ಕನ್ನಡ ಕಟ್ಟುವ ಕೆಲಸ ಕೇವಲ ಮಾತಿನಿಂದಲ್ಲ, ಹೃದಯದಿಂದ ಆಗಬೇಕು ಡಾ. ಸಿ ಸೋಮಶೇಖರ್.
ಕೋಲಾರ ಪತ್ರಿಕಾ ಭವನದಲ್ಲಿ ಕನ್ನಡ ಭವನ ಕಾಸರಗೋಡು ಮತ್ತು ಮೇಘ ಮೈತ್ರಿ ಸಾಹಿತ್ಯ ಸಂಘ ಬಾಗಲಕೋಟ, ಕಮತಗಿ ಸಂಯುಕ್ತ ಆಶ್ರಯದಲ್ಲಿ ನಡೆದ ಗಡಿನಾಡು ಸಾಹಿತ್ಯ ಸಮ್ಮೇಳನ 19.7.2025.ಶನಿವಾರ ನಡೆಯಿತು. ಕರ್ನಾಟಕ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಡಾ. ಸಿ ಸೋಮಶೇಖರ್ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. “ಗಡಿನಾಡು ಪ್ರದೇಶಗಳಲ್ಲಿ ಮಾತ್ರವಲ್ಲದೆ ಒಳನಾಡಿನಲ್ಲೂ ಕನ್ನಡಕ್ಕೆ, ಕನ್ನಡ ಶಾಲೆಗಳಿಗೆ, ಕನ್ನಡ ಸಾಹಿತ್ಯ ಕ್ಷೇತ್ರಗಳಲ್ಲಿಯೂ ಆತಂಕ ಹುಟ್ಟುವ ರೀತಿಯಲ್ಲಿ ಹಿನ್ನಡೆ ಕಾಣುತ್ತಿದೆ, ಕನ್ನಡ, ಕನ್ನಡ ಸಾಹಿತ್ಯ, ಸಂಸ್ಕೃತಿ ಪ್ರೀತಿಸುವ…
