ಮೂಡುಬಿದರೆಯಲ್ಲಿ ಅಕ್ರಮ ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ: 6 ಮಂದಿ ಬಂಧನ

ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ಬಿಡಲಾಗುತ್ತಿದ್ದು, ಹಣವನ್ನು ಪಣವಾಗಿ ಇಟ್ಟು ಜೂಜಾಟ ನಡೆಯುತ್ತಿತ್ತು. ಮೂಡುಬಿದರೆ…

Read More

ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ : SDPI ತೀವ್ರ ಖಂಡನೆ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕನನ್ನು ಧರ್ಮದ ಆಧಾರದ ಮೇಲೆ ಗುರುತಿಸಿ ಹಲ್ಲೆ ನಡೆಸಿರುವುದು ಸಂಘಟಿತ ದ್ವೇಷ ರಾಜಕಾರಣದ ಪ್ರತಿಫಲವಾಗಿದೆ. “ಅನೈತಿಕ ಪೊಲೀಸ್ ಗಿರಿ” ಎಂಬ ಹೆಸರಿನಲ್ಲಿ ಕೆಲ ಸಂಘಪರಿವಾರದ ಕಾರ್ಯಕರ್ತರು ಕಾನೂನನ್ನು ಕೈಗೆತ್ತಿಕೊಂಡು ನಿರಪರಾಧ ಯುವಕರ ಮೇಲೆ ದೌರ್ಜನ್ಯ ಎಸಗುತ್ತಿರುವುದು ಅತ್ಯಂತ ಖಂಡನೀಯ…

Read More

ಮಂಗಳೂರು–ತಿರುವನಂತಪುರಂ ಪ್ರಯಾಣಕ್ಕೆ ಹೊಸ ಸೌಲಭ್ಯ: ದಕ್ಷಿಣ ರೈಲ್ವೆಯಿಂದ ಮಹತ್ವದ ಘೋಷಣೆ: ಸ್ಪೆಷಲ್ ರೈಲು ಖಾಯಂ

ಮಂಗಳೂರು: ತಿರುವನಂತಪುರಂ ನಾರ್ತ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುತ್ತಿದ್ದ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ. Southern Railway ಪ್ರಕಟಣೆ ಪ್ರಕಾರ, ತಿರುವನಂತಪುರಂ ನಾರ್ತ್–ಮಂಗಳೂರು ಜಂಕ್ಷನ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್ (06313) ಮಾ.16ರಿಂದ ಖಾಯಂ ರೈಲು (16313) ಆಗಿ ಸಂಚರಿಸುತ್ತಿದೆ. ಅದೇ ರೀತಿ ಮಂಗಳೂರು ಜಂಕ್ಷನ್–ತಿರುವನಂತಪುರಂ ನಾರ್ತ್ ವೀಕ್ಲಿ ಸ್ಪೆಷಲ್ (06314) ಮಾ.17ರಿಂದ ಖಾಯಂ ರೈಲು (16314) ಆಗಿ ಸಂಚರಿಸಲಿದೆ. ಈ ರೈಲು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಪ್ರತಿ ಸೋಮವಾರ ಸಂಜೆ…

Read More

ದುರಾಡಳಿತ, ಭ್ರಷ್ಟಾಚಾರ ಆರೋಪ: ಮಂಗಳೂರು ಪಾಲಿಕೆ ಎದುರು ಬಿಜೆಪಿ ಪ್ರತಿಭಟನೆ

ಮಂಗಳೂರು: Mangaluru City Corporation ನಲ್ಲಿ ದುರಾಡಳಿತ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳು ಜಾರಿಯಲ್ಲಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾಲಿಕೆ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಬಿಜೆಪಿ, ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಮಂಡಲಗಳ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಆಕ್ರೋಶ ವ್ಯಕ್ತಪಡಿಸಿತು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಜನರ ಸಮಸ್ಯೆಗಳಿಗೆ ಪಾಲಿಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮೇಯರ್…

