ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ; ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್‌ಗೆ ಯೆಲ್ಲೋ ಅಲರ್ಟ್

ಭೂಕುಸಿತ, ಪ್ರವಾಹದ ಎಚ್ಚರಿಕೆ; ಅನಗತ್ಯ ಪ್ರಯಾಣ ತಪ್ಪಿಸುವಂತೆ ಹವಾಮಾನ ಇಲಾಖೆ ಸಲಹೆ ತಿರುವನಂತಪುರಂ, ಜು. 2: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಮುಂದುವರಿಸಿದೆ. ಇಂದು ಕಾಸರಗೋಡು, ಕಣ್ಣೂರು ಹಾಗೂ ಕೋಝಿಕ್ಕೋಡ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯಲ್ಲಿ 64.5 ಮಿ.ಮೀ.ದಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ನಿರಂತರ ಮಳೆಯ ಪರಿಣಾಮ ಭೂಕುಸಿತ, ಮಣ್ಣಿನ…

Read More

ಕುಂಬಳೆ ಕಂಚಿಕಟ್ಟೆ ಸೇತುವೆ ಸಮೀಪ ರಸ್ತೆ ಕುಸಿತ ಭೀತಿ; ತುರ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ತಡೆಗೋಡೆ ಬಿರುಕು, ಮರ ಉರುಳುವ ಆತಂಕ; ₹72 ಕೋಟಿ ಸೇತುವೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ ಮಂಜೇಶ್ವರ, ಜು. 2: ಕುಂಬಳೆ ಕಂಚಿಕಟ್ಟೆ ಸೇತುವೆ ಸಮೀಪದ ರಸ್ತೆ ತೀವ್ರ ಹಾನಿಗೊಳ್ಳುವ ಹಂತ ತಲುಪಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಆತಂಕದ ನಡುವೆ ಸಂಚರಿಸುವಂತಾಗಿದೆ. ಸೇತುವೆಯಿಂದ ಸುಮಾರು 250 ಮೀಟರ್ ದೂರದಲ್ಲಿ ನಿರ್ಮಿಸಲಾಗಿದ್ದ ಕಲ್ಲಿನ ತಡೆಗೋಡೆ ಬಿರುಕು ಬಿಟ್ಟು ಕುಸಿದಿದೆ. ರಸ್ತೆಬದಿಯ ಮರದ ಬುಡದ ಮಣ್ಣು ಜರಿದಿರುವುದರಿಂದ ಮರ ಹಾಗೂ ತಡೆಗೋಡೆ ಯಾವುದೇ ಕ್ಷಣದಲ್ಲಿ ರಸ್ತೆಗೆ ಉರುಳುವ ಅಪಾಯ ಎದುರಾಗಿದೆ….

Read More

ಕಾಸರಗೋಡಿನಲ್ಲಿ ಗುಡ್ಡ ಕುಸಿತ; ಕಾರಿನ ಮೇಲೆ ಬಿದ್ದ ಬಂಡೆಕಲ್ಲು, ಪ್ರಯಾಣಿಕರು ಅಪಾಯದಿಂದ ಪಾರು

ಚಳಿಯಂಗೋಡು ಬಳಿ ಭಾರಿ ಮಳೆಯಿಂದ ಘಟನೆ; ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಂಚಾರ ಪುನಃ ಆರಂಭ ಕಾಸರಗೋಡು, ಜು. 2: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕಾಸರಗೋಡು–ಕಾಞಂಗಾಡ್ ಕೆಎಸ್‌ಟಿಪಿ ರಸ್ತೆಯ ಚಳಿಯಂಗೋಡು ಸಮೀಪ ಗುಡ್ಡ ಕುಸಿದು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಮಣ್ಣು ತಡೆಯಲು ನಿರ್ಮಿಸಲಾಗಿದ್ದ ಕಾಂಕ್ರೀಟ್ ತಡೆಗೋಡೆಯ ಮೇಲ್ಭಾಗದಿಂದ ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ಏಕಾಏಕಿ ರಸ್ತೆಗೆ ಜರಿದುಬಿದ್ದವು. ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬಂಡೆಕಲ್ಲು ಬಿದ್ದ ಪರಿಣಾಮ ಕಾರಿನ ಮುಂಭಾಗ…

