ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷಚೇತನರ ಸಮಸ್ಯೆ ಪರಿಹಾರಕ್ಕೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ!
ಕುಂದಾಪುರ: ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ವಿಶೇಷಚೇತನರ ಪ್ರಮಾಣಪತ್ರ ಮಾಡಿಸಲು ಕುಂದಾಪುರ ಮತ್ತು ಬೈಂದೂರಿನ ಬೇರೆ ಬೇರೆ ಕಡೆಗಳಿಂದ ಬಂದಿದ್ದ ವಿಶೇಷಚೇತನರು ಪ್ರಮುಖ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯವಾಗದ ಕಾರಣ ಪ್ರಮಾಣಪತ್ರ ಸಿಗದೆ ನಿರಾಶರಾಗಿ ವಾಪಸ್ ಆದ ಘಟನೆ ಇತ್ತೀಚಿಗೆ ನಡೆದಿದ್ದು ಕೂಡಲೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರನ್ನು ನೇಮಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರಮುಖೇನ ಒತ್ತಾಯಿಸಿದ್ದಾರೆ….