Read More

ಚಾಂದ್ರಮಾನ ಯುಗಾದಿ

[ಕಾಲಚಕ್ರದ ನವೋದಯ ಮತ್ತು ಸಾಂಸ್ಕೃತಿಕ ವೈಭವ] ​ಭಾರತೀಯ ಸನಾತನ ಪರಂಪರೆಯಲ್ಲಿ ಕಾಲಗಣನೆಗೆ ಕೇವಲ ಅಂಕಿ-ಅಂಶಗಳ ಬೆಲೆ ಮಾತ್ರವಲ್ಲ, ಅದಕ್ಕೊಂದು ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ದೃಷ್ಟಿಕೋನವಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಜನತೆಗೆ ಹೊಸ ವರ್ಷದ ಮುನ್ನುಡಿಯೇ ಚಾಂದ್ರಮಾನ ಯುಗಾದಿ.​ಯುಗಾದಿ: ಪದದ ಅರ್ಥ ವಿಸ್ತಾರ‘ಯುಗಾದಿ’ ಎನ್ನುವ ಪದವು ಸಂಸ್ಕೃತದ ‘ಯುಗ’ ಮತ್ತು ‘ಆದಿ’ ಎಂಬ ಎರಡು ಶಬ್ದಗಳಿಂದ ನಿಷ್ಪನ್ನವಾಗಿದೆ. ‘ಯುಗ’ ಎಂದರೆ ಒಂದು ಕಾಲಘಟ್ಟ ಅಥವಾ ನಿರ್ದಿಷ್ಟ ಕಾಲಾವಧಿ, ‘ಆದಿ’ ಎಂದರೆ ಆರಂಭ. ಅಂದರೆ, ಹೊಸ ಕಾಲದ ಉದಯ…

Read More

ಕೊಣಾಜೆ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದ್ದು, ಮಡ್ಯಾರ್ ನಿವಾಸಿಯಾಗಿದ್ದಾನೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ….

Read More

ಹೊಸ ವರ್ಷದ ಮೊದಲ ಯುಗಾದಿ  

ಭಾರತದ ವಿವಿಧ ಕಡೆಗಳಲ್ಲಿ ಈ ದಿನ ಹೊಸ ವರ್ಷವನ್ನಾಗಿ ಯುಗಾದಿಯನ್ನು ಆಚರಿಸುತ್ತಾರೆ. ಈ ಹಬ್ಬದ ವಿಶೇಷತೆ ಎಂದರೆ  ಬೇವು ಬೆಲ್ಲದ ಸವಿಯ ತಿಂದು ಜೀವನದಲ್ಲಿ ಬರುವಂತಹ ಸಿಹಿ ಕಹಿ ಘಟನೆಗಳನ್ನು ಸಮನಾಗಿ ಸ್ವೀಕರಿಸಬೇಕು  ಅವುಗಳನ್ನು ಸಮನಾಗಿ ಅನುಭವಿಸಬೇಕು ಎನ್ನುವ ತಾತ್ವಿಕ ಅವಕಾಶಗಳು ಅದರಲ್ಲಿ ಅಡಕವಾಗಿರುವುದು ವಿಶೇಷ.   ಪ್ರತಿಯೊಬ್ಬರ ಮನೆಯಲ್ಲಿ ಹೆಣ್ಣು ಮಕ್ಕಳು ಮುಂಜಾನೆ ಎದ್ದು, ಮನೆಯ ಅಂಗಳವನ್ನು ಸ್ವಚಮಾಡಿ, ರಂಗು ರಂಗಿನ ರಂಗೋಲಿಯನ್ನು  ಮನೆ ಮುಂದೆ ಬಿಡಿಸಿ,  ಮಾವಿನ ಎಲೆಯ ಜೊತೆಗೆ ಬೇವಿನ ಎಲೆಯ ತೋರಣವನ್ನು ಬಾಗಿಲಿಗೆ ಕಟ್ಟಿ ಸಂಭ್ರಮ ಪಡುತ್ತಾರೆ.  ಈ ದಿನ…

Read More

ಮಂಜೇಶ್ವರದಲ್ಲಿ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್‌ಗೆ ಭರ್ಜರಿ ಸ್ವಾಗತ

