ಎನ್‌ಐಟಿಕೆ ಸುರತ್ಕಲ್: ಗಣಿಗಾರಿಕೆ ವೃತ್ತಿಪರರಿಗೆ ಆರೋಗ್ಯ, ಸುರಕ್ಷತೆ ಮತ್ತು OSHWC ಕೋಡ್ 2020 ಕುರಿತು ತರಬೇತಿ

ಕರ್ನಾಟಕದ ಸುರತ್ಕಲ್, ಜೂನ್ 8, 2026 — ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ಸುರತ್ಕಲ್‌ನ ಗಣಿಗಾರಿಕೆ ಇಂಜಿನಿಯರಿಂಗ್ ವಿಭಾಗವು “ಗಣಿಗಳಲ್ಲಿ ಆರೋಗ್ಯ ಮತ್ತು ಸುರಕ್ಷತೆ ಹಾಗೂ OSHWC ಕೋಡ್ 2020” ಎಂಬ ಆರು ದಿನಗಳ ಅಲ್ಪಾವಧಿ ತರಬೇತಿ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದೆ. ಈ ಕಾರ್ಯಕ್ರಮ ಜೂನ್ 8 ರಿಂದ 13ರವರೆಗೆ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಬಂದಿರುವ 31 ಗಣಿಗಾರಿಕೆ ವೃತ್ತಿಪರರು ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಎನ್‌ಐಟಿಕೆ ಸುರತ್ಕಲ್‌ನ ಉಪನಿರ್ದೇಶಕ ಪ್ರೊ. ಸುಭಾಷ್ ಸಿ. ಯಾರಗಲ್…

Read More

ಮಾಜಿ ಅತ್ತೆಯನ್ನೇ ವಿವಾಹವಾದ ಅಳಿಯ!

ಕಾನ್ಪುರದಲ್ಲಿ ವಿಚಿತ್ರ ಮದುವೆ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋ ಕಾನ್ಪುರ, ಜೂನ್ 9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅಚ್ಚರಿಯ ಹಾಗೂ ಚರ್ಚೆಗೆ ಗ್ರಾಸವಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಮಾಜಿ ಅತ್ತೆಯನ್ನೇ ವಿವಾಹವಾಗಿದ್ದು, ಈ ಸಂಬಂಧದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ವರದಿಗಳ ಪ್ರಕಾರ, ಕಾನ್ಪುರ ನಿವಾಸಿಯಾಗಿರುವ ವ್ಯಕ್ತಿಯೊಬ್ಬ ಕೆಲವು ವರ್ಷಗಳ ಹಿಂದೆ ವಿವಾಹವಾಗಿದ್ದ. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಪತ್ನಿಯ ತಾಯಿ ಆಗಾಗ ಅವರ ಮನೆಗೆ ಬಂದು…

Read More

ಕರ್ನಾಟಕದಲ್ಲಿ HIV ಪ್ರಕರಣಗಳ ಏರಿಕೆ; ಯುವಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ HIV/ಏಡ್ಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ (KSACS) ಅಂಕಿ-ಅಂಶಗಳ ಪ್ರಕಾರ, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಸಕ್ರಿಯ HIV ಸೋಂಕಿತರ ಸಂಖ್ಯೆ ಗಮನಾರ್ಹವಾಗಿ ಏರಿಕೆಯಾಗಿದೆ. 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ 62,664 ಸಕ್ರಿಯ HIV/ಏಡ್ಸ್ ಪ್ರಕರಣಗಳು ದಾಖಲಾಗಿದ್ದರೆ, 2025-26ನೇ ಸಾಲಿನಲ್ಲಿ ಈ ಸಂಖ್ಯೆ 66,606ಕ್ಕೆ ಏರಿಕೆಯಾಗಿದೆ. ಅಂದರೆ, ಕೇವಲ ಒಂದು ವರ್ಷದ ಅವಧಿಯಲ್ಲಿ ಸುಮಾರು 3,942 ಹೊಸ ಪ್ರಕರಣಗಳು ವರದಿಯಾಗಿವೆ. 18ರಿಂದ 35 ವರ್ಷ ವಯೋಮಾನದ…

