ಗ್ಯಾಸ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ: ರಸ್ತೆಯಲ್ಲೇ ಚಹಾ ತಯಾರಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ಉಡುಪಿ: ಅಡುಗೆ ಗ್ಯಾಸ್ ಮತ್ತು ವಾಣಿಜ್ಯ ಸಿಲಿಂಡರ್ ದರ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಳೆದ ದಿನ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ತಲುಪಿ ರಸ್ತೆ ಮಧ್ಯೆ ಧರಣಿ ನಡೆಸಿದರು. ಪ್ರತಿಭಟನೆಯ ಭಾಗವಾಗಿ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೇ ಒಲೆ ಹಚ್ಚಿ ಚಹಾ ತಯಾರಿಸಿ ಜನರಿಗೆ ಹಂಚುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಅಡುಗೆ ಗ್ಯಾಸ್ ಸಿಲಿಂಡರ್…

Read More

ಉಡುಪಿ: ಬಸ್–ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಉಡುಪಿ: ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝದ್ (19) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದ ಝದ್ ಶೀಘ್ರದಲ್ಲೇ ಉದ್ಯೋಗಕ್ಕಾಗಿ ಗಲ್ಫ್ ರಾಷ್ಟ್ರಕ್ಕೆ ತೆರಳಲು ಸಿದ್ಧತೆ…

Read More

ಮಾರ್ಚ್ 15 ರಿಂದ 20ರವರೆಗೆ ಆದ್ಯಪಾಡಿಯ ದೈವಂಗಳಗುಡ್ಡೆ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ… !

ಮಂಗಳೂರು: ಅದ್ಯಪಾಡಿ ದೈವಂಗಳಗುಡ್ಡೆ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.15ರಿಂದ 20ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ.18ಕ್ಕೆ ರುದ್ರಯಾಗ, 19ರಂದು ಸಹಸ್ರ ನಾಳಿಕೇರ ಮಹಾಗಣಪತಿ ಹೋಮ, 20ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ನಾಗರಾಜ ಶೆಟ್ಟಿ ತಿಳಿಸಿದರು . ಅವರು ದೇವಾಲಯದ ಪ್ರಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈಗಾಗಲೇ 2 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆಡಳಿತ ಮೊಕ್ತೇಸರ…

Read More

ಅಮ್ಮನ ಮಡಿಲೇ ಸ್ವರ್ಗ

ಅಮ್ಮನ ಮಡಿಲು ಸ್ವರ್ಗಕ್ಕೂ ಮಿಗಿಲು ಎನಗೆ ಬಹು ಖುಷಿ ಹೆತ್ತವರು ನಗುತಿರಲು ಎಲ್ಲಿಲ್ಲದ ಸಂತೋಷ ಗೆಳೆಯ ಬರುತಿರಲು ಕಾಯುವೆ ಅಮ್ಮ ನಂಗೆ ಏನಾದರೂ ತರಲು ಬೆಲೆ ಕಟ್ಟಲಾಗದು ತಾಯಿಯ ತ್ಯಾಗದಲ್ಲಿ ಋಣ ತೀರಿಸಲಾಗದು ಮಾತೆಯ ಪ್ರೀತಿಯಲ್ಲಿ ಮುಕ್ತಿ ಹೊಂದಬೇಕು ಹಡೆದವರ ಸೇವೆಯಲ್ಲಿ ಮುಕ್ಕೋಟಿ ದೇವರು ತಾಯಿ ಪಾದದಡಿಯಲ್ಲಿ ನವ ಮಾಸ ಹೊಟ್ಟೆಯಲ್ಲಿ ಇಟ್ಕೊಂಡಿರ್ತಾಳೆ ನಾವು ದೊಡ್ಡವರಾಗೋತನಕ ಸಾಕಿರ್ತಾಳೆ ನಮ್ಮ ಹೊಟ್ಟೆಗಾಗಿ ಬೆವರನಿ ಸುರಿಸಿರ್ತಾಳೆ ಸಂಸಾರಕ್ಕಾಗಿ ಜೀವನ ಮೂಡುಪಾಗಿಟ್ಟಿರ್ತಾಳೆ ನಮ್ಮ ಉಸಿರಿರೋತನಕ ಸೇವೆ ಮಾಡೋಣ ಹೆತ್ತವರಿರೋತನಕ ಜೋಪಾನ ಮಾಡೋಣ…

