ತುಳು ಕಥಾಸಂಕಲನ ‘ನಾಕೂರು’ ತೆಲುಗು ಅನುವಾದ ಕೃತಿ ಬಿಡುಗಡೆ
ಮಂಗಳೂರು: ಹಿರಿಯ ಕವಿ–ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರ ತುಳು ಭಾಷೆಯ ಹತ್ತು ಆಯ್ದ ಸಣ್ಣಕಥೆಗಳನ್ನು ಹೈದರಾಬಾದ್ನ ರಂಗನಾಥ ರಾವ್ ಅವರು ತೆಲುಗಿಗೆ ಅನುವಾದಿಸಿರುವ ‘ನಾಕೂರು’ ಕೃತಿಯನ್ನು ನಗರದ ಪತ್ರಿಕಾಭವನದಲ್ಲಿ ಇಂದು ಬಿಡುಗಡೆಗೊಳಿಸಲಾಯಿತು. ತುಳುನಾಡಿನ ಬದುಕು, ಸಂಸ್ಕೃತಿ, ಜಾನಪದ ಹಾಗೂ ಪ್ರಾದೇಶಿಕ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ಈ ಕಥೆಗಳು ಮೊದಲ ಬಾರಿಗೆ ತುಳುವಿನಿಂದ ತೆಲುಗಿಗೆ ಅನುವಾದಗೊಂಡು ಪುಸ್ತಕ ರೂಪದಲ್ಲಿ ಪ್ರಕಟವಾಗಿದ್ದು, ತೆಲುಗು ಓದುಗರಿಗೆ ತುಳುನಾಡಿನ ಜೀವನಶೈಲಿ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಮಹತ್ವದ ಕೃತಿಯಾಗಿದೆ. ಕಾರ್ಯಕ್ರಮದಲ್ಲಿ ಖ್ಯಾತ ಲೇಖಕ ಡಾ….
