ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಗಳೂರು: ಪವಿತ್ರ ರಮಝಾನ್ ತಿಂಗಳ ಒಂದು ತಿಂಗಳ ಉಪವಾಸವನ್ನು ಆಚರಿಸಿದ ಮುಸ್ಲಿಂ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದಲೇ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು, ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆಯಿತು. ಹಬ್ಬದ ಅಂಗವಾಗಿ ನೆರೆಮನೆ ಹಾಗೂ ಬಂಧು-ಬಳಗದ ಮನೆಗಳಿಗೆ ಭೇಟಿ ನೀಡಿ ಸೌಹಾರ್ದತೆಯನ್ನು ಬಲಪಡಿಸಲಾಯಿತು. ಜಿಲ್ಲೆಯ ಬಹುತೇಕ…

Read More

ಮಂಜೇಶ್ವರಾಧ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಜೇಶ್ವರ: ಪವಿತ್ರ ರಮಝಾನ್ ತಿಂಗಳ ಉಪವಾಸ ವ್ರತಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಮಂಜೇಶ್ವರದ ಮುಸ್ಲಿಂ ಬಾಂಧವರು ಇಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನಾದ್ಯಂತ ಜುಮಾ ಮಸೀದಿಗಳು ಹಾಗೂ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು ಮತ್ತು ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆದವು. ಹಬ್ಬದ ಅಂಗವಾಗಿ ನೆರೆಮನೆಯವರ ಹಾಗೂ ಬಂಧುಗಳ ಮನೆಗಳಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದತೆ ಪ್ರದರ್ಶಿಸಲಾಯಿತು. ಶುಕ್ರವಾರ ಮುಂಜಾನೆಯೇ ಹೊಸ ವಸ್ತ್ರ ಧರಿಸಿದ ಭಕ್ತಾದಿಗಳು ಉದ್ಯಾವರ ಜುಮಾ…

Read More

ತಲೆನೋವಿಗೆ ಔಷಧಿ ಸೇವಿಸಿ 10 ವರ್ಷದ ಬಾಲಕ ಸಾವು: ಕಡಬದಲ್ಲಿ ಪ್ರಕರಣ ದಾಖಲು

ಕಡಬ: ತಲೆನೋವಿನ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕಡಬ ತಾಲೂಕಿನಲ್ಲಿ ವರದಿಯಾಗಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ದೂರಿನಂತೆ, ಅವರ 10 ವರ್ಷದ ಮಗನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು. ಮಾರ್ಚ್ 18, 2026 ರಂದು ಸಂಜೆ ತಲೆನೋವಿಗೆಂದು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಬಳಿಕ ಬಾಲಕ ಅಸ್ವಸ್ಥಗೊಂಡು ಮನೆಯಲ್ಲಿ ಹೊರಳಾಡುತ್ತಿರುವುದಾಗಿ ಪತ್ನಿ ತಿಳಿಸಿದ್ದಾಳೆ. ತಕ್ಷಣ ಮನೆಗೆ ಬಂದ ಸಂಜೀವ ಪೂಜಾರಿ ಅವರು ಮಗನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ…

Read More

ಬಂಟ್ವಾಳದಲ್ಲಿ ಕುಡಿಯುವ ನೀರಿನ ಸಂಕಷ್ಟ: ನೇರಂಬೋಳು ನಿವಾಸಿಗಳ ಸಂಕಟ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ನೇರಂಬೋಳು ಪ್ರದೇಶದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾಗಿ, ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮೂರು ತಿಂಗಳಿನಿಂದ ಸಮರ್ಪಕವಾಗಿ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪುರಸಭೆಯ ಗಮನ ಸೆಳೆಯಲು ಮುಂದಾಗಿದ್ದಾರೆ. ಈ ಪ್ರದೇಶದಲ್ಲಿ ಎರಡು ದಿನಕ್ಕೊಮ್ಮೆ ಕೇವಲ ಅರ್ಧ ಗಂಟೆ ಮಾತ್ರ ನೀರು ಸರಬರಾಜಾಗುತ್ತಿದ್ದು, ಅದೂ ಸಹ ಸಮರ್ಪಕ ಒತ್ತಡದಲ್ಲಿ ಬರದೆ ಸುಮಾರು 750 ಲೀಟರ್ ಮಾತ್ರ ಸಂಗ್ರಹವಾಗುತ್ತಿದೆ. ಈ ಪ್ರಮಾಣ ದಿನನಿತ್ಯದ ಅಗತ್ಯಗಳಿಗೆ ಸಾಲದೆ, ಮನೆಮಠದ ಕೆಲಸಗಳು ಕಷ್ಟಕರವಾಗಿವೆ. ಆರ್ಥಿಕವಾಗಿ…

