Headlines

ವೀರಕಂಭ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ದ. ಕ. ಜಿ. ಪಂ.ಹಿರಿಯ ಪ್ರಾಥಮಿಕ ಶಾಲೆ, ಮಜಿ, ವೀರಕಂಭ ಇಲ್ಲಿ ಜೂಲೈ 7 ಮಂಗಳವಾರ ನಡೆಯಿತು.ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕ ನಿರ್ದೇಶಕರು ಹಾಗೂ ವೀರಕಂಭ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ದಿನೇಶ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಯ ಬದಿಯಲ್ಲಿರುವ…

Read More

ಡಾ. ಇಂದಿರಾ ಪ್ರಕಾಶ್ ಅವರಿಗೆ ‘ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ’ ಅಚೀವ್ಮೆಂಟ್ ಅವಾರ್ಡ್-2026

ಕಾಸರಗೋಡು, ಜು. 8: ಶಿವಮೊಗ್ಗ ಜಿಲ್ಲೆಯ ಇಂದಿರಾ ಪ್ರಕಾಶ್ ಅಕಾಡೆಮಿಯ ಸಂಸ್ಥಾಪಕರೂ, ಸಾಹಿತಿಯೂ ಆಗಿರುವ ಡಾ. ಇಂದಿರಾ ಪ್ರಕಾಶ್ ಎಸ್.ಎಸ್. ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ‘ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ’ ಅಚೀವ್ಮೆಂಟ್ ಅವಾರ್ಡ್-2026 ಘೋಷಿಸಲಾಗಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಈ ಕುರಿತು ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್….

Read More

ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ: ಇಂದು ಸಮಾಲೋಚನಾ ಸಭೆ

ಕಾಸರಗೋಡು, ಜು. 8: ಜುಲೈ 26ರಂದು ನಡೆಯಲಿರುವ ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನದ ಪೂರ್ವಸಿದ್ಧತೆಗಳ ಅಂಗವಾಗಿ ಸಮಾಲೋಚನಾ ಸಭೆಯನ್ನು ಇಂದು (ಬುಧವಾರ) ಸಂಜೆ 7.30ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದ ಗ್ರಂಥಾಲಯದಲ್ಲಿ ಆಯೋಜಿಸಲಾಗಿದೆ. ಸಮ್ಮೇಳನದ ಯಶಸ್ವಿ ಆಯೋಜನೆಗೆ ಅಗತ್ಯ ಸಲಹೆ-ಸೂಚನೆಗಳನ್ನು ಸಂಗ್ರಹಿಸುವುದು, ವಿವಿಧ ಉಪಸಮಿತಿಗಳ ರಚನೆ ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕನ್ನಡ ಭವನದ…

Read More

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಅಡಚಣೆ: ಫಡ್ನವೀಸ್‌ಗೆ ನಿಯೋಗ ಮನವಿ

ಕಾನೂನುಬದ್ಧ ವಾಹನಗಳಿಗೆ ತೊಂದರೆ ಆಗದಂತೆ ಕ್ರಮದ ಭರವಸೆ ದೆಹಲಿ : ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನುಬದ್ಧವಾಗಿ ಸಾಗಣೆಯಾಗುತ್ತಿರುವ ಅಡಿಕೆ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನಿಯೋಗ ಭೇಟಿ ಮಾಡಿ, ರೈತರು, ಅಡಿಕೆ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ದಕ್ಷಿಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾದ ಅಡಿಕೆಯು ಸಾವಿರಾರು ರೈತರ ಜೀವನಾಧಾರವಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು…

Read More

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ, ಭಾರತೀಯ ದಂಡ ಸಂಹಿತೆ ಕಲಂ 379ರಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂಬಾತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ.ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ ಹಾಗೂ ಸಿಪಿಸಿ ಶಿವಾನಂದ…

Read More

ವಿಟ್ಲ: ಸರಣಿ ಬ್ಯಾಟರಿ ಕಳ್ಳತನ ಪ್ರಕರಣ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ

