ಡಿ.16ರಂದು “ಕೊಂದವರು ಯಾರು ?” ಆಂದೋಲನ- ಸಾವಿರಾರು ಮಹಿಳೆಯರಿಂದ ಮೌನ ಮೆರವಣಿಗೆ
ಉಡುಪಿ:ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಎಸ್ಐಟಿ , ಆ ವ್ಯಾಪ್ತಿಯಲ್ಲಿ ದಾಖಲಾಗಿರುವ ಎಲ್ಲ ಅಪರಾಧ ಪ್ರರಕಣಗಳ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಇದೇ ಡಿ. 16ರಂದು ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಮತ್ತು ಮಹಿಳಾ ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ ಎಂದು ‘ಕೊಂದವರು ಯಾರು?’ ಆಂದೋಲನದ ಜ್ಯೋತಿ ಎ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟಕ್ಕೆ ರಾಜ್ಯದ ವಿವಿಧೆಡೆಯ ಮಹಿಳೆಯರು ಆಗಮಿಸಲಿದ್ದಾರೆ. ಈಗಾಗಲೇ ಹೋರಾಟಕ್ಕೆ ಉತ್ತಮ ಸ್ಪಂದನೆ…