ಬದಿಯಡ್ಕದ ಕನ್ಯಪ್ಪಾಡಿಯಲ್ಲಿ ಅಂಗಡಿ ಮುಂಭಾಗದಲ್ಲಿ ಮಲಗಿದ್ದ ಹಸುವಿನ ಕಳ್ಳತನ; ಇಬ್ಬರ ಬಂಧನ
ಕಾಸರಗೋಡು : ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ಯಪ್ಪಾಡಿಯಲ್ಲಿ ಅಂಗಡಿ ಮುಂಭಾಗದಲ್ಲಿ ಮಲಗಿದ್ದ ಹಸುವನ್ನು ಕಳವು ಮಾಡಿ ಕಾರಿನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನಕ್ಕೆ ಬಳಸಿದ್ದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಸಹಆರೋಪಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಲಾಗಿದೆ. ಬಂಧಿತರನ್ನು ಜೋಕಟ್ಟೆ ನಿವಾಸಿ ರಾಸಿಖ್ (21) ಹಾಗೂ ಉಳ್ಳಾಲ ಸಮೀಪದ ಅಳಿಕೆ ನಿವಾಸಿ ಮೊಹಮ್ಮದ್ ಇರ್ಬಾಸ್ (26) ಎಂದು ಗುರುತಿಸಲಾಗಿದೆ. ಜೂನ್ 16ರಂದು ಮುಂಜಾನೆ ಸುಮಾರು 1.30ರ ವೇಳೆಗೆ ಈ ಘಟನೆ…