Read More

ಸಮುದ್ರದ ಮಧ್ಯೆ ಯಕ್ಷಗಾನ ವೈಭವ: ಇತಿಹಾಸ ಸೃಷ್ಟಿಸಿದ ಯಕ್ಷಧ್ರುವ ಸಮುದ್ರಯಾನ

ಮಂಗಳೂರು: ಯಕ್ಷಗಾನ ಇತಿಹಾಸದಲ್ಲೇ ಮೊದಲ ಬಾರಿಗೆ ಸಮುದ್ರದ ಮಧ್ಯೆ ಐಷಾರಾಮಿ ಕೋರ್ಡೆಲಿಯಾ ಕ್ರೂಸ್ ಹಡಗಿನ ಮಾರ್ಕ್ಯೂ ಥಿಯೇಟರ್‌ನಲ್ಲಿ ಯಕ್ಷಗಾನ ಪ್ರದರ್ಶನ ನಡೆಯುವ ಮೂಲಕ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.), ಮಂಗಳೂರು ಹಾಗೂ ತರಂಗ ಸಂಗಮ, ಮುಂಬೈ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಯಕ್ಷಧ್ರುವ ಸಮುದ್ರಯಾನ’ ಕಾರ್ಯಕ್ರಮ ಯಕ್ಷಗಾನ ಪ್ರಿಯರಿಗೆ ಅಪೂರ್ವ ಅನುಭವವನ್ನು ನೀಡಿದೆ. ಜೂನ್ 1ರಿಂದ 5ರವರೆಗೆ ನಡೆದ ಈ ವಿಶೇಷ ಸಮುದ್ರಯಾನದಲ್ಲಿ ಸುಮಾರು 640ಕ್ಕೂ ಅಧಿಕ ತುಳು-ಕನ್ನಡಿಗ ಯಕ್ಷಗಾನ ಅಭಿಮಾನಿಗಳು,…

Read More

ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಬಡವರಿಗೆ ನಿವೇಶನ ನೀಡುವಲ್ಲಿ ವಿಳಂಬ, ಹೆಚ್ಚುವರಿ ಪಾವತಿ ಹೆಸರಿನಲ್ಲಿ ಶೋಷಣೆ: ಆರೋಪ ಮಂಗಳೂರು, ಜೂನ್ 9: ಮಧ್ಯಮ ವರ್ಗದ ಹಾಗೂ ದುಡಿಯುವ ಜನರ ಮೇಲೆ ಆಸ್ತಿ ತೆರಿಗೆ ಹೆಚ್ಚಳದ ಮೂಲಕ ಆರ್ಥಿಕ ಹೊರೆ ಹೇರಲಾಗುತ್ತಿದೆ. ಮತ್ತೊಂದೆಡೆ, ವರ್ಷಗಳಿಂದ ನಿವೇಶನಕ್ಕಾಗಿ ಕಾಯುತ್ತಿರುವ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವ ಬದಲು ಹೆಚ್ಚುವರಿ ಪಾವತಿಯ ಹೆಸರಿನಲ್ಲಿ ಮತ್ತಷ್ಟು ಶೋಷಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಿಪಿಐ(ಎಂ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ…

Read More

ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ – ಯು.ಟಿ ಖಾದರ್

ಮಂಗಳೂರು, ಜೂನ್ 9: ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಸಮನ್ವಯದಿಂದ ನಿರ್ವಹಿಸಬೇಕು ಎಂದು ತಿಳಿಸಿದರು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು…

Read More

ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ; ಜೂನ್ 9ರಿಂದ ಪರಿಷ್ಕೃತ ದರ ಜಾರಿ

ಉಡುಪಿ, ಜೂನ್ 8: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ.5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ನಗರದ ಡಯಾನ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಸೆಲ್ ದರ ಏರಿಕೆ, ವಾಹನಗಳ ನಿರ್ವಹಣಾ ವೆಚ್ಚ, ಬಿಡಿಭಾಗಗಳ ಬೆಲೆ ಹಾಗೂ ನೌಕರರ ವೇತನ ಹೆಚ್ಚಳದಿಂದ ಬಸ್ ಉದ್ಯಮ ತೀವ್ರ ಆರ್ಥಿಕ ಒತ್ತಡಕ್ಕೆ…

