ಕಾಸರಗೋಡು ಗೋ- ಕುಟೀರದ ನೀಲ ನಕ್ಷೆ (ಬ್ಲೂಪ್ರಿಂಟ್ )ರಚಿಸಿದ, ಖ್ಯಾತ ಕಲಾವಿದ ರಂಗ ನಿರ್ದೇಶಕ ಕಿರಣ್ ಕಲಾಂಜಲಿ ಕೂಡ್ಲು

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ” ಕಟ್ಟಡದ ಸಮಗ್ರವಾದ ನೀಲ ನಕ್ಷೆ (ಬ್ಲೂಪ್ರಿಂಟ್) ಯನ್ನು ಖ್ಯಾತ ಕಲಾವಿದ, ರಂಗ ನಿರ್ದೇಶಕ, ಕಿರಣ್ ಕಲಾಂಜಲಿ ಕೂಡ್ಲು,ಕಾಸರಗೋಡು ಅವರು ರಚಿಸಿದ್ದಾರೆ. ಪ್ರಸ್ತುತ ಮಂಗಳೂರಿನಲ್ಲಿ ತನ್ನ ಕಲಾ ರಂಗಭೂಮಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇರಳ- ಕರ್ನಾಟಕ ರಾಜ್ಯದಲ್ಲಿ ಕಲಾ, ರಂಗಭೂಮಿ ಕ್ಷೇತ್ರಗಳಲ್ಲಿ ಕಿರಣ್ ಕಲಾಂಜಲಿ ಕೂಡ್ಲು ತಮ್ಮ ಕಲಾ ಪ್ರಕಾರಗಳ ಮೂಲಕ ಗುರುತಿಸಿಕೊಂಡಿದ್ದಾರೆ.ಇವರು…

Read More

ಎಡನೀರು ಶ್ರೀ ಮಠದಲ್ಲಿ ಭವ್ಯವಾಗಿ ನಡೆದ “ವಿರಾಟ್ ಹಿಂದೂ ಸಂಗಮ”

ಎಡನೀರು: ಎಡನೀರು ಶ್ರೀ ಮಠದ ಪವಿತ್ರ ಪರಿಸರದಲ್ಲಿ ಮಾರ್ಚ್ 8ರಂದು ಭಾನುವಾರ “ವಿರಾಟ್ ಹಿಂದೂ ಸಂಗಮ” ಭಕ್ತಿ ಹಾಗೂ ಸಂಸ್ಕೃತಿಯ ಸಡಗರದಲ್ಲಿ ಭವ್ಯವಾಗಿ ನಡೆಯಿತು. ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಮಧ್ಯಾಹ್ನ 2.30ಕ್ಕೆ ಚೆಂಗಳ ಪಂಚಾಯತ್ ವ್ಯಾಪ್ತಿಯ ವಿವಿಧ ಬಾಲಗೋಕುಲಗಳ ಮಕ್ಕಳಿಂದ ಕುಣಿತ ಭಜನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಹಿಳಾ ತಂಡಗಳಿಂದ ಕೈಕೊಟ್ಟಕಳಿ ಮತ್ತು ತಿರುವಾದಿರಕಳಿ ನೃತ್ಯ ಪ್ರದರ್ಶನಗಳು ಭಕ್ತರ ಗಮನ ಸೆಳೆದವು. ಸಂಜೆ 4 ಗಂಟೆಗೆ ಶ್ರೀ…

Read More

ಬಿಜೆಪಿ ಬದಿಯಡ್ಕ ಸಾಂಘಿಕ ಮಂಡಲ ಕಾರ್ಯಕರ್ತರ ಶಿಲ್ಪಶಾಲೆ ಉದ್ಘಾಟನೆ

ಬದಿಯಡ್ಕ: ಭಾರತೀಯ ಜನತಾ ಪಾರ್ಟಿ ಬದಿಯಡ್ಕ ಸಾಂಘಿಕ ಮಂಡಲದ ವತಿಯಿಂದ ಕಾರ್ಯಕರ್ತರ ಶಿಲ್ಪಶಾಲೆ ಮಾರ್ಪನಡ್ಕದ ಶ್ರೀ ಪಾಂಚಜನ್ಯ ಆಡಿಟೋರಿಯಂನಲ್ಲಿ ನಡೆಯಿತು. ಈ ಶಿಲ್ಪಶಾಲೆಯನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದು. ಗ್ರಾಮ ಮಟ್ಟದಿಂದಲೇ ಸಂಘಟನೆ ಬಲಿಷ್ಠವಾಗಬೇಕು. ಕಾರ್ಯಕರ್ತರು ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು…