Read More

ಬಾಲಕಿಗೆ ಲೈಂಗಿಕ ಕಿರುಕುಳ: ಬಂಟ್ವಾಳದ ಯುವಕನ ಬಂಧನ

ಮಂಜೇಶ್ವರ: 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಟ್ವಾಳ ಮೂಲದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜಿಪಮೂಡು ನಿವಾಸಿ ಅಬ್ದುಲ್ ರಹಿಮಾನ್ (26) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಗೆ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದ ತಂಡ ತಲಪ್ಪಾಡಿ ಪ್ರದೇಶದಲ್ಲಿ…

Read More

ಯುಗಾದಿ ಹಬ್ಬಕ್ಕೆ ಕರಾವಳಿಗೆ ಶುಭಾಶಯ: ಶರವು ಮಹಾಗಣಪತಿ ದೇವಸ್ಥಾನದಲ್ಲಿ ಉತ್ಸವ ಆರಂಭ

ಮಂಗಳೂರು: ಕರಾವಳಿ ಭಾಗದ ಸಮಸ್ತರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಶರವು ಮಹಾಗಣಪತಿ ದೇವಾಲಯ ಹಾಗೂ ಆಡಳಿತ ಮಂಡಳಿಯ ಪರವಾಗಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಹೊಸ ಸಂವತ್ಸರವನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶರವು ಮಹಾಗಣಪತಿ ದೇವಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೂರ್ಯೋದಯ–ಸೂರ್ಯಾಸ್ತಗಳ ನಡುವೆ ಕಾಲಚಕ್ರ ನಿರಂತರವಾಗಿ ಮುಂದುವರಿಯುತ್ತಿದ್ದು, ವರ್ಷಗಳ ಬದಲಾವಣೆಯೊಂದಿಗೆ ಋತುಗಳ ಪರಿವರ್ತನೆ ಸಹ ಸಹಜವಾಗಿವೆ ಎಂದು ಹೇಳಿದರು. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಸಂವತ್ಸರ ಬದಲಾವಣೆಗೆ ವಿಶೇಷ ಮಹತ್ವವಿದ್ದು, ಯುಗಾದಿ…

Read More

ಗಡಿನಾಡ ಸಾಹಿತ್ಯದ ‘ಸ್ವಾರ್ಥ’ ಸಂಕಟ

ಕಾವಲುಗಾರರೇ ಬೇಲಿ ತಿಂದರೆ ಭಾಷೆಗೆಲ್ಲಿ ಉಳಿವು?​​ಗಡಿನಾಡು ಎನ್ನುವುದು ಕೇವಲ ಎರಡು ಭೂಪಟಗಳ ನಡುವಿನ ಗೆರೆಯಲ್ಲ; ಅದು ಎರಡು ಸಂಸ್ಕೃತಿಗಳ ತಾಯಿಬೇರುಗಳು ಬೆರೆತು ಅರಳುವ ಸಮೃದ್ಧ ತೋಟ. ಕಾಸರಗೋಡಿನ ಕಯ್ಯಾರ ಕಿಂಞಣ್ಣ ರೈಗಳಿಂದ ಹಿಡಿದು ಬೆಳಗಾವಿಯ ನಾಡೋಜ ಪಾಟೀಲ ಪುಟ್ಟಪ್ಪನವರವರೆಗೆ, ಗಡಿನಾಡ ಸಾಹಿತ್ಯ ಲೋಕವು ಅಸ್ಮಿತೆಯ ಕೆಚ್ಚನ್ನು ಕಾಯ್ದುಕೊಂಡು ಬಂದಿತ್ತು. ಆದರೆ ಇಂದು ಆ ಕೆಚ್ಚು ಆರಿದೆ; ಅದರ ಜಾಗದಲ್ಲಿ ‘ವೈಯಕ್ತಿಕ ಲಾಭದ’ ಹಸಿವು ಮನೆಮಾಡಿದೆ. ಭಾಷೆಯ ಹೆಸರಿನಲ್ಲಿ ನಡೆಯುತ್ತಿರುವ ಸ್ವಾರ್ಥದ ರಾಜಕಾರಣವು ಗಡಿನಾಡ ಸಾಹಿತ್ಯದ ಘನತೆಯನ್ನು ಹರಾಜಿಗಿಟ್ಟಿದೆ.​ಸ್ವಾರ್ಥದ…

