಾತ್ಮಕ ಕಥೆ ಮತ್ತೆ ಪ್ರೇಕ್ಷಕರ ಮುಂದೆ

ಕನ್ನಡ ಸಿನೆಮಾದಲ್ಲಿ ಪ್ರೀತಿ ಮತ್ತು ಭಾವನೆಗಳನ್ನು ಅತ್ಯಂತ ನೈಜವಾಗಿ ಚಿತ್ರಿಸಿದ ಸರಣಿಗಳಲ್ಲಿ ಒಂದಾದ Love Mocktail, ತನ್ನ ಮೂರನೇ ಮತ್ತು ಅಂತಿಮ ಅಧ್ಯಾಯದೊಂದಿಗೆ ಮತ್ತೆ ಪ್ರೇಕ್ಷಕರ ಹೃದಯಕ್ಕೆ ಹತ್ತಿರವಾಗುತ್ತದೆ. ಮೊದಲ ಎರಡು ಭಾಗಗಳಿಂದಲೇ ಅಪಾರ ಜನಪ್ರಿಯತೆ ಪಡೆದ ಈ ಸರಣಿ, ಜೀವನದ ಸಿಹಿ-ಕಹಿ ಅನುಭವಗಳನ್ನು ಸರಳವಾಗಿ ಹೇಳುವ ಮೂಲಕ ವಿಶೇಷ ಸ್ಥಾನವನ್ನು ಗಳಿಸಿದೆ. ಈಗ, ಆsame ಭಾವನಾತ್ಮಕ ಪಯಣವನ್ನು ಮುಂದುವರಿಸುತ್ತಾ, Love Mocktail 3 ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬಂದಿದೆ. Love Mocktail 3 ಕನ್ನಡ ಸಿನೆಮಾದಲ್ಲಿ…

Read More

ಮಾ. 26 ರಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ 14 ಮಹಿಳಾ ಸಾಧಕಿಯರಿಗೆ ಸನ್ಮಾನ ….!

ಮಂಗಳೂರು: ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 26ರಂದು ನಗರದ ಬಿಜೈನ ಮೆಸ್ಕಾಂ ಕಚೇರಿ ಬಳಿಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ‘ವಿಶೇಷ ಮಹಿಳಾ ದಿನಾಚರಣೆ’ ಮತ್ತು ಸಾಧಕಿಯರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ, ಹಿರಿಯ ಪತ್ರಕರ್ತರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಅವರು…

Read More

200 ಬಾಕ್ಸ್ ಮೀನುಗಳಿದ್ದ ಲಾರಿ ಕಳವು: ಇಬ್ಬರು ಬಂಧನ

ಕುಂಬಳೆ: ಬಂದಿಯೊಡ್ ಅಡ್ಕ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 200 ಬಾಕ್ಸ್ ಮೀನುಗಳಿದ್ದ ಲಾರಿಯನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಇಚ್ಚಿಲಂಪಾಡಿ ಕೊಡೀಯಮ್ಮ ನಿವಾಸಿ ಅಬ್ದುಲ್ಲ ಎ.ಪಿ (32) ಹಾಗೂ ಕುಂಬಳೆ ಎಡನಾಡು ಮುಕ್ಕರಿಕ್ಕಂಡದ ಮೊಹಮ್ಮದ್ ರಿಜ್ವಾನ್ (27) ಬಂಧಿತರು. ಅಡ್ಕ ಎಂ. ಸಕ್ಕರಿಯಾ ನೀಡಿದ ದೂರಿನ ಪ್ರಕಾರ, ಸೆಡ್.ಎಂ.ಎಸ್ ಫಿಶ್ ಸರ್ವಿಸ್ ಕಚೇರಿ ಸಮೀಪ ನಿಲ್ಲಿಸಿದ್ದ ಮೀನು ಲಾರಿಯೇ ಕಳುವಾಗಿದೆ. ಶನಿವಾರ ರಾತ್ರಿ 11.30 ಗಂಟೆಯಿಂದ ಮುಂದಿನ ದಿನ ಬೆಳಗ್ಗೆ 8 ಗಂಟೆಯೊಳಗಿನ…

Read More

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

ಬೆಳ್ತಂಗಡಿ (ಮೇ-26): ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆಯವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿಗೆ ಟೋಲ್ ಗೇಟ್ ಬೇಡ . ಇದರ ವಿರುದ್ಧ ಪಕ್ಷತೀತವಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರ ಪಣಕಜೆ ಟೋಲ್ ಗೇಟ್ ನಿರ್ಮಾಣ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರಿಗೆ…

Read More

ಹುತಾತ್ಮರ ದಿನಾಚರಣೆ: ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ, ಯುವಜನರಲ್ಲಿ ದೇಶಭಕ್ತಿ ಜಾಗೃತಿ

ಪುತ್ತೂರು/ಮಂಗಳೂರು, ಮಾರ್ಚ್ 23, 2026: ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಥಾಪರ್ ಅವರ ತ್ಯಾಗವನ್ನು ಸ್ಮರಿಸುವ ಹುತಾತ್ಮರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪಾದಯಾತ್ರೆ ನಡೆಯಿತು. ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (ಮೈ ಭಾರತ್), ದಕ್ಷಿಣ ಕನ್ನಡ, ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ 250ಕ್ಕೂ…

Read More
error: Content is protected !!