ಕೊಳ್ನಾಡು: ಜಮಾಅತ್ ಇಸ್ಲಾಮಿ ಸಮಾಜಸೇವಾ ಘಟಕದಿಂದ ನೀರಿನ ಸಂಕಷ್ಟಕ್ಕೆ ಪರಿಹಾರ: ಮಂಚಿ ನೂಜಿಬೈಲ್‌ನಲ್ಲಿ ಸಾರ್ವಜನಿಕ ಕೊಳವೆ ಬಾವಿ ಉದ್ಘಾಟನೆ;

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ 8ರ ಮಂಚಿ ನೂಜಿಬೈಲ್‌ನ ಕಟ್ಟಪುಣಿ ಪ್ರದೇಶದಲ್ಲಿ, ಜಮಾಅತೆ ಇಸ್ಲಾಮಿ ಹಿಂದ್‌, ಸಮಾಜಸೇವಾ ಘಟಕದ ವತಿಯಿಂದ ನೂತನ ಸಾರ್ವಜನಿಕ ಕೊಳವೆ ಬಾವಿಯ ಹಸ್ತಾಂತರ ಕಾರ್ಯಕ್ರಮ 18/03/2026 ರಂದು ಸರಳವಾಗಿ ನಡೆಯಿತು. ಸ್ಥಳೀಯ ಜನರ ಬಹುಕಾಲದ ನೀರಿನ ಅವಶ್ಯಕತೆಯನ್ನು ಮನಗಂಡು ಈ ಸೇವಾ ಕಾರ್ಯ ಕೈಗೊಳ್ಳಲಾಗಿದ್ದು, ಕಾರ್ಯಕ್ರಮವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಈ ಪ್ರದೇಶದಲ್ಲಿ 20 ಕ್ಕಿಂತ ಹೆಚ್ಚು ಕುಟುಂಬಗಳು ಕುಡಿಯುವ ನೀರಿನ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ…

Read More

ಮೈಸೂರಿನ ನಾ. ನಾಗಚಂದ್ರರಿಗೆ ಕಾಸರಗೋಡಿನಲ್ಲಿ “ಕನ್ನಡ ಪಯಸ್ವಿನಿ ಪ್ರಶಸ್ತಿ”

ಕಾಸರಗೋಡು: ಮೈಸೂರಿನ ಖ್ಯಾತ ನಟ, ನಾಟಕಕಾರ, ನಿರ್ದೇಶಕ ಹಾಗೂ ರಂಗ ಸಂಘಟಕರಾದ ನಾ . ನಾಗಚಂದ್ರ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್‌ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ” ಪ್ರದಾನ ಮಾಡಲಾಗುತ್ತಿದೆ. ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಅಂಡ್ ಲೈಬ್ರರಿ y ಕಾಸರಗೋಡ್ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ Dr ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಈ ಗೌರವ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಮಾರ್ಚ್…

Read More

​ಕುಂಬ್ಳೆ: ಎ.ಕೆ.ಪಿ.ಎ ವತಿಯಿಂದ ಐಡಿ ಕಾರ್ಡ್ ವಿತರಣೆ ಹಾಗೂ ಇಫ್ತಾರ್ ಕೂಟ

​ಮಂಜೇಶ್ವರ: ಎ.ಕೆ.ಪಿ.ಎ (AKPA) ಕುಂಬ್ಳೆ ವಲಯದ ಆಭಿಮುಖದಡಿಯಲ್ಲಿ ಐಡಿ ಕಾರ್ಡ್ ವಿತರಣೆ ಮತ್ತು ಇಫ್ತಾರ್ ಕಾರ್ಯಕ್ರಮವನ್ನು ಮಾರ್ಚ್ 18 ರಂದು ಹೊಸಂಗಡಿಯ ಅಲೋರ್ ಪಾರ್ಟಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ​ವಲಯದ ಅಧ್ಯಕ್ಷರಾದ ಕರೀಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷರಾದ ಸುಗುಣನ್ ಇರಿಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪ್ರಜಿತ್ ಮತ್ತು ಇನ್-ಚಾರ್ಜ್ ಮನು ಎಲ್ಲೋರ ಅವರು ಮಾತನಾಡಿದರು.​ಕಾರ್ಯಕ್ರಮದಲ್ಲಿ ಹೊಸ ಸದಸ್ಯರಾದ ದೀಪಕ್, ಕಲರ್ ಜಯಪ್ರಕಾಶ್ ಮತ್ತು ವಿನ್ಸನ್ ಕಯ್ಯಾರ್ ಅವರಿಗೆ ಐಡಿ…

