ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಮಂಗಳೂರು: ಪವಿತ್ರ ರಮಝಾನ್ ತಿಂಗಳ ಒಂದು ತಿಂಗಳ ಉಪವಾಸವನ್ನು ಆಚರಿಸಿದ ಮುಸ್ಲಿಂ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆಯಿಂದಲೇ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು, ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆಯಿತು. ಹಬ್ಬದ ಅಂಗವಾಗಿ ನೆರೆಮನೆ ಹಾಗೂ ಬಂಧು-ಬಳಗದ ಮನೆಗಳಿಗೆ ಭೇಟಿ ನೀಡಿ ಸೌಹಾರ್ದತೆಯನ್ನು ಬಲಪಡಿಸಲಾಯಿತು. ಜಿಲ್ಲೆಯ ಬಹುತೇಕ…