ಧರ್ಮಸ್ಥಳ ಕೇಸ್ ; ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ಮನಾಫ್‌ ಗೆ ಎಸ್‌ಐಟಿ ನೋಟಿಸ್

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್‌ನನ್ನು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನೀಡಿದೆ.

ಬುರುಡೆ ಕೇಸ್​​ನಲ್ಲಿ ಕೇರಳ ಮೂಲದ ಯೂಟ್ಯೂಬರ್ ಮನಾಫ್​ಗೆ ಎಸ್ಐಟಿ ನೊಟೀಸ್ ನೀಟಿದೆ. ಬುರುಡೆ ಪ್ರಕರಣ ಸಂಬಂಧಿಸಿದಂತೆ ಆರಂಭದಿಂದಲೂ ತನ್ನ ಯೂಟ್ಯೂಬ್ ನಲ್ಲಿ ಈ ಮುನಾಫ್​ ನಾನಾ ಕಥೆಗಳನ್ನು ಕಟ್ಟಿದ್ದ ಎನ್ನಲಾಗ್ತಿದೆ. ಜಯಂತ್ ಬುರುಡೆ ತೆಗೆಯುವ ವಿಡಿಯೋವನ್ನು ಈತ ವೈರಲ್ ಮಾಡಿದ್ದ ಎನ್ನಲಾಗ್ತಿದೆ. ಈತನ ಬಳಿ ಅಸಲಿ ಬುರುಡೆ ವಿಡಿಯೋಗಳಿದ್ಯಾ ಎನ್ನುವ ಅನುಮಾನ ಕೂಡ ಮೂಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!