ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಜನವರಿ 4 ರಿಂದ 8 ರ ವರೆಗೆ ಮಂಗಳೂರಿನ ವಿವಿಧ ಧಾರ್ಮಿಕ ಕಾರ್ಯದಲ್ಲಿ ಭಾಗಿ …. ! ಭಕ್ತರಿಗೆ ಪಾದ ಪೂಜೆಗೆ ಅವಕಾಶ
ಮಂಗಳೂರು:ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಜನವರಿ 4 ರಂದು ಸಂಜೆ 4:00 ಗಂಟೆಗೆ ಸರಿಯಾಗಿ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿರುವರು ಎಂದು ಗೌರವಾಧ್ಯಕ್ಷರಾದ ಡಾ.ಎಂ ಬಿ ಪುರಾಣಿಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಮಠಾಧೀಶರ ಆಗಮನದ ಈ ಸಂದರ್ಭದಲ್ಲಿ ಪರ್ಯಾಯದ ಮಂಗಳೂರು’…