Read More

ಮುತ್ತಿನ ಹಾರ

ಆ ದಿನ ಮನೆ ತುಂಬಾ ಜನ ಸೇರಿದ್ದರು, ಮಕ್ಕಳ ಆಟ ಒಂದು ಕಡೆಯಾದರೆ ಮಾತು ಚೆಲ್ಲಾಟವಾಡುತ್ತಿರುವ ಯುವಕರು ಇನ್ನೊಂದು ಕಡೆ , ಗಂಡಸರ ಓಡಾಟ ಹಾಗೂ ಹೆಂಗಸರ ಹರಟೆ ಜೋರು ನಡೆಯುತ್ತಿತ್ತು. ಆ ದಿನ ಮನೆಯಲ್ಲಿ ಲಕ್ಷ್ಮಿಯ ಸೀಮಂತ ಕಾರ್ಯಕ್ರಮ ಅದರಲ್ಲಿ ಎಲ್ಲರೂ ಸಂಭ್ರಮಿಸುತ್ತಿದ್ದರು . ಲಕ್ಷ್ಮಿಗೆ ಚೊಚ್ಚಲ ಬಸರು,ಸೀಮಂತದ ಪ್ರಯುಕ್ತ ಪೂಜೆ ಹವನ ಹಾಗೂ ಗರ್ಭಿಣಿಯಾದ ಲಕ್ಷ್ಮಿಗೆ ಇಷ್ಟವಾದ ತಿಂಡಿ ತಿನಿಸುಗಳನ್ನು ಎಲ್ಲರೂ ಕೊಡುತ್ತಿದ್ದರು . ಮಹಿಳೆಯರೆಲ್ಲ ಅವರವರ ಗರ್ಭಾವಸ್ಥೆಯ ಅನುಭವವನ್ನು ಹೇಳುತ್ತಾ ಲಕ್ಷ್ಮಿಗೆ ಧೈರ್ಯ…

Read More

ಪ್ರತಿರೋಧ ಮತ್ತು ನಿರಾಕರಣೆಯ ಹೋರಾಟದಿಂದಲೇ ಕಾರ್ಮಿಕ ವರ್ಗದ ವಿಮೋಚನೆ ಸಾಧ್ಯ – ಕೆ.ಎನ್. ಉಮೇಶ್

ಮಂಗಳೂರು: ದೇಶದ ಆಳುವ ವರ್ಗಗಳು ತಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ದುಡಿಯುವ ವರ್ಗದ ಹಕ್ಕುಗಳನ್ನು ಕಿತ್ತುಕೊಂಡು ಮತ್ತೆ ಗುಲಾಮಗಿರಿಯತ್ತ ಕೊಂಡೊಯ್ಯಲು ಪ್ರಯತ್ನಿಸುತ್ತಿವೆ. ಆದರೆ ದೇಶದ ಕಾರ್ಮಿಕ ವರ್ಗವು ಆಳುವ ವರ್ಗದ ಎಲ್ಲಾ ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರಬಲ ಹೋರಾಟಗಳ ಮೂಲಕ ಹಿಮ್ಮೆಟ್ಟಿಸಿ ಕಾರ್ಮಿಕ ಕಾನೂನುಗಳನ್ನು ಕಾಪಾಡಿಕೊಂಡಿದೆ ಎಂದು CITU ರಾಷ್ಟ್ರೀಯ ನಾಯಕ ಕೆ.ಎನ್. ಉಮೇಶ್ ಹೇಳಿದರು. ಅವರು CITU ಕರ್ನಾಟಕ ರಾಜ್ಯ ಸಮಿತಿಯ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಹಾಸನ ವಿಭಾಗ ಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು. ಮುಂದುವರಿದು…

Read More

ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ಐದು ಲಕ್ಷ ನಗದು ಪುರಸ್ಕಾರ

ಮಂಗಳೂರು: ಶ್ರೀ ಮಂಗಳಾದೇವಿ ಕರಸೇವಕರು ಬೋಳಾರ ಟ್ರಸ್ಟ್ ಮತ್ತು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ನಲಿಕೆದ ಭಜನೆ ಕುಣಿತ ಭಜನಾ ಸ್ಪರ್ಧೆಯು ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡದ ಭರವಸೆಯ ಆಟಗಾರ್ತಿ ಹಾಗೂ ಢಾಕಾದಲ್ಲಿ ನಡೆದ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶ್ರೀ…

