ಭಟ್ರಕುಮೇರು ಸ್ವಾಮಿ ಬಾಲ ತನಿಯ ಕ್ಷೇತ್ರ : ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ಚತುರ್ಥ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 07-12-2025ನೇ ಅದಿತ್ಯವಾರದಂದು ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಿತು. ಅಂದು ಬೆಳಿಗ್ಗೆ 7ರಿಂದ ಮಹಾಗಣಪತಿ ಹೋಮ ಹಾಗೂ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಭಜನೆ ಹಾಗೂ ಹರಿನಾಮ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿದ್ದ ಕಾರು:ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕಅಭಿಷೇಕ್ ಮೃತ್ಯು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ. ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ….

Read More

ಲಕ್ಷ ಲಕ್ಷ ಮೌಲ್ಯದ ಕಾಫಿ ಬೀಜದ ಗೋಣಿಚೀಲ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

ಕಾಫಿ ಬೀಜದ ಲೋಡು ಕೊಂಡೊಯ್ಯುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪುತ್ತೂರು ನಿವಾಸಿ ಆಶ್ಲೇಷ ಭಟ್ ಹಾಗೂ ಅವರ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾ‌ರ್, ವಿಜಯ ಶೆಟ್ಟಿ ಮತ್ತು ಮುಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರ ದೂರಿನಂತೆ ಸದ್ರಿಯವರು KA 19 AB 2258 ನೇ…

Read More

ಕಂಬಳ ವಿಚಾರವಾಗಿ ಶಾಸಕ ಅಶೋಕ್ ರೈ ಹತ್ತು ಬಾರಿ ನನಗೆ ಮನವಿ ಮಾಡಿದ್ದರು; ಸಚಿವ ಎಚ್ ಕೆ ಪಾಟೀಲ್. ಸರಕಾರದಿಂದ 23 ಕಂಬಳಗಳಿಗೆ ತಲಾ 5 ಲಕ್ಷ ಪ್ರೋತ್ಸಾಹ ಧನ.

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ನಡೆಯುವ ಒಟ್ಟು 23 ಕಂಬಳಗಳಿಗೆ ವಾರ್ಷಿಕವಾಗಿ ತಲಾ 5 ಲಕ್ಷ ರೂ ಪ್ರೋತ್ಸಾಹಧನ ನೀಡುವುದಾಗಿ ಸರಕಾರ ಘೋಷಣೆ ಮಾಡಿದ್ದು, ಈ ವಿಚಾರವನ್ನು ಡಿ.8ರಂದು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್‌ರವರು ಸದನದಲ್ಲಿ ತಿಳಿಸಿದ್ದಾರೆ. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಶಾಸಕ ಅಶೋಕ್ ರೈ ಅವರು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳದ ವಿಚಾರವಾಗಿ ಮಾತನಾಡಿದರು. ಉಭಯ ಜಿಲ್ಲೆಗಳ ಸಾಂಸ್ಕೃತಿಕ ಕ್ರೀಡೆಯಾದ ಕಂಬಳವನ್ನು ಕರ್ನಾಟಕ ರಾಜ್ಯ…

Read More

ತೇಜಸ್ವಿನಿ ಸಹೋದಯ ಶಾಲೆಗಳ ಸಿಬಿಎಸ್‌ಇ ಅಂತರ್ ಶಾಲಾ ಕಬಡ್ಡಿ ಚಾಂಪಿಯನ್‌ಶಿಪ್ ಕ್ರೀಡಾಕೂಟಕ್ಕೆ ಸಾಕ್ಷಿಯಾದ ಪಾಲಕುನ್ನಿನ ಅಂಬಿಕಾ ಇಂಗ್ಲಿಷ್ ಮಾಧ್ಯಮ ಶಾಲೆ … !

ಕಾಸರಗೋಡು:ತೇಜಸ್ವಿನಿ ಸಹೋದಯ ಶಾಲೆಗಳ ಸಿಬಿಎಸ್‌ಇ ಅಂತರ್ ಶಾಲಾ ಕಬಡ್ಡಿ ಚಾಂಪಿಯನ್‌ಶಿಪ್ ಕ್ರೀಡಾಕೂಟವು ಪಾಲಕುನ್ನಿನಲ್ಲಿರುವ ಅಂಬಿಕಾ ಇಂಗ್ಲಿಷ್ ಮಾಧ್ಯಮ ಶಾಲಾ ಮೈದಾನದಲ್ಲಿ ನಡೆಯಿತು. ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಸಿಬಿಎಸ್‌ಇ ಶಾಲೆಗಳಿಂದ ಸುಮಾರು 240 ಕಬಡ್ಡಿ ಆಟಗಾರರು ಬಾಲಕರು ಮತ್ತು ಬಾಲಕಿಯರು ಭಾಗವಹಿಸಿದ್ದರು . ಮೂರು ವಿಭಾಗಗಳಲ್ಲಿ ಚಾಂಪಿಯನ್‌ಶಿಪ್‌ ಪಂದ್ಯಕೂಟವು ನಡೆಯಿತು . ಬೇಕಲ್ ಎಸ್‌ಐ ರೋಶಿತ್ ಯು ಕಬಡ್ಡಿ ಪಂದ್ಯಕೂಟಕ್ಕೆ ಚಾಲನೆಯನ್ನು ನೀಡಿದರು . ತೇಜಸ್ವಿನಿ ಸಹೋದಯ ಸಂಕೀರ್ಣದ ಉಪಾಧ್ಯಕ್ಷೆ ಎ ದಿನೇಶನ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ…