Read More

ಮಂಜೇಶ್ವರದ ಪೊಸೋಟು ಸರ್ವೀಸ್ ರಸ್ತೆಯಲ್ಲಿ ತೆರೆದ ಗುಂಡಿ – ತಪ್ಪದ ಅಪಾಯ, ಸಾರ್ವಜನಿಕರ ಆಕ್ರೋಶ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಪೊಸೋಟು ಸೇತುವೆಗೆ ತಾಗಿಕೊಂಡಿರುವ ಸರ್ವೀಸ್ ರಸ್ತೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬಲಿಯಾಗುತ್ತಿದ್ದಾರೆ. ನೀರು ಪೋಲಾಗುವುದನ್ನು ತಡೆಯಲು ತಿಂಗಳುಗಳ ಹಿಂದೆ ತೋಡಲಾದ ಗುಂಡಿಯನ್ನು ಇದುವರೆಗೆ ಮುಚ್ಚದ ಕಾರಣ, ಈ ಪ್ರದೇಶವು ಈಗ ಅಪಘಾತಗಳ ತಾಣವಾಗಿ ಮಾರ್ಪಟ್ಟಿದೆ. ​​ಕೆಲವು ತಿಂಗಳುಗಳ ಹಿಂದೆ ಈ ಸರ್ವೀಸ್ ರಸ್ತೆಯ ಅಡಿಯಲ್ಲಿ ಹಾದುಹೋಗುವ ಜಲಮಂಡಳಿಯ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿತ್ತು. ಇದನ್ನು ದುರಸ್ತಿ ಮಾಡುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಗೆ ತೀರಾ ಹತ್ತಿರದಲ್ಲೇ ದೊಡ್ಡ ಗುಂಡಿಯೊಂದನ್ನು ತೋಡಲಾಗಿತ್ತು. ಆದರೆ, ದುರಸ್ತಿ ಕಾರ್ಯ…

Read More

ಬಜ್ಪೆ ವ್ಯಾಪ್ತಿಯಲ್ಲಿ ಅಕ್ರಮ ದನ ಸಾಗಾಟ: 5 ದನಗಳ ರಕ್ಷಣೆ, ಆರೋಪಿಗಳು ಪರಾರಿ

ಮಂಗಳೂರು: ಬುಧವಾರ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಸಮೀಪ ಹಿಂಸಾತ್ಮಕವಾಗಿ ದನ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬಜರಂಗಿ ದಳ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಅನುಮಾನಾಸ್ಪದ ಕಾರನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ, ಆರೋಪಿಗಳು ಸ್ಥಳದಿಂದ ಪರಾರಿಯಾದರು. ಪರಿಶೀಲನೆ ವೇಳೆ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಐದು ದನಗಳನ್ನು ಸಾಗಾಟ ಮಾಡಲಾಗುತ್ತಿರುವುದು ಪತ್ತೆಯಾಯಿತು. ದನಗಳನ್ನು ರಕ್ಷಣೆಗೊಳಪಡಿಸಲಾಗಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ…

Read More

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ಸುದ್ದಿ: ತೋಳ ‘ಗೀತಾ’ಗೆ ಏಳು ಮರಿಗಳು

ಮಂಗಳೂರು: Pilikula Biological Park ನಲ್ಲಿ ಅಪರೂಪದ ಹಾಗೂ ಸಂತಸದ ಘಟನೆ ನಡೆದಿದೆ. ಭಾರತೀಯ ತೋಳ ‘ಗೀತಾ’ ಒಟ್ಟು ಏಳು ಮರಿಗಳಿಗೆ (ನಾಲ್ಕು ಗಂಡು, ಮೂರು ಹೆಣ್ಣು) ಜನ್ಮ ನೀಡಿದೆ. ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದ್ದು, ಇದು ಮೊದಲ ಯಶಸ್ವಿ ಸಂತಾನೋತ್ಪತ್ತಿಯಾಗಿರುವುದು ಮಹತ್ವದ ಮೈಲಿಗಲ್ಲಾಗಿದೆ. ಉದ್ಯಾನವನದ ಅಧಿಕಾರಿಗಳ ಪ್ರಕಾರ, ತಾಯಿ ತೋಳ ಹಾಗೂ ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಮತ್ತು ಪ್ರಾಣಿ ಪಾಲಕರು ಅವುಗಳನ್ನು ನಿತ್ಯವೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಪ್ರಾಣಿಗಳ ಸಂರಕ್ಷಣೆ…