Read More

ಶಾಸಕರ ನಿರಂತರ ಪ್ರಯತ್ನ ಫಲಿತಾಂಶ: ಕುಂಬಳೆ ಕಂಜಿಕಟ್ಟೆ ಸೇತುವೆ ಪುನರ್‌ನಿರ್ಮಾಣಕ್ಕೆ ನಬಾರ್ಡ್‌ನಿಂದ ₹27.10 ಕೋಟಿ

ಕುಂಬಳೆ : ಕಾಲಪರಿಣಾಮದಿಂದ ಹಾನಿಗೊಳಗಾದ ಕುಂಬಳೆ ನದಿಗೆ ಅಡ್ಡವಾಗಿ ನಿರ್ಮಿಸಲಾದ ಕಂಜಿಕಟ್ಟೆ ನಿಯಂತ್ರಕ-ಸೇತುವೆಯ ಪುನರ್‌ನಿರ್ಮಾಣಕ್ಕೆ ನಬಾರ್ಡ್ ವತಿಯಿಂದ ₹27.10 ಕೋಟಿ ಮಂಜೂರಾಗಿದೆ ಎಂದು ಶಾಸಕ ಎ.ಕೆ.ಎಂ. ಅಶ್ರಫ್ ತಿಳಿಸಿದ್ದಾರೆ. ಪ್ರಸ್ತುತ ಸಾಲಿನ ಆರ್‌ಐಡಿಎಫ್ (ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿ) ಯೋಜನೆಯಡಿ ಈ ಅನುದಾನ ಮಂಜೂರಾಗಿದೆ. 2024ರ ಏಪ್ರಿಲ್‌ನಲ್ಲಿ ಸೇತುವೆಯ ದುಸ್ಥಿತಿಯನ್ನು ಗಮನಿಸಿದ ಜಿಲ್ಲಾಧಿಕಾರಿ ಅದನ್ನು ಮುಚ್ಚಿ ಸಂಚಾರವನ್ನು ನಿಷೇಧಿಸಿದ್ದರು. ಇದರ ಪರಿಣಾಮವಾಗಿ ಕುಂಬಳೆ ಪಂಚಾಯತ್ ವ್ಯಾಪ್ತಿಯ ಕಂಜಿಕಟ್ಟೆ , ಮಳಿ, ಕುಂಡಪ್ಪು, ತಳ ಕೊಡಿಯಮ್ಮ, ಆರಿಕ್ಕಾಡಿ, ಚತ್ರಂಪಳ್ಳಂ,…

Read More

ಉಡುಪಿ: ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ

ಉಡುಪಿ: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ್ಯದ ತಿರುನಲ್ವೇಲಿ ತಿರುಕ್ಕುರುಂಕುಡಿಯ ಎಸಾಕ್ಕಿ ರಾಜ (28) ಹಾಗೂ ಆತನ ಸಹಚರ ನಂಬಿ ರಾಜ (23) ಬಂಧಿತ ಆರೋಪಿಗಳು.ಕಾಪು ದಿವಾಕರ ಶೆಟ್ಟಿ ಕುಟುಂಬದವರು ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿರುವ ಮನೆಗೆ ಬೀಗ ಹಾಕಿ ಮುಂಬಯಿಗೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯ ಬಾಗಿಲ ಬೀಗವನ್ನು ಒಡೆದು…

Read More

“ಉಡುಪಿ ಕಂಬಳ” ರಾಜಕೀಯ ದೈವಸ್ಥಾನದ ಅಂಗಳಕ್ಕೆ: ಗುರ್ಮೆ–ಸೊರಕೆ ಆರೋಪ–ಪ್ರತ್ಯಾರೋಪ

ಉಡುಪಿ: ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ ನಡೆದಿರುವುದು ರಾಜಕೀಯ ವಾದ–ವಿವಾದಕ್ಕೆ ಕಾರಣವಾಗಿದೆ. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದ ಹಿನ್ನೆಲೆ, ಈ ವಿಚಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರ ನಡುವೆ ತೀವ್ರ ಆರೋಪ–ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು ದುರುದ್ದೇಶಪೂರಿತವಾಗಿ ರಾಜಕೀಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ…

Read More

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಆಶ್ರಯದಲ್ಲಿ ‘ಮಹಿಳಾ ದಿನಾಚರಣೆ – 2026’ ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಹಿಂದೆ ಅಡುಗೆ ಕೋಣೆಗೆ ಸೀಮಿತಳಾಗಿದ್ದ ಮಹಿಳೆಯರು ಪ್ರಸ್ತುತ ಅಂತರೀಕ್ಷಕ್ಕೆ ಏರುವ ಮೂಲಕ ಎಲ್ಲಾ ರಂಗದಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆಯರನ್ನು ಪೂಜಿಸುವ ಹಾಗೂ…

Read More
error: Content is protected !!