ಸಹ್ಯಾದ್ರಿಯ ಸೆರಗಿನ ಸಾಹಿತ್ಯ ಋಷಿ: ಮಂಜೇಶ್ವರದ ‘ಪೈ’ ಅಜ್ಜನಿಗೊಂದು ಪ್ರೀತಿಯ ನಮನ

​ನಮ್ಮ ಕರಾವಳಿಯ ಮಣ್ಣಿಗೆ ಒಂದು ವಿಚಿತ್ರ ಗುಣವಿದೆ. ಇಲ್ಲಿ ಅಲೆಗಳ ಸದ್ದಿನಲ್ಲಿ ಸಾಹಿತ್ಯವಿದೆ, ತೆಂಗಿನ ಮರಗಳ ಮರ್ಮರದಲ್ಲಿ ಕವಿತೆಯಿದೆ. ಈ ಮಣ್ಣಿನ ಗಂಧವನ್ನು ಜಗತ್ತಿನಾದ್ಯಂತ ಪಸರಿಸಿದ ಆ ಅಪ್ರತಿಮ ಚೇತನವೇ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳು. ಇಂದು ಅವರ ಹುಟ್ಟುಹಬ್ಬ. ಈ ಹೊತ್ತಿನಲ್ಲಿ ಅವರನ್ನೊಮ್ಮೆ ನೆನಪು ಮಾಡಿಕೊಳ್ಳುವುದು ಅಂದರೆ ಅದು ನಮ್ಮ ಅಸ್ಮಿತೆಯನ್ನು ನಾವು ಹುಡುಕಿಕೊಂಡಂತೆ.​ಪೈಗಳೆಂಬ ಜ್ಞಾನದ ಭಂಡಾರ​ಪೈಗಳು ಕೇವಲ ಕವಿಯಲ್ಲ, ಅವರೊಬ್ಬ ಚಲಿಸುವ ವಿಶ್ವಕೋಶ. ಮಂಜೇಶ್ವರದ ಆ ಪುಟ್ಟ ಮನೆಯಲ್ಲಿ ಕುಳಿತು, ಜಗತ್ತಿನ ಹತ್ತಾರು ಭಾಷೆಗಳನ್ನು…

Read More

ಮಂಗಳೂರು ಬಂದರಿಗೆ ರಷ್ಯಾ ತೈಲ ಟ್ಯಾಂಕರ್, ಅಮೆರಿಕ ಅನಿಲ ನೌಕೆ ಆಗಮನ

ಮಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮಂಗಳೂರಿನ ನವ ಮಂಗಳೂರು ಬಂದರಿಗೆ ರಷ್ಯಾದ ತೈಲ ಟ್ಯಾಂಕರ್ ಹಾಗೂ ಅಮೆರಿಕದ ಅನಿಲ ಸಾಗಣೆ ನೌಕೆ ಆಗಮಿಸಿರುವುದು ಗಮನ ಸೆಳೆಯುತ್ತಿದೆ. ರಷ್ಯಾದ “ಆಕ್ವಾ ಟೈಟಾನ್” (Aqua Titan) ಹೆಸರಿನ ಬೃಹತ್ ತೈಲ ಸಾಗಣೆ ಹಡಗು ಭಾನುವಾರ ಮಂಗಳೂರು ತಲುಪಿದೆ. ಮೂಲತಃ ಚೀನಾಕ್ಕೆ ತೆರಳಬೇಕಿದ್ದ ಈ ಹಡಗು ದಕ್ಷಿಣ ಚೀನಾ ಸಮುದ್ರದಲ್ಲಿ ಸಂಚರಿಸುತ್ತಿದ್ದ ವೇಳೆ ಕಳೆದ ವಾರದ ಆರಂಭದಲ್ಲಿ ಯು-ಟರ್ನ್ ಪಡೆದು ಭಾರತದತ್ತ ಮುಖ ಮಾಡಿತ್ತು ಎಂದು ತಿಳಿದುಬಂದಿದೆ. ಇದರ ಜೊತೆಗೆ…