Read More

ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನಲ್ಲಿ ₹8 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಶಾಸಕರಾದ Vedavyas Kamath ಅವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ತಾವು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ರಸ್ತೆ ಅಭಿವೃದ್ಧಿಯ ಅಗತ್ಯತೆಯನ್ನು ಗಮನಕ್ಕೆ ತಂದಿದ್ದರು. ಅದರಂತೆ ಅನುದಾನವನ್ನು ವ್ಯವಸ್ಥೆ ಮಾಡಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ…

Read More

ರಾಷ್ಟ್ರಮಟ್ಟದಲ್ಲಿ ಮಿಂಚಿದ ವಿಟ್ಲದ ಈಜುಗಾರ್ತಿ ಶ್ರೀಲಕ್ಷ್ಮಿ

ವಿಟ್ಲ: ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿರುವ ವಿಟ್ಲದ ಪ್ರತಿಭಾವಂತ ಈಜುಗಾರ್ತಿ ಶ್ರೀಲಕ್ಷ್ಮಿ ಅವರು ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ವಿಟ್ಲದ ಹಿತ್ಲು ಕೋಟಿಕೆರೆ ನಿವಾಸಿಗಳಾದ ದಿವಂಗತ ಗೋಪಿಕಾ ಸಪಲ್ಯ ಮತ್ತು ಲೀಲಾವತಿ ದಂಪತಿಗಳ ತೃತೀಯ ಪುತ್ರಿಯಾದ ಶ್ರೀಲಕ್ಷ್ಮಿ ಬಾಲ್ಯದಲ್ಲಿಯೇ ಈಜು ಕ್ರೀಡೆಗೆ ಆಸಕ್ತಿ ಬೆಳೆಸಿಕೊಂಡರು. ಈಜಿನಲ್ಲಿ ಸಾಧನೆಗೈಯುವ ದಿಟ್ಟ ಸಂಕಲ್ಪ ಹೊಂದಿದ್ದ ಅವರಿಗೆ ತಂದೆಯೇ ಮೊದಲ ಗುರು ಆಗಿದ್ದು, ಬಳಿಕ ಉಮೇಶ್ ಗಾಣಿಗ ವಿಟ್ಲ ಹಾಗೂ ತುಳಸಿದಾಸ್ ಶೆಣೈ ಅವರಿಂದ ತರಬೇತಿ ಪಡೆದು ಕ್ರೀಡೆಯಲ್ಲಿ…

Read More

ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಶ್ರೀಕುಮಾರಿ ಟೀಚರ್

ಗುವೇದಪಡ್ಪು: ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ಇದರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷೆ ಶ್ರೀಕುಮಾರಿ ಟೀಚರ್ ಉದ್ಘಾಟಿಸಿ ಮಾತನಾಡಿ, ಸಶಕ್ತ ಹಾಗೂ ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯುತ್ತಿದ್ದು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮುಂದಕ್ಕೆ ಸಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಗ್ರಂಥಾಲಯದ ಸದಸ್ಯೆ ಶ್ರೀಮತಿ ಸರಸ್ವತಿ ಕೊಣಿಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದ್ರಿಕಾ…