Read More

ಗತ ವೈಭವದ ಬ್ರ್ಯಾಂಡ್ ಮಂಗಳೂರು ಕಟ್ಟಲು ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಸಹಯೋಗದಲ್ಲಿ ಡಿ. 27ರಂದು ‘ನಶೆ ಮುಕ್ತ ಮಂಗಳೂರು’ ಅಭಿಯಾನ

ಮಂಗಳೂರು: ಮೇಕ್ ಎ ಚೇಂಜ್ ಫೌಂಡೇಶನ್ ವತಿಯಿಂದ ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ನಶೆ ಮುಕ್ತ ಮಂಗಳೂರು ಅಭಿಯಾನವನ್ನು ಆಯೋಜಿಸಲಾಗಿದೆ.ಯುವ ಜನತೆಯಲ್ಲಿ ಮಾದಕ ದ್ರವ್ಯಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸೃಜನಾತ್ಮಕ ಸಮಾಜ ಕಟ್ಟುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಅಭಿಯಾನವನ್ನು ಡಿ. 27ರಂದು ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಸುಹೈಲ್ ಕಂದಕ್ ತಿಳಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ಡಿಸೆಂಬರ್ 13 ಮತ್ತು 14 ರಂದು ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಮತ್ತು ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025”

ಮಂಗಳೂರು: ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಮತ್ತು ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಯುಕ್ತ ಆಶ್ರಯದಲ್ಲಿ “ಸೌಹಾರ್ದ ಕ್ರಿಸ್ಮಸ್ ಉತ್ಸವ 2025” ಆಚರಣೆಯನ್ನು ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್ನಲ್ಲಿ, ಮಧ್ಯಾಹ್ನ 2:30ರಿಂದ ರಾತ್ರಿ 9:30ರ ತನಕ ನಡೆಯಲಿದೆ ಎಂದು ವಿಚಾರ ವೇದಿಕೆಯ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್ ಬಜಾಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸರ್ವ ಧರ್ಮದ ಹಬ್ಬಗಳು…

Read More

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್

ಬೆಳಗಾವಿ ಸುವರ್ಣ ವಿಧಾನಸೌಧ ಡಿ.09. : ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು.ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ…

Read More

ಗೋಹತ್ಯೆ ನಿಷೇಧ ಕಾನೂನು ದುರ್ಬಲಗೊಳಿಸಲು ಕಾಂಗ್ರೆಸ್ ಸರಕಾರ ಯತ್ನ- ವಿಶ್ವ ಹಿಂದೂ ಪರಿಷತ್ ಆರೋಪ

ಉಡುಪಿ:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಅನ್ನು ಸಡಿಲಗೊಳಿಸಲು ತಿದ್ದುಪಡಿ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಉಡುಪಿ ಜಟ್ಕಾ ಬಸ್ ನಿಲ್ದಾಣದ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮತ್ತು‌ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿದರು. ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ದಿಕ್ಕಾರ ಕೂಗಿದರು. ವಿಎಚ್ ಪಿ ಕರ್ನಾಟಕ ದಕ್ಷಿಣ…

Read More

“ವಾದಿರಾಜ ವಾಲಗ ಮಂಡಳಿ” ಸಿನಿಮಾ ಮೇ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ – ನಿರ್ಮಾಪಕ ಡಾ.ಎಂ.ಎನ್. ರಾಜೇಂದ್ರ ಕುಮಾರ್

ಉಡುಪಿ:ಎಂ.ಎನ್.ಆರ್. ಪ್ರೊಡಕ್ಷನ್ ಸಂಸ್ಥೆಯಡಿ ನಿರ್ಮಿಸಲಾಗುತ್ತಿರುವ ವಾದಿರಾಜ ವಾಲಗ ಮಂಡಳಿ ಕನ್ನಡ ಚಲನಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಪ್ರೊಡಕ್ಷನ್‌ನ ಅಧ್ಯಕ್ಷ, ನಿರ್ಮಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಬ್ರಹ್ಮಾವರ ತೆಂಕುಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 300 ವರ್ಷಗಳ ಇತಿಹಾಸವುಳ್ಳ ಬ್ರಹ್ಮಾವರ ತೆಂಕುಮನೆಯಲ್ಲಿ ಮುಂದಿನ 15 ದಿನಗಳ ಚಿತ್ರೀಕರಣ ನಡೆಯಲಿದ್ದು, ಆ ಬಳಿಕ ಮಂಗಳೂರು ಅದ್ಯಪಾಡಿ, ಮಂಜೇಶ್ವರದಲ್ಲಿ ಚಿತ್ರೀಕರಿಸಲಾಗುತ್ತದೆ. 50 ದಿನಗಳಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿ ಮೇ ನಲ್ಲಿ ತೆರೆ…

Read More
error: Content is protected !!