ಸಂಡೇ ಬಜಾರ್ಗೆ ಅವಕಾಶ ನೀಡುವಂತೆ ಆಗ್ರಹ: ಮನಪಾ ಎದುರು ಬೀದಿಬದಿ ವ್ಯಾಪಾರಿಗಳ ಅಹೋ ರಾತ್ರಿ ಧರಣಿ
ಮಂಗಳೂರು | ಜು. 9: ಬೀದಿಬದಿ ವ್ಯಾಪಾರಿಗಳ ಮೇಲಿನ ತೆರವು ಕಾರ್ಯಾಚರಣೆ ಖಂಡಿಸಿ ಹಾಗೂ ಸಂಡೇ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಅಹೋ ರಾತ್ರಿ ಧರಣಿ ಸತ್ಯಾಗ್ರಹ ಬುಧವಾರ ಆರಂಭವಾಯಿತು. ಧರಣಿಯ ವೇಳೆ ಮಹಿಳಾ ಬೀದಿಬದಿ ವ್ಯಾಪಾರಿಯೊಬ್ಬರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಚುನಾವಣೆ ವೇಳೆ ಬಡವರ ಮತ ಬೇಕಾಗುತ್ತದೆ. ಆದರೆ ವಾರದಲ್ಲಿ ಒಂದು ದಿನ ವ್ಯಾಪಾರ…
