ಉಡುಪಿ: ಅಪ್ರೆಂಟಿಶಿಪ್ ಮೇಳ, ಉದ್ಯೋಗ ಮೇಳಕ್ಕೆ ಚಾಲನೆ

ಉಡುಪಿ: ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು. ಉದ್ಯೋಗ ಮೇಳಕ್ಕೆ‌ ಚಾಲನೆ ನೀಡಿ ಮಾತನಾಡಿದ ಮೂಡಬಿದಿರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು, 140 ಕೋಟಿಗಿಂತಲೂ ಹೆಚ್ಚು ಜನಸಂಖ್ಯೆ…

Read More

ಹಾರ್ಮುಝ್ ಮೂಲಕ 46,000 ಎಂಟಿ LPG: ‘ಶಿವಾಲಿಕ್’ ಹಡಗು ಮುಂದ್ರಾ ಬಂದರಿಗೆ ಆಗಮನ

ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್‌ಪಿಜಿ ಹಡಗು ಶಿವಾಲಿಕ್ ಗುಜರಾತ್‌ನ ಮುಂದ್ರಾ ಬಂದರಿನ ಎಲ್‌ಪಿಜಿ ಟರ್ಮಿನಲ್‌ಗೆ ಆಗಮಿಸಿದೆ. 46,000 ಎಂಟಿ ಪ್ರಮಾಣ ಎಲ್‌ಪಿಜಿಯನ್ನು ಹಡಗು ಹೊತ್ತಿದೆ. ಈ ಪೈಕಿ 20,000 ಎಂಟಿಯಷ್ಟು ಗ್ಯಾಸ್‌ನ್ನು ಭಾರತದ ಅತಿದೊಡ್ಡ ಖಾಸಗಿ ಮತ್ತು ವಾಣಿಜ್ಯ ಬಂದರು ಮುಂದ್ರಾದಲ್ಲಿ ಒಟ್ಟು ಇಳಿಸಲಾಗುತ್ತದೆ ಹಾಗೂ 26,000 ಎಂಟಿ ಗ್ಯಾಸ್‌ನ್ನು ನವ ಮಂಗಳೂರು ಬಂದರಿನ ಸಿಂಗಲ್ ಪಾಯಿಂಟ್ ಮೂರಿಂಗ್ ಸೌಲಭ್ಯದಲ್ಲಿ ಇಳಿಸಲಾಗುವುದು.ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬುಕ್ ಮಾಡಿರುವ ಎಲ್‌ಪಿಜಿಯನ್ನು ಹಡಗು…

Read More

ಉಡುಪಿ: ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ- ಕಾರಣ ನಿಗೂಢ!

ಉಡುಪಿ: ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ. ಎಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ‌ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Read More

‘ಕೆಡಿ – ದಿ ಡೆವಿಲ್’ ಹಾಡಿಗೆ ವಿವಾದದ ಬೆಂಕಿ – ಡಬಲ್ ಮೀನಿಂಗ್‌ಗೆ ಕನ್ನಡಿಗರ ಆಕ್ರೋಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ – ದಿ ಡೆವಿಲ್’ ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ಬೆನ್ನಲ್ಲೇ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ದೇಶಕ ಜೋಗಿ ಪ್ರೇಮ್ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಈ ಹಾಡಿನ ಸಾಹಿತ್ಯವು ಅತ್ಯಂತ ಅಸಭ್ಯತೆಯಿಂದ ಕೂಡಿದೆ ಮತ್ತು ದ್ವಂದ್ವಾರ್ಥ (Double Meaning) ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಚಿತ್ರದ ಹಾಡಿನಲ್ಲಿ ಬಳಸಲಾಗಿರುವ ಕೆಲವು ಪದಗಳು ಸಭ್ಯ ಸಮಾಜಕ್ಕೆ ಮುಜುಗರ…

Read More

ಉಪ್ಪಿನಂಗಡಿ ಬಳಿ ಭೀಕರ ಅಪಘಾತ: ಐದು ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಸಮೀಪದ ಕಲ್ಲೇರಿ ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು ಸುಹೈರಾ (5) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ತಾಯಿ ಸಾಜಿರಾ (33) ಮತ್ತು ಅಜ್ಜ ಇಸ್ಮಾಯಿಲ್ (60) ಸೇರಿದ್ದಾರೆ. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಹಾಗೂ ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದ ವೇಳೆ, ವೇಣೂರು ಮೂಲದ ಶಿವಪ್ರಸಾದ್…

Read More

ಮಂಜೇಶ್ವರ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ: ಗೆಲುವಿಗೆ ಶ್ರಮಿಸಲು ಶೋಭಾ ಕರಂದ್ಲಾಜೆ ಕರೆ

ಬಿಜೆಪಿ ನೇತೃತ್ವದ ಎನ್‌ಡಿಎ ಮಂಜೇಶ್ವರ ಮಂಡಲ ಚುನಾವಣಾ ಕಾರ್ಯಾಲಯವು ಉಪ್ಪಳದ ಸೋಂಕಾಲಿನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಕೇಂದ್ರ ಉದ್ಯೋಗ ಖಾತೆ ಸಹ ಸಚಿವೆ ಹಾಗೂ ಕೇರಳ ವಿಧಾನಸಭಾ ಚುನಾವಣೆಯ ಕೋಝಿಕ್ಕೋಡ್ ವಲಯ ಉಸ್ತುವಾರಿ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇನ್ನುಳಿದ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಮಂಜೇಶ್ವರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಕೇರಳದಲ್ಲಿ ಈ ಬಾರಿ ಬಿಜೆಪಿ ನಿರ್ಣಾಯಕ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ. ಪ್ರಬಲ ತೃತೀಯ ಶಕ್ತಿಯಾಗಿ ಬೆಳೆಯುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು….