Read More

ಮಾರ್ಚ್ 26ರಿಂದ 28ರವರೆಗೆ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 26ರಿಂದ 28ರವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತ್ರಿದಿನ ಸಮ್ಮೇಳನಕ್ಕೆ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಚಿದಂಬರ ಬೈಕಂಪಾಡಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸಾಹಿತ್ಯೋತ್ಸವದ ಅಂಗವಾಗಿ ಅಮ್ಮೆಂಬಳ ಬಾಳಪ್ಪ ದ್ವಾರದ ಉದ್ಘಾಟನೆ ನಡೆಯಲಿದ್ದು, “ತಂತ್ರಜ್ಞಾನ–ಸಾಹಿತ್ಯ–ಸಹಬಾಳ್ವೆ”…

Read More

ಮೊದಲ ವಾಹನ

ಒಂದು ಕಾಲವಿತ್ತು, ಆಗ ರೂ. 20 ಉಳಿಸಲು 20 ನಿಮಿಷ ನಡೆಯುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ 20 ನಿಮಿಷ ಉಳಿಸಲು 200 ರೂಪಾಯಿ ಖರ್ಚು ಮಾಡಲು ತಯಾರಿದ್ದಾರೆ. ಪ್ರತಿಯೊಬ್ಬರು ಓಡಾಡಲು ಸ್ವಂತ ಗಾಡಿಯನ್ನು ಇಟ್ಟುಕೊಂಡಿದ್ದಾರೆ.ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ಗಳಷ್ಟು ದೂರ ನಮ್ಮ ಮನೆಗೆ ಇದ್ದುದರಿಂದ ನಮಗೂ ಒಂದು ಗಾಡಿ ಅವಶ್ಯವಿದೆ ಎಂದು ನಮಗನಿಸುತ್ತಿತ್ತು. ಬೆರಳೆಣಿಕೆಯಷ್ಟು ಅಡಿಕೆ ಮರಗಳಿದ್ದ ತೋಟ ನಮ್ಮದು, ಮನೆಯಲ್ಲಿ ಅನಾರೋಗ್ಯದಿಂದ ಪೀಡಿತ ವಯಸ್ಸಾದ ಅತ್ತೆ ಮಾವ, ಇವೆಲ್ಲದುದರಿಂದ ಹಣ ಹೊಂದಿಸುವುದು ಕಷ್ಟವಿತ್ತು. ಆದರೆ ದೇವರ…

Read More

ಸಿದ್ದಾಪುರದಲ್ಲಿ ವಿಶ್ವ ಜಲದಿನಾಚರಣೆ: ಗಂಗಾಪೂಜೆ, ಗೋಪೂಜೆ ಮೂಲಕ ಜಲ ಸಂರಕ್ಷಣೆಗೆ ಕರೆ

ಸಿದ್ದಾಪುರ: ಗ್ರಾಮ ವಿಕಾಸ ಸಮಿತಿ, ಸಿದ್ದಾಪುರ ಹಾಗೂ ಪರ್ಯಾವರಣ ಗತಿವಿಧಿ ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದ ಇತಿಹಾಸ ಪ್ರಸಿದ್ಧ ಕಾಶಿಕಲ್ಲು ಕೆರೆ ವಠಾರದಲ್ಲಿ ವಿಶ್ವ ಜಲದಿನಾಚರಣೆ ಅಂಗವಾಗಿ ಗಂಗಾಪೂಜೆ, ಗೋಪೂಜೆ ಮತ್ತು ಭೂಮಿ ಸುಪೋಷಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಮಂಗಳೂರು ವಿಭಾಗದ ಗ್ರಾಮ ವಿಕಾಸ ಪರ್ಯಾವರಣ ವಿಭಾಗ ಪ್ರಮುಖರಾದ ಶ್ರೀಮತಿ ರಮಿತಾ ಸೂರ್ಯವಂಶಿ ಹಾಗೂ ಸಿದ್ದಾಪುರ ತಾಲೂಕು ಪರ್ಯಾವರಣ ಗತಿವಿಧಿ ಪ್ರಮುಖರಾದ ಆರ್ಗೋಡು ಶ್ರೀಕಾಂತ್ ಶೆಣೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಮಿತಾ ಸೂರ್ಯವಂಶಿ…

Read More

ಮಂಜೇಶ್ವರದಲ್ಲಿ ಯು.ಡಿ.ಎಫ್. ಅಬ್ಬರ: ಎ.ಕೆ.ಎಂ. ಅಶ್ರಫ್ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯು.ಡಿ.ಎಫ್. ಅಧಿಕೃತ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಉಪ್ಪಳದ ಲೀಗ್ ಕಚೇರಿಯಿಂದ ಯು.ಡಿ.ಎಫ್. ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಪಕ್ಷದ ಧ್ವಜಗಳನ್ನು ಹಿಡಿದು ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ್ದು, ಭಾರೀ ಜನಸಮೂಹ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶ್ರಫ್ ಅವರು, “ಮಂಜೇಶ್ವರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ…