Read More

ರಸ್ತೆಗೆ ಉರುಳಿದ ಬೃಹತ್ ಮರ ತೆರವು; ಸಂಚಾರ ಪುನಃಸ್ಥಾಪಿಸಿದ ಎಸ್‌ಡಿಪಿಐ ರೆಸ್ಕ್ಯೂ ತಂಡ

ಮಂಜೇಶ್ವರ, ಜು. 2: ಮಂಜೇಶ್ವರದ ಹೊಸಂಗಡಿ–ಆನಪಳ್ಳ ರಸ್ತೆಯ ಕಡಂಬಾರಿನ ಅರಣ್ಯ ಪ್ರದೇಶದಲ್ಲಿ ಬೃಹತ್ ಮರವೊಂದು ರಸ್ತೆಗೆ ಧರೆಗುರುಳಿದ ಪರಿಣಾಮ ವಿದ್ಯುತ್ ಲೈನ್ ಕಡಿತಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಎಸ್‌ಡಿಪಿಐ ಮಂಜೇಶ್ವರ ಪಂಚಾಯತ್ ರೆಸ್ಕ್ಯೂ ತಂಡ ತಕ್ಷಣ ಕಾರ್ಯಾಚರಣೆ ಆರಂಭಿಸಿತು. ತೀವ್ರ ಪರಿಶ್ರಮದ ಬಳಿಕ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು. ರಕ್ಷಣಾ ಕಾರ್ಯಾಚರಣೆಯ ನೇತೃತ್ವವನ್ನು ಎಸ್‌ಡಿಪಿಐ ಮಂಜೇಶ್ವರ ಪಂಚಾಯತ್ ಸಮಿತಿ ಉಪಾಧ್ಯಕ್ಷ ಸಲಾಮ್…

Read More

ಕಾಸರಗೋಡಿನಲ್ಲಿ ಜುಲೈ 6ರಂದು ಖಾಸಗಿ ಬಸ್ ಮುಷ್ಕರ

ಕಾಸರಗೋಡು: ಕೆಎಸ್ಸಾರ್ಟೀಸಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಖಾಸಗಿ ಬಸ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಉದ್ಯಮವನ್ನು ಸಂರಕ್ಷಿಸುವಂತೆ ಆಗ್ರಹಿಸಿ ಜುಲೈ 6ರಂದು ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಲಿವೆ. ಕೇರಳ ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಷನ್‌ನ ಕಾಸರಗೋಡು ಜಿಲ್ಲಾ ಘಟಕ ಹಾಗೂ ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಬಸ್ ಮಾಲೀಕರು ಮತ್ತು ಸಿಬ್ಬಂದಿ…

Read More

ಅರೆಕೆರೆ ಬೈಲು ತರವಾಡು ಮನೆ ಗೃಹಪ್ರವೇಶದ ಅಂಗವಾಗಿ ಲಕ್ಕಿ ಕೂಪನ್ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

ಇಚ್ಲಂಗೋಡಿನಲ್ಲಿ 2027ರ ಜನವರಿಯಲ್ಲಿ ಗೃಹಪ್ರವೇಶ; ಕೈಕಂಬದಲ್ಲಿ ನಡೆದ ಕಾರ್ಯಕ್ರಮಕ್ಕೆ ಗಣ್ಯರ ಸಮ್ಮುಖ ಇಚ್ಲಂಗೋಡು, ಜು. 2: ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನ, ಇಚ್ಲಂಗೋಡು ಕುಟುಂಬಸ್ಥರ ಅರೆಕೆರೆ ಬೈಲು ತರವಾಡು ಮನೆಯ ಗೃಹಪ್ರವೇಶವು 2027ರ ಜನವರಿಯಲ್ಲಿ ನಡೆಯಲಿದ್ದು, ಅದರ ಅಂಗವಾಗಿ ವಿಜ್ಞಾಪನಾ ಪತ್ರ ಹಾಗೂ ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮವು ಕೈಕಂಬದ ಪಂಚಮಿ ಹಾಲ್‌ನಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿಶ್ವನಾಥ್ ಕುಬನೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಹಾಗೂ ಕಾರ್ನವರ…