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ AKM Ashraf ಅವರಿಗೆ ಮಿಂಜಾ ಪಂಚಾಯತ್ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತ ದೊರೆಯಿತು. ಅಶ್ರಫ್ ಅವರು ಮಿಂಜಾ ಪಂಚಾಯತ್ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉತ್ಸಾಹದಿಂದ ಬರಮಾಡಿಕೊಂಡರು. ಮನ್ನಾಥ್ ಅಳುವ ಅಜೀಸ್ ಆಜಿ ಮೇರಿಕೆ , .ಎ.ಕೆ. ಆರಿಫ್ ಸೇರಿದಂತೆ ಹಲವು ಪ್ರಮುಖರು ಅವರೊಂದಿಗೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೋಡ್‌ಶೋ ಹಾಗೂ ಜನಸಂಪರ್ಕ ಕಾರ್ಯಕ್ರಮವೂ ನಡೆಯಿತು. ಯುಡಿಎಫ್ ಪರ ಮತದಾರರನ್ನು ಸೆಳೆಯುವ ಉದ್ದೇಶದಿಂದ…

Read More

ಕಾಸರಗೋಡು ಜಿಲ್ಲೆಯ ಕುಲಾಲ ಸಮಾಜದ ಮಕ್ಕಳಿಗೆ ಸವಲತ್ತುಗಳನ್ನು ಮರು ಸ್ಥಾಪಿಸಿದ ಕೇರಳ ಸರಕಾರ

ಕಳೆದ ವರ್ಷದಿಂದ ಕೇರಳ ಸರಕಾರದ e-disrict OEC portal ನಲ್ಲಿ ಕುಲಾಲ ಹೆಸರು ಕೈ ಬಿಟ್ಟ ಕಾರಣ ಜಾತಿ ಪ್ರಮಾಣಪತ್ರ ನೀಡಲು ಸಂಬಂಧಪಟ್ಟ ಅಧಿಕಾರಿಗಳು ನಿರಾಕರಿಸುತ್ತಿದ್ದರು. ಇದರಿಂದ ಕುಲಾಲ ಸಮಾಜದ ಮಕ್ಕಳಿಗೆ ಸರಕಾರದಿಂದ ಯಾವುದೇ ಸವಲತ್ತುಗಳು ಸಿಗುತ್ತಿರಲಿಲ್ಲ. ಇದನ್ನು ಮನಗಂಡು ಕುಲಾಲ ವೇದಿಕೆ ಮಂಜೇಶ್ವರದ ನೇತೃತ್ವದಲ್ಲಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು. ಈ ಮನವಿಯ ಒಂದು ಪ್ರತಿಯನ್ನು ಸಿಪಿಐಎಂ ನೇತಾರ ಕೆ ಆರ್ ಜಯಾನಂದರವರಿಗೂ ನೀಡಿದ್ದರು. ಈ ಮನವಿಯನ್ನು ಪುರಸ್ಕರಿಸಿ ಜಯಾನಂದರವರು ಸರಕಾರವನ್ನು ಒತ್ತಾಯಿಸಿ ಮರುಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ…

Read More

ಕೇರಳ ವಿಧಾನಸಭಾ ಚುನಾವಣೆ: ಕಾಸರಗೋಡು ಕ್ಷೇತ್ರದಲ್ಲಿ ಅಶ್ವಿನಿ ಎಂ.ಎಲ್‌ಗೆ ಬಿಜೆಪಿ ಅವಕಾಶ

ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತಿದ್ದು, ಕಾಸರಗೋಡು ಕ್ಷೇತ್ರಕ್ಕೆ M L Ashwini ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದಕ್ಕೂ ಮೊದಲು ಬಿಡುಗಡೆಗೊಂಡ ಮೊದಲ ಪಟ್ಟಿಯಲ್ಲಿ ಮಂಜೇಶ್ವರ ಕ್ಷೇತ್ರಕ್ಕೆ K Surendran ಅವರನ್ನು ಕಣಕ್ಕಿಳಿಸಲಾಗಿದ್ದು, ಇದೀಗ ಕಾಸರಗೋಡು ಕ್ಷೇತ್ರದಲ್ಲಿ ಅಶ್ವಿನಿ ಎಂ.ಎಲ್ ಹೆಸರು ಪ್ರಮುಖವಾಗಿ ಹೊರಹೊಮ್ಮಿದೆ. ಬಿಜೆಪಿ ರಾಜ್ಯ ಘಟಕದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅಶ್ವಿನಿ, ಕಾಸರಗೋಡು ಜಿಲ್ಲಾ ಅಧ್ಯಕ್ಷೆಯಾಗಿ ಗುರುತಿಸಿಕೊಂಡಿದ್ದು, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆಯಾಗಿಯೂ ಸೇವೆ…

Read More
error: Content is protected !!