ವಿಟ್ಲ: ರಸ್ತೆ ಬದಿ‌ ರಾತ್ರಿ‌ ವೇಳೆ ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳ್ಳತನ‌ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ವಿಟ್ಲ ಠಾಣಾ ಪೊಲೀಸರು ಅವರ ಬಳಿ‌ ಇದ್ದ ೧೦ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50 ವ.) ಹಾಗೂ ಕಾಸರಗೋಡು ಜಿಲ್ಲೆಯ ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33 ವ.) ಬಂಧಿತ ಆರೋಪಿಗಳು.‌ ಬಂಧಿತರ ಮೇಲೆ ವಿಟ್ಲ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಮಯ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳ್ಳತನ ಮಾಡಿದ…

Read More

ಅನ್ಸಿಬಾ ದೂರಿನ ಮೇರೆಗೆ ನಟಿ ಲಕ್ಷ್ಮಿಪ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು

ನಟಿ ಅನ್ಸಿಬಾ ಹಸನ್ ನೀಡಿದ ದೂರಿನ ಆಧಾರದ ಮೇಲೆ ನಟಿ ಲಕ್ಷ್ಮಿಪ್ರಿಯಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೃಪ್ಪೂಣಿತ್ತುರ ಪೊಲೀಸರು ಪ್ರಕರಣ ದಾಖಲಿಸಿದ್ದು, ಲಕ್ಷ್ಮಿಪ್ರಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯವೇ ನಿರ್ದೇಶನ ನೀಡಿತ್ತು. ಸುಳ್ಳು ದೂರಿನ ನೆಪದಲ್ಲಿ ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಅನ್ಸಿಬಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಲಕ್ಷ್ಮಿಪ್ರಿಯಾ ಅವರ ಪತಿ ಜಯೇಶ್ ಹಾಗೂ ಮಹಿಳಾ ಉಪನಿರೀಕ್ಷಕಿ ರೇಷ್ಮಾ ವಿರುದ್ಧವೂ ಪ್ರಕರಣ ದಾಖಲಿಸುವಂತೆ ತೃಪ್ಪೂಣಿತ್ತುರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರ್ದೇಶನ ನೀಡಿದೆ. ಈ ಹಿಂದೆ…

Read More

ವಿ.ಎ. ಅರುಣ್ ಕುಮಾರ್ ಅವರನ್ನು IHRD ನಿರ್ದೇಶಕ ಹುದ್ದೆಯಿಂದ ತೆರವು; ಎಂ.ವಿ. ರಾಜೇಶ್ ನೂತನ ನಿರ್ದೇಶಕ

ತಿರುವನಂತಪುರಂ:* ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಿಪಿಐ(ಎಂ) ನಾಯಕ ದಿವಂಗತ ವಿ.ಎಸ್. ಅಚ್ಯುತಾನಂದನ್ ಅವರ ಪುತ್ರ ವಿ.ಎ. ಅರುಣ್ ಕುಮಾರ್ ಅವರನ್ನು ಇನ್‌ಸ್ಟಿಟ್ಯೂಟ್ ಆಫ್ ಹ್ಯೂಮನ್ ರಿಸೋರ್ಸಸ್ ಡೆವಲಪ್‌ಮೆಂಟ್ (IHRD) ನಿರ್ದೇಶಕ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಪೂಂಜಾರ್ IHRD ಕಾಲೇಜಿನ ಪ್ರಾಂಶುಪಾಲರಾದ ಎಂ.ವಿ. ರಾಜೇಶ್ ಅವರನ್ನು ಹೊಸ IHRD ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ರಾಜೇಶ್ ಅವರು IHRDಯ ಹಳೆಯ ವಿದ್ಯಾರ್ಥಿಯೂ ಆಗಿದ್ದಾರೆ. ಮೂರು ವರ್ಷಗಳ ಹಿಂದೆ ಎಲ್‌ಡಿಎಫ್ (LDF) ಸರ್ಕಾರವು ವಿ.ಎ. ಅರುಣ್ ಕುಮಾರ್ ಅವರಿಗೆ IHRDಯ ನಿರ್ದೇಶಕ-ಇನ್-ಚಾರ್ಜ್…