Read More

ಮಧ್ಯರಾತ್ರಿ ರಸ್ತೆಯಲ್ಲಿ ಕಾಡುಕೋಣ – ವಾಹನ ಸವಾರರಲ್ಲಿ ಆತಂಕ

​ಮಂಜೇಶ್ವರ: ಕುಂಬಳೆ-ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ನೀರ್ಚಾಲು ಸಮೀಪದ ಕನ್ಯಪ್ಪಾಡಿಯಲ್ಲಿ ಸೋಮವಾರ ತಡರಾತ್ರಿ ಬೃಹತ್ ಗಾತ್ರದ ಕಾಡುಕೋಣವೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ. ​ಸೋಮವಾರ ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕನ್ಯಪ್ಪಾಡಿಯ ಬಸ್ ತಂಗುದಾಣದ ಮುಂಭಾಗದಲ್ಲಿ ಈ ಕಾಡುಕೋಣ ದೀರ್ಘಕಾಲ ಬೀಡುಬಿಟ್ಟಿತ್ತು. ಈ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನ ಸವಾರರು ಅದರ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಕೆಲ ದಿನಗಳ ಹಿಂದೆಯೂ ಇದೇ ಪ್ರದೇಶದಲ್ಲಿ ಕಾಡುಕೋಣ ಕಂಡಿರುವ ಬಗ್ಗೆ ಸುದ್ದಿಯಾಗಿತ್ತಾದರೂ, ಯಾವುದೇ ಆಧಾರವಿಲ್ಲದ ಕಾರಣ ಜನರು ಅದನ್ನು…

Read More

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಕೇರಳಕ್ಕೆ ಭೇಟಿ

ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 11ರಂದು Kerala ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸುಮಾರು ₹16,450 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಹಾಗೂ ಶಿಲಾನ್ಯಾಸ ಮಾಡುವ ಕಾರ್ಯಕ್ರಮಗಳು ನಡೆಯಲಿವೆ. ಪ್ರಧಾನಮಂತ್ರಿ ಅವರು ಕೊಚ್ಚಿಯಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಹಲವು ಗಣ್ಯರು ಮತ್ತು ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ಭೇಟಿಯ ವೇಳೆ ಬಂದರು, ರಸ್ತೆ…

Read More

ಬದುಕಿನಲ್ಲಿ ಬದುಕಿ ನೋಡು….!

ಬದುಕೇ ಭಾರವಾಯಿತು, ಹುಮ್ಮಸೆ ಬರಿದಾಯಿತ್ತು, ಕನಸೇ ಕಗ್ಗತ್ತಲಾಯಿತ್ತು, ಹಗಲಿರುಳೇ ಬೇಡವಾಯಿತೆಂದು ಅದೆಷ್ಟೋ ಮಂದಿ ಬದುಕಿನಲ್ಲಿ ಎಲ್ಲವೂ ಮುಗಿದೇ ಹೋಯಿತು ಎಂದು ವ್ಯಥೆ ಪಡುತ್ತಾ ಇರುತ್ತಾರೆ. ವ್ಯಥೆ ಪಡುವ ಮನಸಿನ ಜೊತೆ ಆಳವಾದ ಮಾತು ಬೇರೆಯವರ ಜೊತೆ ಮಾತನಾಡದೆ ಮೌನದಿಂದ ಇರಲು ಬಯಸುತ್ತಾರೆ. ಏಕಾಂತ ಜೀವನವನ್ನು ತುಸು ಹೆಚ್ಚೇ ಇಷ್ಟ ಪಡುತ್ತಾ ಇರುತ್ತಾರೆ. ಶರವೇಗದಲ್ಲಿ ಆಲೋಚನೆ ತನ್ನತ್ತ ಸುಳಿದು ಬಾಳಿನ ಪಥದ ಹಾದಿಯನ್ನೇ ಬದಲಾಯಿಸುತ್ತಾ ಇರುತ್ತದೆ. ಋಣಾತ್ಮಕ ಚಿಂತೆಗಳು ಸಂತೆಗಳಂತೆ ಕಂತೆಗಳಂತೆ ಆಗಾಗೇ ಬರುತ್ತಾ ಬಂದು ಆಳವಾಗಿ ಗಾಯಮಾಡುತ್ತಾ…

Read More
error: Content is protected !!