ಉಪ್ಪಳಿಗೆಯಲ್ಲಿ ಕೋಮು ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಭಟ್ ಗೆ ಜಾಮೀನು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅಪಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಹಿಂದೂ‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ. 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ. ಪ್ರಭಾಕರ್ ಭಟ್ ಪರವಾಗಿ ಹಿರಿಯ ವಕೀಲ ಮಹೇಶ್ ಕಜೆ ವಾದ ಮಂಡಿಸಿದರು. ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ…

Read More

ಮಂಗಳೂರು ಏರ್‌ಪೋರ್ಟ್‌ಗೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ʼ ಸ್ಥಾನಮಾನ ನೀಡಲು ನಿಯಮ 377ರಡಿಯಲ್ಲಿ ಸಂಸದ ಚೌಟ ಲೋಕಸಭೆಯಲ್ಲಿ ಒತ್ತಾಯ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ (PoC)” ಸ್ಥಾನ-ಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾ. ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ಏರ್‌ಪೋರ್ಟ್‌ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ ಒಟ್ಟು…

Read More

ಕಾಸರಗೋಡು ಚುನಾವಣೆಗೆ ಕ್ಷಣಗಣನೆ , ನಾಳೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ; ಡಿ. 13ಕ್ಕೆ ಫಲಿತಾಂಶ ಪ್ರಕಟ… !

ಕಾಸರಗೋಡು: ಜಿಲ್ಲೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಗುರುವಾರ(ನಾಳೆ) ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ. 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಜಿಲ್ಲೆಯ 38 ಗ್ರಾಮ ಪಂಚಾಯತ್ ಗಳು, ಮೂರು ನಗರಸಭೆ, ಆರು ಬ್ಲಾಕ್ ಪಂಚಾಯತ್ ಹಾಗೂ ಒಂದು ಜಿಲ್ಲಾ ಪಂಚಾಯತ್ ಸೇರಿದಂತೆ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ.ಗ್ರಾಮ ಪಂಚಾಯತ್ ಗಳ 725 ವಾರ್ಡ್ ಗಳಿಗೆ ಒಟ್ಟು 1,242 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ನಗರಸಭೆಗಳ 120 ವಾರ್ಡ್ ಗಳಿಗೆ…

Read More

ಡಿಸೆಂಬರ್ .12ರಂದು ‘ಪಿಲಿಪಂಜ’ ತುಳುಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

ಉಡುಪಿ:ಯಸ್ ಬಿ ಗ್ರೂಪ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ ‘ಪಿಲಿಪಂಜ’ ತುಳು ಸಿನಿಮಾ ಡಿಸೆಂಬರ್ 12ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಭರತ್ ಶೆಟ್ಟಿ ತಿಳಿಸಿದರು.ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ ಸಿನಿಮಾನ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ ಸಿನಿಮಾಸ್,…

Read More

ಅಕ್ರಮವಾಗಿ ವಾಸವಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಶಿಕ್ಷೆ!

ಉಡುಪಿ:ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯ ಡಿ.8ರಂದು ಶಿಕ್ಷೆ ವಿಧಿಸಿ ಆದೇಶ ನೀಡಿದೆ.ಬಾಂಗ್ಲಾ ದೇಶದ ಪ್ರಜೆಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ ಯಾನೆ ಫಾರೂಕ್, ಇಸ್ಮಾಯಿಲ್ ಎಸ್.ಕೆ., ಮುಹಮ್ಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ ಯಾನೆ ಅಬ್ದುಲ್ ಕರೀಮ್, ಸಲಾಂ ಎಸ್.ಕೆ ಯಾನೆ ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ., ಮುಹಮ್ಮದ್ ಸೋಜಿಬ್ ಯಾನೆ ಎಂ.ಡಿ.ಅಲ್ಲಾಂ ಅಲಿ,…

Read More

ಸಾಮಾಜಿಕ ಮಾದ್ಯಮದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ … !?