Read More

ವಯನಾಡು ಕಳ್ಳಾಡಿ ಭೂಕುಸಿತ: ಸರ್ಕಾರದ ಕ್ರಮಗಳಿಗೆ ಬೆಂಬಲ, ಮೃತರ ಕುಟುಂಬಗಳಿಗೆ ತುರ್ತು ಪರಿಹಾರ ನೀಡಬೇಕು – ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್

ವಯನಾಡಿನ ಮೇಪ್ಪಾಡಿ–ಕಳ್ಳಾಡಿ ಸುರಂಗ ಮಾರ್ಗ ನಿರ್ಮಾಣ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ದುರಂತದ ಕುರಿತು ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದಾರೆ. “ಈ ದುರಂತ ಅತ್ಯಂತ ದಾರುಣ ಮತ್ತು ಬೆಚ್ಚಿಬೀಳಿಸುವಂತದ್ದು. ಸದ್ಯದ ಅಗತ್ಯವೆಂದರೆ ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸುವುದು ಮತ್ತು ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ಒದಗಿಸುವುದು. ಮಣ್ಣಿನಡಿ ಸಿಲುಕಿರುವ ಎಲ್ಲರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಹೊರತೆಗೆದುಕೊಳ್ಳಲು ತಕ್ಷಣದ ಕ್ರಮ ಕೈಗೊಳ್ಳಬೇಕು. ಸರ್ಕಾರ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯಾಚರಣೆಗೆ ನನ್ನ ಸಂಪೂರ್ಣ ಬೆಂಬಲವಿದೆ” ಎಂದು ಅವರು ತಿಳಿಸಿದ್ದಾರೆ. ದುರಂತದಲ್ಲಿ…

Read More

ಬುಲೆಟ್ ಬೈಕ್‌ನಲ್ಲಿ ಎಂಡಿಎಂಎ ಸಾಗಾಟ; ತೃಕ್ಕರಿಪ್ಪೂರಿನಲ್ಲಿ ಇಬ್ಬರು ಯುವಕರ ಬಂಧನ, ಬಂಧಿತ ಮುನೀರ್ ಜಿಲ್ಲೆಯ ಪ್ರಮುಖ ಮಾದಕವಸ್ತು ಜಾಲದ ಪ್ರಮುಖ ಆರೋಪಿ

ಕಾಸರಗೋಡು: ಆಪರೇಷನ್ ತೂಫಾನ್ ಕಾರ್ಯಾಚರಣೆಯ ಭಾಗವಾಗಿ ಚಂದೇರ ಪೊಲೀಸರು ತೃಕ್ಕರಿಪ್ಪೂರಿನಲ್ಲಿ ನಡೆಸಿದ ದಾಳಿಯಲ್ಲಿ 1.20 ಗ್ರಾಂ ಎಂಡಿಎಂಎ (MDMA) ಸಹಿತ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಧಿತರು ಮಡಕ್ಕಾಲ್ ನಿವಾಸಿ ಎಂ.ಕೆ. ಮುನೀರ್ (39) ಮತ್ತು ಪಯ್ಯನ್ನೂರು ಕವ್ವಾಯಿ ನಿವಾಸಿ ಮೊಹಮ್ಮದ್ ಸಾಜಿದ್ (35) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಸುಮಾರು 10 ಗಂಟೆಗೆ ಎಸ್‌ಐ ಎಂ. ಅಜ್ಮಲ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದರು. ತೃಕ್ಕರಿಪ್ಪೂರು ಶಾಬಾ ಶೆಟ್ಟಿ ರಸ್ತೆ ಜಂಕ್ಷನ್‌ನಲ್ಲಿ…

Read More
error: Content is protected !!