130ನೇ ಸಂವಿಧಾನ ತಿದ್ದುಪಡಿ ಮಸೂದೆಗೆ ಮುಂಗಾರು ಅಧಿವೇಶನದಲ್ಲಿ ಅವಕಾಶ?; ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ, ಸಿಎಂ ಅನರ್ಹತೆಗೆ ಪ್ರಸ್ತಾವನೆ
ಜೆಪಿಸಿ ವರದಿ ಅಂತಿಮ ಹಂತದಲ್ಲಿ; ಮಸೂದೆಗೆ ಪ್ರತಿಪಕ್ಷಗಳ ತೀವ್ರ ವಿರೋಧ ನವದೆಹಲಿ, ಜು. 2: ನ್ಯಾಯಾಂಗ ಬಂಧನದಲ್ಲಿರುವ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ನಿರ್ದಿಷ್ಟ ಸಂದರ್ಭಗಳಲ್ಲಿ ಅನರ್ಹಗೊಳಿಸುವ ಉದ್ದೇಶದ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನ್ನ ವರದಿಯನ್ನು ಅಂತಿಮಗೊಳಿಸುವ ಹಂತದಲ್ಲಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ. ಜುಲೈ 20ರಿಂದ ಆರಂಭವಾಗುವ ನಿರೀಕ್ಷೆಯಿರುವ…