Read More

ಮೂಡುಬಿದಿರೆ ಬಳಿ ಬಸ್–ಟೆಂಪೋ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಿನಿ ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ Lester David D’Souza (30) ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ವಿರುದ್ಧ ದಿಕ್ಕಿನಲ್ಲಿ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಟೆಂಪೋ ಚಾಲಕ ಸ್ಥಳದಲ್ಲೇ…

Read More

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ

ಪುತ್ತೂರು: ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ i ಅವರಿಗೆ ಹೈ ಕೋರ್ಟ್ ಒಫ್ ಕರ್ನಾಟಕ ಆದೇಶದಂತೆ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ಈ ಕುರಿತು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದು, ಗಡಿಪಾರು ಅವಧಿ ಮಾರ್ಚ್ 16ರಿಂದ ಸೆಪ್ಟೆಂಬರ್ 16ರವರೆಗೆ ಜಾರಿಯಲ್ಲಿರಲಿದೆ. ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ…

Read More

ಉಡುಪಿ ಕಟಪಾಡಿ ಹೆದ್ದಾರಿಯಲ್ಲಿ ಮಗುಚಿದ ಗ್ಯಾಸ್ ಟ್ಯಾಂಕರ್ ತೆರವು: 16 ಗಂಟೆಗಳ ಕಾರ್ಯಾಚರಣೆಯ ಬಳಿಕ ಸಂಚಾರ ಪುನರಾರಂಭ

ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿಬಿದ್ದ ಗ್ಯಾಸ್ ಟ್ಯಾಂಕರ್ ಅನ್ನು ಸತತ 16 ಗಂಟೆಗಳ ಕಾರ್ಯಾಚರಣೆಯ ಮೂಲಕ ಅಧಿಕಾರಿಗಳು ಯಶಸ್ವಿಯಾಗಿ ತೆರವುಗೊಳಿಸಿದರು. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಪುನರಾರಂಭಿಸಲಾಯಿತು. ಟ್ಯಾಂಕರ್ ಮಗುಚಿದ ಸಂದರ್ಭದಲ್ಲಿ ಎಲ್‌ಪಿಜಿ ಅನಿಲ ಸೋರಿಕೆ ಸಂಭವಿಸಿದ್ದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕಾರ್ಯಾಚರಣೆಯ ಭಾಗವಾಗಿ ಮಂಗಳೂರಿನಿಂದ ಭಾರತ್ ಗ್ಯಾಸ್‌ನ…

Read More

ದೇವರಿಗಿಲ್ಲ ಗುರು-ದಕ್ಷಿಣೆ:ಆದರೂ ಬರುವರಲ್ಲ ಪ್ರದಕ್ಷಿಣೆ….

ಓಂ ಶ್ರೀ ಸಾಯಿರಾಂ “ಜ್ಞಾನಭಂಡಾರದಲಿ ವಜ್ರವ,ಮುತ್ತುರತ್ನವ ಪೋಣಿಸಿದ ಅಕ್ಷರಧಾರೆ ಪರಿಚಯಿಸಿದ ಗುರುಗಳು,ಸಹಾನುಭೂತಿಯ ದ್ಯೋತಕ, ನಿಷ್ಟೆಯಿಂದ ತನ್ನ ಕಾರ್ಯವನ್ನು ಸಫಲತೆಯ ಕಡೆಗೆ ಸಾಗಿಸುವ ಪ್ರಯತ್ನ,ಶ್ರಮಿಸಿದರೆ ಯಾವ ಕಾರ್ಯವೂ ಕಠಿಣವಲ್ಲ ಎಂದು ಮನದಟ್ಟು ಮಾಡುವ ಯುವ ಹುಮ್ಮಸ್ಸು,ಸಹೃದಯಿ,ಮನುಷ್ಯ ಸ್ವಭಾವದ ಮನಸ್ಸಿಗೆ ನಿಮ್ಮ ಸೇವಾಮನೋಭಾವ ವೇ ಮಾದರಿ. ಸತತ ಪರಿಶ್ರಮ ದ ಉತ್ತುಂಗ ಆಲೋಚನೆಯ ನಿಮ್ಮ ವಿದ್ಯಾಕ್ಷೇತ್ರದ ಸೇವೆ ಅಪಾರ. ನಿಮ್ಮ ಕಠಿಣ ಪರಿಶ್ರಮದ ರೀತಿನೀತಿ ಅನುಸರಿಸಿದರೆ ವಿದ್ಯಾರ್ಥಿ ಜೀವನದಲ್ಲೂ ಉನ್ನತಿಯ ಸ್ಥಾನ ಅಲಂಕರಿಸಬಲ್ಲ ಎಂದರೆ ಸಂಶಯವಿಲ್ಲ.ನಿಮ್ಮ ಜೊತೆ ಸೇವೆ ಮಾಡಿದ…

Read More
error: Content is protected !!