ಮಂಗಳೂರು :ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿದ್ದ ಕಾರು: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ದುರಂತ ಅಂತ್ಯ .. !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ…

Read More

ರಾಜಕೀಯ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ , ಸೈನಿಕರಿಗೆ ಏಕೆ ಇಲ್ಲ… ? ,ಮಾಜಿ ಸೈನಿಕರಾದ ಸೆಬಾಸ್ಟೀನ್ ಪ್ರಶ್ನೆ .. ?

ಮಂಗಳೂರು: ನಮ್ಮ ಹೆಚ್ಚಿನ ಯವ್ವನವನ್ನು ಗಡಿಯಲ್ಲೇ ಕಳೆಯುತ್ತೇವೆ ಅಲ್ಲಿಂದ ನಿವೃತ್ತಿ ಪಡೆದು ಇಲ್ಲಿಗೆ ಬರುವಾಗ ಯಾವುದೇ ರೀತಿಯ ಮರ್ಯಾದೆ ಸಿಗುವುದಿಲ್ಲ . ಇದು ತುಂಬಾನೇ ನೋವು ಉಂಟು ಮಾಡುತ್ತದೆ . ಸರಕಾರವು ಯಾವುದೇ ಸವಲತ್ತನ್ನು ನೀಡುವುದಿಲ್ಲ ಎಂದುಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕಡಬ ತಾಲ್ಲೂಕು ಘಟಕದ ಅಧ್ಯಕ್ಷರು ,ಮಾಜಿ ಸೈನಿಕರಾದ ಸೆಬಾಸ್ಟೀನ್ ತಮ್ಮ ಅಳಲನ್ನು ತೋಡಿಕೊಂಡರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂವಿಧಾನ ಹೇಳುತ್ತದೆ ಸೈನಿಕರಿಗೆ ಗೌರವ, ಅನುಕೂಲವನ್ನು ನೀಡಬೇಕೆಂದು…

Read More

ಡಿ 13 ರಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಆಚರಣೆ

ಮಂಗಳೂರು:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ದ.ಕ ಜಿಲ್ಲಾ ಮಹಾಸಮ್ಮೇಳನ ಹಾಗೂ ವಿಜಯ ದಿವಸ್ ಜಂಟಿ ಆಚರಣೆಯು ಡಿ 13 ರಂದು ಬೆಳಿಗ್ಗೆ ೯.೩೦ ರಿಂದ ಕಡಬ ತಾಲ್ಲೂಕಿನ ನೆಲ್ಯಾಡಿ ಬಿರ್ವಾ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು , ಮಾಜಿ ಸೈನಿಕರಾದ ನೋಬರ್ಟ್ ರೋಡಿಗ್ರಾಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಸಭೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷರಾದ ಡಾ|…

Read More

ಡಿ.13 ರಂದು : ಜಿಎಸ್‌ಬಿ ಸೇವಾ ಸಂಘದ ” ವಾಗ್ದೇವಿ ಟವರ್ಸ್‌ ಕಟ್ಟಡದ ಶಿಲಾನ್ಯಾಸ

ಮಂಗಳೂರು :ನಗರದ ಕದ್ರಿ ಪರಿಸರದಲ್ಲಿ ಸುಮಾರು 60000 ಚದರ ಅಡಿಗಳ “ವಾಗ್ವೇವಿ ಟವರ್ಸ” ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಡಿ 13 ರಂದು ಬೆಳಿಗ್ಗೆ 8:31ಕ್ಕೆ ಉದ್ಯಮಿ ಡಾ.ಪಿ.ದಯಾನಂದ ಪೈ ಯವರು ಈ ಹೊಸ ಯೋಜನೆಯ ಶಿಲಾನ್ಯಾಸ ಮಾಡಲಿದ್ದಾರೆ ಎಂದು ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘ ಅಧ್ಯಕ್ಷರಾದ ಡಾ.ಕಸ್ತೂರಿ ಮೋಹನ್ ಪೈ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , 60000 ಚದರ ಅಡಿಗಳ ‘ವಾಗ್ದೇವಿ ಟವರ್ಸ್’ ಕಟ್ಟಡದ ಶಿಲಾನ್ಯಾಸ…

Read More
error: Content is protected !!