Read More

ಮೋದಿ ಸರಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ – ಸುಕುಮಾರ್ ತೊಕ್ಕೋಟು

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ ಹಾಗೂ ಬದುಕು ವಿನಾಶದತ್ತ ಸಾಗುತ್ತಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು ಅಭಿಪ್ರಾಯಪಟ್ಟರು. ಅವರು ಕಳೆದ ಎರಡು ದಿನಗಳಿಂದ ಕುತ್ತಾರ್ ನಲ್ಲಿರುವ ಮುನ್ನೂರು ಯುವಕ ಮಂಡಲದಲ್ಲಿ ಜರುಗಿದ CPIM ಉಳ್ಳಾಲ ವಲಯ ಮಟ್ಟದ ಅಧ್ಯಯನ ಶಿಬಿರವನ್ನು ಸಮಾರೋಪಗೊಳಿಸುತ್ತಾ ಈ…

Read More

ನ್ಯಾಷನಲ್ ಸಬ್ -ಜೂನಿಯರ್ ಗೋಲ್ಡ್ ಮೆಡೆಲ್ ಪಡೆದ ಶಿವಾನಿಗೆ ಕನ್ನಡ ಭವನದ ಡಾ ವಾಮನ್ ರಾವ್ ಬೇಕಲ್ ಅಭಿನಂದನೆ

ರಾಮಕ್ಷತ್ರಿಯ ಸಮಾಜದ ಶಿವಾನಿ ಕಿರಣ್ ರಾವ್ ನ್ಯಾಷನಲ್ 20ಕಿಲೋ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದು ಸಮಾಜಕ್ಕೆ ಹಾಗೂ ಕುಟುಂಬ ಕ್ಕೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯ. ಇವರು ಕೆ. ಡಿ. ಎಫ್. ಕರಾಟೆ ಅಂಡ್ ಫಿಟ್ನೆಸ್ ಅಕಾಡೆಮಿ, ಕುಂದಾಪುರ ಇದರ ವಿದ್ಯಾರ್ಥಿಯಾಗಿದ್ದಾರೆ. ಇವರೀಗೆ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ದ ಹೆಮ್ಮೆಯ ಗೌರವ ಅಭಿನಂದನೆಗಳು. ಶಿವಾನಿಯ ಅಪ್ರತಿಮ ಸಾಧನೆ ಉಳಿದವರೇಗೆ ಪ್ರೇರಣೆ ಯಾಗಲಿ ಎಂದು ಕನ್ನಡ ಭವನದ ಸ್ಥಾಪಕ…

Read More

ಜೆಇಇ ಅಡ್ವಾನ್ಸ್‌ನಲ್ಲಿ AIR 79: ಮಂಗಳೂರಿನ ವಿಶ್ರುತ್ ಕೃಷ್ಣ ಭಟ್‌ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

ಜೆಇಇ ಅಡ್ವಾನ್ಸ್ 2026ರಲ್ಲಿ ಆಲ್ ಇಂಡಿಯಾ(ಎಐಆರ್) 79ನೇ ರ‍್ಯಾಂಕ್ ಮತ್ತು ಜೆಇಇ ಮೈನ್ಸ್ 2026ರಲ್ಲಿ ಆಲ್ ಇಂಡಿಯಾ 335ನೇ ರ‍್ಯಾಂಕ್ ಗಳಿಸಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಂದೂರ್ ವೆಲ್ ನಿವಾಸಿ ಬಿ.ವಿಶ್ರುತ್‌ ಕೃಷ್ಣ ಆರ್.ಭಟ್‌ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಸನ್ಮಾನಿಸಿದರು. ಸುರತ್ಕಲ್ ಎನ್‌ಐಟಿಕೆ ಯಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಬಡೆಕೈ ರಾಮಚಂದ್ರ ಭಟ್ ಮತ್ತು ಮಂಗಳೂರಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ, ಡಾ.ಪೂರ್ಣಿಮಾ ಆರ್.ಭಟ್ ದಂಪತಿಗಳ ಪುತ್ರನಾಗಿರುವ ಈ…

Read More
error: Content is protected !!