Read More

ಮಂಗಳೂರಿನಲ್ಲಿ ರಾಮೋತ್ಸವಕ್ಕೆ ಚಾಲನೆ: ಕದ್ರಿ ಮೈದಾನದಲ್ಲಿ ಚಪ್ಪರ ಮುಹೂರ್ತ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ರಾಮೋತ್ಸವ ಸಮಿತಿ ಮಂಗಳೂರು ವತಿಯಿಂದ ಮಾರ್ಚ್ 26ರಿಂದ 29ರವರೆಗೆ ನಡೆಯಲಿರುವ 25ನೇ ವರ್ಷದ ಶ್ರೀ ರಾಮೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕದ್ರಿ ಮೈದಾನದಲ್ಲಿ ನೆರವೇರಿತು. ಈ ಕಾರ್ಯಕ್ರಮವು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ. ಕೃಷ್ಣ ಅಡಿಗ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಮೋತ್ಸವ ಸಮಿತಿ ಅಧ್ಯಕ್ಷ ಸುನಿಲ್ ಆಚಾರ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಶರಣ್ ಪಂಪವೆಲ್,…

Read More

ಉಪಚುನಾವಣೆ ಕಣ ರಂಗೇರಿತು: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಘೋಷಣೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಉಪಚುನಾವಣೆ ಕಣ ಮತ್ತಷ್ಟು ಚುರುಕುಗೊಂಡಿದೆ. ಮಾಜಿ ಸಚಿವರಾದ ಎಚ್.ವೈ. ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಈ ಎರಡೂ ಕ್ಷೇತ್ರಗಳು ಬಿಜೆಪಿಗೆ ಮಹತ್ವದ್ದಾಗಿದ್ದು, ಪಕ್ಷ ತನ್ನ ಪ್ರತಿಷ್ಠೆಯನ್ನು ಕಾಪಾಡಿಕೊಳ್ಳಬೇಕಾದ…

Read More

ಯುಗಾದಿಗೆ ತಂಪು ತಂದ ಮಳೆ: ಬಂಟ್ವಾಳದಲ್ಲಿ ಕೃಷಿಕರಿಗೆ ಕಳವಳ

ಬಂಟ್ವಾಳ: ಯುಗಾದಿ ಹಬ್ಬದಂದು ಬಂಟ್ವಾಳ ತಾಲೂಕಿನಾದ್ಯಂತ ಬೆಳಿಗ್ಗೆ ಸುರಿದ ಮಳೆ ಜನತೆಗೆ ತಂಪು ನೀಡಿದರೂ, ಕೃಷಿಕರಲ್ಲಿ ಆತಂಕ ಉಂಟುಮಾಡಿದೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಯಿಂದ ಆರಂಭವಾದ ಮಳೆ 7.30ರವರೆಗೆ ಮುಂದುವರಿದಿದ್ದು, ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಂಪು ತಂದಿದೆ. ಆದರೆ ಅಕಾಲಿಕ ಮಳೆಯ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಅಡಿಕೆ ಕೃಷಿಕರು ಈಗಾಗಲೇ ಕಾಳಜಿಯಲ್ಲಿದ್ದು, ಒಣಗಿಸಲು ಇಟ್ಟಿದ್ದ ಅಡಿಕೆ ಮಳೆಗೆ ಒದ್ದೆಯಾಗುವ ಭೀತಿ ಎದುರಾಗಿದೆ. ಜೊತೆಗೆ ಅಡಿಕೆ ತೋಟಗಳ…

Read More
error: Content is protected !!