Read More

ತೊಕ್ಕೊಟ್ಟಿನಲ್ಲಿ ಏಕದಿನ ಸಾಹಿತ್ಯ ಅಭಿಯಾನ; 65ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ರಸಪ್ರಶ್ನೆಯಲ್ಲಿ ಭಾಗಿ

‘ಕನ್ನಡದ ನಡಿಗೆ… ಮಕ್ಕಳ ಕಡೆಗೆ’ ಕಾರ್ಯಕ್ರಮದಲ್ಲಿ ಸಾಹಿತ್ಯ, ಧರ್ಮ ಶಿಕ್ಷಣದ ಮಹತ್ವದ ಕುರಿತು ಅರಿವು ಮಂಗಳೂರು: ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ತೊಕ್ಕೊಟ್ಟಿನ ಶ್ರೀ ನಾಗ ಕನ್ನಿಕಾ ರಕ್ತೇಶ್ವರಿ ದೈವ ಸ್ಥಾನ ಅಂಬಾವನ ಧರ್ಮ ಶಿಕ್ಷಣ ಕೇಂದ್ರದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ… ಮಕ್ಕಳ ಕಡೆಗೆ’ ಹಾಗೂ ಧರ್ಮ ಶಿಕ್ಷಣ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ…

Read More

ಶಿರಿಯ ನದಿ ಉಕ್ಕಿ ಹರಿದ ಪರಿಣಾಮ ಶಂಕರ ನಾರಾಯಣ ದೇವಸ್ಥಾನ ಜಲಾವೃತ

ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬಂದ್ಯೋಡ್ ಸಮೀಪದ ಶಿರಿಯ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿದಿದ್ದು, ನದಿ ತೀರದ ಬಯಲು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಪ್ರವಾಹದ ನೀರು ನದಿಯಿಂದ ಸುಮಾರು 500 ಮೀಟರ್ ದೂರದಲ್ಲಿರುವ ಪುರಾಣ ಪ್ರಸಿದ್ಧ ಶಿರಿಯ ಸೀರೆ ಶ್ರೀ ಶಂಕರ ನಾರಾಯಣ ದೇವಸ್ಥಾನಕ್ಕೂ ನುಗ್ಗಿದ್ದು, ಕ್ಷೇತ್ರದ ಪರಿಸರ ಸಂಪೂರ್ಣ ನೀರಿನಿಂದ ಆವರಿಸಿಕೊಂಡಿದೆ. ದೇವಸ್ಥಾನದ ಆವರಣ ಸೇರಿದಂತೆ ಗರ್ಭಗುಡಿಯವರೆಗೂ ಸುಮಾರು 3 ರಿಂದ 4 ಅಡಿ ಎತ್ತರದ ನೀರು ನಿಂತಿರುವುದರಿಂದ ಭಕ್ತರು ಮತ್ತು…

Read More

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ

ಘಟನಾ ಸ್ಥಳಕ್ಕೆ ಸಂಸದರ ಭೇಟಿ; ಸಂತ್ರಸ್ತರಿಗೆ ತಕ್ಷಣ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ…

Read More

ತಡೆಗೋಡೆ ದುರಂತ ಸಂತ್ರಸ್ತರಿಗೆ ₹5 ಲಕ್ಷ ಪರಿಹಾರ ಚೆಕ್ ವಿತರಣೆ

ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಚಿವ ಯು.ಟಿ. ಖಾದರ್ ಮಂಗಳೂರು: ತಡೆಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ ₹5 ಲಕ್ಷ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು. ಪರಿಹಾರ ವಿತರಣೆಯ ವೇಳೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಸೇರಿದಂತೆ…

Read More
error: Content is protected !!