Read More

ನೇತ್ರಾವತಿ ನದಿಯಲ್ಲಿ ಮುಳುಗಿ ಪಿಯು ವಿದ್ಯಾರ್ಥಿ ದುರ್ಮರಣ

ಮುಂಡಾಜೆ: ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನೇತ್ರಾವತಿ ನದಿಯಲ್ಲಿ ಪಿಯು ವಿದ್ಯಾರ್ಥಿಯೊಬ್ಬರು ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ. ನಿಶಾಂತ್ ಈಜಲು ನದಿಗೆ ತೆರಳಿದ ವೇಳೆ ಈ ಘಟನೆ ಸಂಭವಿಸಿದ್ದು, ಈಜುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕಾಸರಗೋಡಿನಲ್ಲಿ ಮಾರ್ಚ್ 28ರಂದು ಜಿಲ್ಲಾ ಚುಟುಕು ಸಾಹಿತ್ಯೋತ್ಸವ

ಕಾಸರಗೋಡು: ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೆಸರಾದ ಕನ್ನಡ ಗ್ರಾಮದಲ್ಲಿ 2026ರ ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಗ್ರಾಮ ಸಹಯೋಗದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಗೋ-ಕುಟೀರದಲ್ಲಿ ಮಧ್ಯಾಹ್ನ 2.30ರಿಂದ 4 ಗಂಟೆಯವರೆಗೆ ಚುಟುಕು ಸಾಹಿತ್ಯೋತ್ಸವ, ಬಹುಭಾಷಾ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ…

Read More

2028 ದೃಷ್ಟಿಯಲ್ಲಿ ಉಪಚುನಾವಣೆ: ಕಾಂಗ್ರೆಸ್ ದೀರ್ಘಕಾಲಿಕ ಲೆಕ್ಕಾಚಾರ

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದು, ಗೆಲುವೇ ಮುಖ್ಯ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ Lakshmi Hebbalkar ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಎಂಟು ಮಂದಿ ಆಕಾಂಕ್ಷಿಗಳ ಹೆಸರು ಚರ್ಚೆಯಾಗಿದೆ ಎಂದು ತಿಳಿಸಿದರು. ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಮಟ್ಟದ ಸಂಘಟನೆಗಳನ್ನು ಬಲಪಡಿಸುವ…

Read More

ಆಟೋ ಚಾಲಕರ ಬೇಡಿಕೆಗೆ ಸ್ಪಂದನೆ: ಬೆಂಗ್ರೆ ವಾರ್ಡ್‌ನಲ್ಲಿ ಮೇಲ್ಛಾವಣಿ ನಿರ್ಮಾಣ ಆರಂಭ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ನಲ್ಲಿ ವಿಶೇಷ ಅನುದಾನದಡಿ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿತು. ಈ ಕಾರ್ಯಕ್ರಮವನ್ನು ಶಾಸಕ Vedavyas Kamath ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ದಿನನಿತ್ಯ ದುಡಿಯುವ ಆಟೋ ಚಾಲಕರು ಶ್ರಮಿಕ ವರ್ಗಕ್ಕೆ ಸೇರಿದವರಾಗಿದ್ದು, ತಮ್ಮ ಜೀವನೋಪಾಯವಾದ ಆಟೋ ರಿಕ್ಷಾಗಳಿಗೆ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು. ತಾವು ಬಿಸಿಲಿನಲ್ಲಿ ದುಡಿಯುತ್ತಿದ್ದರೂ, ತಮ್ಮ ವಾಹನಗಳು ನೆರಳಿನಲ್ಲಿ ಇರಬೇಕೆಂಬ ಅವರ ಹಂಬಲದ ಹಿನ್ನೆಲೆಯಲ್ಲಿ…

Read More
error: Content is protected !!