ಜೆಇಇ ಅಡ್ವಾನ್ಸ್ನಲ್ಲಿ AIR 79: ಮಂಗಳೂರಿನ ವಿಶ್ರುತ್ ಕೃಷ್ಣ ಭಟ್ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ
ಜೆಇಇ ಅಡ್ವಾನ್ಸ್ 2026ರಲ್ಲಿ ಆಲ್ ಇಂಡಿಯಾ(ಎಐಆರ್) 79ನೇ ರ್ಯಾಂಕ್ ಮತ್ತು ಜೆಇಇ ಮೈನ್ಸ್ 2026ರಲ್ಲಿ ಆಲ್ ಇಂಡಿಯಾ 335ನೇ ರ್ಯಾಂಕ್ ಗಳಿಸಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಂದೂರ್ ವೆಲ್ ನಿವಾಸಿ ಬಿ.ವಿಶ್ರುತ್ ಕೃಷ್ಣ ಆರ್.ಭಟ್ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಸನ್ಮಾನಿಸಿದರು. ಸುರತ್ಕಲ್ ಎನ್ಐಟಿಕೆ ಯಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಬಡೆಕೈ ರಾಮಚಂದ್ರ ಭಟ್ ಮತ್ತು ಮಂಗಳೂರಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ, ಡಾ.ಪೂರ್ಣಿಮಾ ಆರ್.ಭಟ್ ದಂಪತಿಗಳ ಪುತ್ರನಾಗಿರುವ ಈ…