Read More

ಮಂಗಳೂರಿನಲ್ಲಿ ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್ ನೂತನ ಶೋರೂಮ್ ಉದ್ಘಾಟನೆ

ಮಂಗಳೂರು: ಚೆಮ್ಮಣೂರು ಇಂಟರ್‌ನ್ಯಾಷನಲ್ ಜುವೆಲ್ಲರ್ಸ್‌ನ ನೂತನ ಶೋರೂಮ್ ಉದ್ಘಾಟನಾ ಕಾರ್ಯಕ್ರಮವು ಹಂಪನಕಟ್ಟೆಯ ಕ್ಲಾಕ್ ಟವರ್ ಸಮೀಪದಲ್ಲಿರುವ ಶೋರೂಮ್‌ನಲ್ಲಿ ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ಭಾನುವಾರ, ಮಾರ್ಚ್ 22ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ಅಭಿನಂದನೆ ಸಲ್ಲಿಸಿದರು . ಮುಖ್ಯ ಅತಿಥಿಯಾಗಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ, ಭಾಗವಹಿಸಿದರು. ವಿಶೇಷ ಅತಿಥಿಯಾಗಿ 812 ಕಿಮೀ ಓಟದ ವಿಶಿಷ್ಟ ವಿಶ್ವ ದಾಖಲೆ ಹಾಗೂ ಗಿನ್ನೆಸ್ ದಾಖಲೆ ಸಾಧಿಸಿರುವ ಚೆಮ್ಮಣೂರು ಮಾಲೀಕ…

Read More

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮ ದಿನಾಚರಣೆ: ಕೆ. ಸುರೇಂದ್ರನ್ ಭಾವನಾತ್ಮಕ ನಮನ

ಕಾಸರಗೋಡು: ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಜನ್ಮ ದಿನದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆ. ಸುರೇಂದ್ರನ್ ಅವರು, ರಾಷ್ಟ್ರಕವಿಗಳ ಜನ್ಮನಾಡಿನಲ್ಲಿ ಗಡಿನಾಡ ಕನ್ನಡಿಗರ ಜನ್ಮಸಿದ್ಧ ಹಕ್ಕುಗಳ ಸಂರಕ್ಷಣೆ ತನ್ನ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಮಂಜೇಶ್ವರ ಗೋವಿಂದ ಪೈ ಅವರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದೂ ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು…

Read More

ಹೆಜಮಾಡಿ ಟೋಲ್ ಬಳಿ ಟಯರ್ ಅಂಗಡಿಯಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಉಡುಪಿ: ಹೆಜಮಾಡಿ ಟೋಲ್ ಸಮೀಪದ ಟಯರ್ ಪಂಕ್ಚರ್ ಅಂಗಡಿಯಲ್ಲಿ ಭಾನುವಾರ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಯಿತು. ಅಗ್ನಿ ಅವಘಡದ ಪರಿಣಾಮ ಬಾನೆತ್ತರಕ್ಕೆ ಹೊಗೆ ಆವರಿಸಿಕೊಂಡಿದ್ದು, ಸುತ್ತಮುತ್ತಲಿನ ಗಿಡಮರಗಳು ಬೆಂಕಿಗಾಹುತಿಯಾದವು. ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಎಚ್ಚೆತ್ತು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳೀಯರ ಸಮಯಪ್ರಜ್ಞೆಯಿಂದ ಹತ್ತಿರದ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದ್ದು, ಭಾರೀ ಅನಾಹುತದಿಂದ ಪಾರುಗೊಂಡಂತಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ…

Read More

ಚಾರ್ಮಾಡಿ ಘಾಟ್ ಅಪಘಾತ: ಗಾಯಾಳು ವೃದ್ಧರೊಬ್ಬರು ಮೃತ್ಯು

ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಮೇಲನಹಳ್ಳಿ ಗ್ರಾಮದ ಒಟ್ಟು 10 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್‌ನ ಒಂಬತ್ತನೇ ತಿರುವಿನಲ್ಲಿ ವಾಹನದ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಒಂಬತ್ತು…

Read More
error: Content is protected !!