ಚಿನ್ನಾಭರಣದ ತೂಕ ಹೆಚ್ಚಿಸಿ ಬ್ಯಾಂಕ್ಗೆ ವಂಚನೆ ಯತ್ನ: ಇಬ್ಬರ ಬಂಧನ
120 ಗ್ರಾಂ ಚಿನ್ನ ಅಡವಿಡಲು ಬಂದಿದ್ದ ಆರೋಪಿಗಳು ಪೊಲೀಸರ ಬಲೆಗೆ ಕಡಬ, ಜುಲೈ 6: ಚಿನ್ನಾಭರಣಗಳನ್ನು ಕೃತಕವಾಗಿ ಹೆಚ್ಚು ತೂಕ ಬರುವಂತೆ ಮಾಡಿ ಬ್ಯಾಂಕ್ನಲ್ಲಿ ಅಡವಿಟ್ಟು ಹಣ ಪಡೆಯುವ ಮೂಲಕ ವಂಚನೆ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ಜುಲೈ 3ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವ…
